ಉತ್ತಮ ಮೌಲ್ಯ ಅಳವಡಿಸಿಕೊಳ್ಳಲು ಸಲಹೆ

| Published : Aug 14 2024, 12:52 AM IST

ಸಾರಾಂಶ

law, awareness, art, comerce, inaugeration, court

ಸುರಪುರ: ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಮಾದರಿ ಸಮಾಜ ನಿರ್ಮಾಣಕ್ಕೆ ನಾಂದಿಹಾಡಬೇಕು ಎಂದು ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ ಕಾರ್ಯದರ್ಶಿ ಡಾ. ಆದಿಶೇಷ ನೀಲಗಾರ ಹೇಳಿದರು. ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ವಾರ್ಷೀಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನಿನ ಅರಿವು ಮತ್ತು ಮಹಿಳೆಯರು ಸಮಾಜದಲ್ಲಿ ಸ್ಪರ್ಧಾತ್ಮಕವಾಗಿ, ಮಾನಸಿಕ, ದೈಹಿಕವಾಗಿ ಬಲಪಡಿಸಿಕೊಳ್ಳಬೇಕು. ಇದರಿಂದ ಮಹಿಳೆಯರ ಸಬೀಲಿಕರಣವಾಗುತ್ತದೆ ಎಂದರು. ಪ್ರಾಂಶುಪಾಲ ಬಸವರಾಜೇಶ್ವರಿ ಘಂಟಿ, ಉಪನ್ಯಾಸಕರಾದ ವೆಂಕಟೇಶ ಜಾಲಗಾರ, ತಿರುಪತಿ ಕೆಂಭಾವಿ, ಅಂಬ್ರೇಶ ಚಿಲ್ಲಾಳ, ಮಹೇಶಕುಮಾರ ಗಂಜಿ, ಹಣಮಂತ್ರಾಯಗೌಡ, ಬೀರಲಿಂಗ ದೇವತ್ಕಲ್, ಶ್ರೀದೇವಿ ನಾಯಕ, ಜ್ಯೋತಿ, ಶೋಭಾ, ಅಶ್ವೀನಿ, ಬೋದಕೇತರ ಸಿಬ್ಬಂದಿ ಶೃತಿಗೌಡ, ರೂಪಾ, ಬಸವರಾಜ ಲೂಟಿ ಇದ್ದರು.

------

ಫೋಟೊ: 12ವೈಡಿಆರ್10: ಸುರಪುರ ನಗರದ ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಭಾನುವಾರ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಆದಿಶೇಷ ನೀಲಗಾರ ಅವರು ಉದ್ಘಾಟಿಸಿದರು.

-------