ಸಾರಾಂಶ
ಅಗರಿ ಸಮ್ಮಾನ ಪ್ರದಾನ ಕಾರ್ಯಕ್ರಮ ಹೊಸಬೆಟ್ಟಿನ ನವಗಿರಿ ಕಲ್ಯಾಣ ಮಂಟಪದಲ್ಲಿ ಜು. 28ರಂದು ಜರುಗಿತು. ಅಗರಿ ಪ್ರಶಸ್ತಿಯನ್ನು ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಸ್ವೀಕರಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರೂ ಪ್ರಸಂಗಕರ್ತರೂ ಆಗಿದ್ದ ಅಗರಿ ಶ್ರೀನಿವಾಸ ಭಾಗವತರ ನೆನಪಿನಲ್ಲಿ ನೀಡುವ ‘ಅಗರಿ ಪ್ರಶಸ್ತಿ’ ಹಾಗು ಅವರ ಸುಪುತ್ರರೂ ಶ್ರೇಷ್ಠ ಭಾಗವತರೂ ಆಗಿದ್ದ ಅಗರಿ ರಘುರಾಮ ಭಾಗವತರ ನೆನಪಿನಲ್ಲಿ ನೀಡುವ ‘ಅಗರಿ ಸಮ್ಮಾನ’ ಪ್ರದಾನ ಕಾರ್ಯಕ್ರಮ ಹೊಸಬೆಟ್ಟಿನ ನವಗಿರಿ ಕಲ್ಯಾಣ ಮಂಟಪದಲ್ಲಿ ಜುಲೈ 28ರಂದು ಜರುಗಿತು.ಅಗರಿ ಪ್ರಶಸ್ತಿಯನ್ನು ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳರು ಸ್ವೀಕರಿಸಿದರು. ಉಡುಪಿಯ ಯಕ್ಷಗಾನ ಕಲಾರಂಗದ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಯನ್ನು ಗುರುತಿಸಿ ನೀಡಲಾದ ಅಗರಿ ಸಮ್ಮಾನವನ್ನು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವೀಕರಿಸಿದರು.
ಕಟೀಲು ಕ್ಷೇತ್ರದ ಹಿರಿಯರಾದ ಹರಿನಾರಾಯಣ ದಾಸ ಅಸ್ರಣ್ಣರು, ಶ್ರೀಪತಿ ಭಟ್, ಅಗರಿ ರಾಘವೇಂದ್ರ ರಾವ್, ಸುಮಂಗಲ ರತ್ನಾಕರ್, ವಾದಿರಾಜ ಕಲ್ಲುರಾಯ, ಕೃಷ್ಣಪ್ರಕಾಶ್ ಉಳಿತ್ತಾಯ ಮುಂತಾದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿತು.ಈ ಸಂದರ್ಭ ಯಕ್ಷಗಾನ ಕಲಾರಂಗದ ಪ್ರಧಾನ ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು.