ಚಿಂತಾಮಣಿ: ತಾಲೂಕಿನ ಸೀಕಲ್ ಗ್ರಾಮದ ಬಿಜೆಪಿ ಜಿಲ್ಲಾಧ್ಯಕ್ಷ ರಾಮಚಂದ್ರಗೌಡ ನಿವಾಸದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷವಾಗಿ ಚಂಡಿಕಾಹೋಮ ಮತ್ತು ಸತ್ಯನಾರಾಯಣ ವೃತ ಹಮ್ಮಿಕೊಳ್ಳಲಾಗಿತ್ತು. ಈ ಪೂಜಾ ಕೈಂಕರ್ಯದಲ್ಲಿ ಕನ್ನಡದ ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್‌ಕುಮಾರ್ ಮತ್ತು ಗೀತಾ ಶಿವರಾಜ್‌ಕುಮಾರ್ ದಂಪತಿ ಭಾಗವಹಿಸಿದ್ದರು. ಇವರೊಂದಿಗೆ ಶಿಡ್ಲಘಟ್ಟ ತಾಲೂಕಿನವರಾದ ಕನ್ನಡದ ಖ್ಯಾತ ನಿರ್ದೇಶಕ ಕೆ.ಚಂದ್ರು ಭಾಗವಹಿಸಿ ಪೂಜೆ ಸಲ್ಲಿಸಿದರು. ಗ್ರಾಮಾಂತರ ಮಂಡಲ ಅಧ್ಯಕ್ಷ ಆನಂದಗೌಡ ಮತ್ತಿತರರು ಇದ್ದರು.