ನಾಪೋಕ್ಲು: ಬೆಂಗಳೂರಿನ ಆರ್ ವಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ನಾಪೋಕ್ಲುವಿನ ಅದ್ವಿಕ ಗಣಪತಿ ಸಿಇಟಿ ಯಲ್ಲಿ ಆರನೇ ರ್ಯಾಂಕ್‌ ಪಡೆದಿದ್ದಾರೆ. ಇವರು ಸ್ಥಳೀಯ ನಿವಾಸಿ ಮೂವೆರ ಜಾಫ್ರೀ ಮತ್ತು ನೇತ್ರ ದಂಪತಿ ಪುತ್ರ.

------------------------------------

8 ರಂದು ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಸೋಮವಾರಪೇಟೆ: ನಗರ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ಜೂ. 8ರಂದು ಬೆಳಗ್ಗೆ 11. 30ಕ್ಕೆ ನಡೆಯಲಿದೆ.ಸಭೆಯಲ್ಲಿ ಶಾಸಕ ಡಾ. ಮಂತರ್ ಗೌಡ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್. ಮಂಜುನಾಥ್ ವಹಿಸಲಿದ್ದಾರೆ ಎಂದು ಸಮಿತಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.