ವಂದೇ ಭಾರತ್‌ ರೈಲು ಬೆಳಗಾವಿಗೆ ವಿಸ್ತರಿಸಲು ಕ್ರಮ

| Published : Sep 17 2024, 12:51 AM IST

ವಂದೇ ಭಾರತ್‌ ರೈಲು ಬೆಳಗಾವಿಗೆ ವಿಸ್ತರಿಸಲು ಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್‌ ರೈಲನ್ನು ಬೆಳಗಾವಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್‌ ರೈಲನ್ನು ಬೆಳಗಾವಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್‌ ರೈಲು ಬೆಳಗಾವಿವರೆಗೆ ವಿಸ್ತರಣೆಗೆ ತಾಂತ್ರಿಕ ಸಮಸ್ಯೆಯ ಕಾರಣವನ್ನು ಅಧಿಕಾರಿಗಳು ಹೇಳುತ್ತಾರೆ. ಈ ಭಾಗದ ಜನತೆಯ ಬೇಡಿಕೆ ಹಿನ್ನೆಲೆಯಲ್ಲಿ ಈ ರೈಲು ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ಸಂಸದ ಜಗದೀಶ ಶೆಟ್ಟರ ಜೊತೆಗೆ ಚರ್ಚಿಸಿ ಶೀಘ್ರದಲ್ಲೇ ರೈಲು ವಿಸ್ತರಿಸಲಾಗುವುದು ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಗಲಾಟೆ ನಡೆದಿರುವ ಕೃತ್ಯ ಪೂರ್ವನಿಯೋಜಿತ ಕೃತ್ಯದಂತೆ ಕಾಣುತ್ತದೆ ಎಂದವರು ಪ್ರತಿಕ್ರಿಯಿಸಿದರು.