ಸಾರಾಂಶ
ಆದಿನಾಗಬ್ರಹ್ಮ ಮೊಗೇರ ದೈವಗಳ ಮತ್ತು ಕೊರಗ ತನಿಯ ದೈವದ ಮತ್ತು ಮಂತ್ರವಾದಿ ಗುಳಿಗನ ನೇಮ ಸಂಪನ್ನಗೊಂಡಿತು. ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಹರದೂರು ಗ್ರಾಮದ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಸಮಿತಿ ವತಿಯಿಂದ ಆದಿನಾಗಬ್ರಹ್ಮ ಮೊಗೇರ ದೈವಗಳ ಮತ್ತು ಕೊರಗ ತನಿಯ ದೈವದ ಹಾಗೂ ಮಂತ್ರವಾದಿ ಗುಳಿಗನ ನೇಮ ಶನಿವಾರ ಮತ್ತು ಭಾನುವಾರ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು.ಶನಿವಾರ ಆಯುಧ ಪೂಜೆ, ಸಂಜೆ ನಿತ್ಯ ಪೂಜೆ ಮತ್ತು ಭಂಡಾರ ಹೊರಡುವುದರ ಮೂಲಕ ನೇಮಕ್ಕೆ ಚಾಲನೆ ದೊರೆಯಿತು. ಸಂಜೆ 7 ಗಂಟೆಯ ನಂತರ ಮಂತ್ರವಾದಿ ಗುಳಿಗನ ನೇಮ ನಡೆಯಿತು. ರಾತ್ರಿ ಆದಿನಾಗಬ್ರಹ್ಮ ಮೊಗೇರ ದೈವಗಳ ಆದಿಮಾಯೆ ತನ್ನಿ ಮಾನಿಗ ಗರಡಿ ಇಳಿಯಿತು.
ಭಾನುವಾರ ಬೆಳಗ್ಗೆ 9 ಗಂಟೆಯ ನಂತರ ಕೊರಗ ತನಿಯ ದೈವದ ನೇಮೋತ್ಸವವು ನಡೆಯಿತು. ನಂತರ ಗಂಧಪ್ರಸಾದ ವಿತರಿಸಲಾಯಿತು. ರಾತ್ರಿ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.ಸುಂಟಿಕೊಪ್ಪ, ಹರದೂರು, ಮಾದಾಪುರ, ಮಡಿಕೇರಿ, ಕುಶಾಲನಗರ, ಮೈಸೂರು, ಮಂಗಳೂರು, ಸುಳ್ಯ, ಪುತ್ತೂರು, ಸಕಲೇಶಪುರ ಸೇರಿದಂತೆ ಬೇರೆ ಬೇರೆ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.