ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿಯಲ್ಲಿ ಡಿ.27ರಿಂದ ಆರಂಭವಾಗಲಿರುವ 29ನೇ ರಾಜ್ಯ ಸ್ಕೌಟ್ಸ್- ಗೈಡ್ಸ್ ಜಾಂಬೋರೇಟ್ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಭಾರತ ಸ್ಕೌಟ್ಸ್- ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅವರು ಬೆಳಗಾವಿ ತಾಲೂಕು ಹೊನಗಾ ಗ್ರಾಮದ ಫಿನಿಕ್ಸ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಡಿ. 27ರಿಂದ ಜ.1ರವರೆಗೆ ನಡೆಯಲಿರುವ 29ನೇ ಕರ್ನಾಟಕ ರಾಜ್ಯ ಸ್ಕೌಟ್ಸ್-ಗೈಡ್ಸ್ ಜಾಂಬೋರೇಟ್ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿಯಲ್ಲಿ ಡಿ.27ರಿಂದ ಆರಂಭವಾಗಲಿರುವ 29ನೇ ರಾಜ್ಯ ಸ್ಕೌಟ್ಸ್- ಗೈಡ್ಸ್ ಜಾಂಬೋರೇಟ್ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಭಾರತ ಸ್ಕೌಟ್ಸ್- ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅವರು ಬೆಳಗಾವಿ ತಾಲೂಕು ಹೊನಗಾ ಗ್ರಾಮದ ಫಿನಿಕ್ಸ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಡಿ. 27ರಿಂದ ಜ.1ರವರೆಗೆ ನಡೆಯಲಿರುವ 29ನೇ ಕರ್ನಾಟಕ ರಾಜ್ಯ ಸ್ಕೌಟ್ಸ್-ಗೈಡ್ಸ್ ಜಾಂಬೋರೇಟ್ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.ಈ ವೇಳೆ ಮಾತನಾಡಿದ ಅವರು, ಈ ಅಭೂತಪೂರ್ವ ಕಾರ್ಯಕ್ರಮ ಹೊಸ ಇತಿಹಾಸ ಬರೆಯುವಂತಾಗಬೇಕು. ಈ ನಿಟ್ಟಿನಲ್ಲಿ ತಯಾರಿ ನಡೆಯಬೇಕು. ಅವುಗಳನ್ನು ಅತ್ಯಂತ ಅಚ್ಚುಕಟ್ಟು ಹಾಗೂ ಯಶಸ್ವಿಯಾಗಿ ಕೈಗೊಳ್ಳಬೇಕು. ನಾಡಿನ ಮೂಲೆ ಮೂಲೆಗಳಿಂದ ಸ್ಕೌಟ್ಸ್ ವಿದ್ಯಾರ್ಥಿಗಳು ಹಾಗೂ ಗೈಡ್ಸ್ ಆಗಮಿಸಲಿದ್ದಾರೆ. ಮಕ್ಕಳ ಪಾಲಿಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಅವರ ಜೀವನದ ಅವಿಸ್ಮರಣೀಯ ಕ್ಷಣವಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಯಬೇಕು ಎಂದು ತಿಳಿಸಿದರು. ಅಲ್ಲದೇ, ಪ್ರತಿ ಕ್ಯಾಂಪಿಗೂ ಭೇಟಿ ನೀಡಿ ಪೂರಕ ಮಾಹಿತಿಗಳನ್ನು ಪಡೆದು ಸೂಚನೆಗಳನ್ನು ನೀಡಿದರು.ಭಾರತ ಸ್ಕೌಟ್ಸ್ - ಗೈಡ್ಸ್ ಉಪಾಧ್ಯಕ್ಷ ಮತ್ತು ಜಿಲ್ಲಾ ಮುಖ್ಯ ಆಯುಕ್ತ ಗಜಾನನ ಮಣ್ಣಿಕೇರಿ ಮಾತನಾಡಿ, ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮ ನವ ಇತಿಹಾಸ ಬರೆಯಲಿದೆ ಎಂದು ತಿಳಿಸಿದರು.
ಪಿ.ಜಿ.ಆರ್.ಸಿಂಧ್ಯಾ ಅವರು ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿ ಗೌರವಿಸಿದರು. ಅಂತಾರಾಷ್ಟ್ರೀಯ ಹೆಚ್ಚುವರಿ ಆಯುಕ್ತ ಎ.ಎಸ್.ಮಧುಸೂದನ್, ಶಿಕ್ಷಣ ಇಲಾಖೆಯ ಅಧಿಕಾರಿ ಹಾಗೂ ಸ್ಥಾನಿಕ ಆಯುಕ್ತ ರಾಜಶೇಖರ ಚಳಗೇರಿ, ಎ.ಆರ್.ಅಂಬಗಿ, ಎನ್.ಆರ್.ಮೆಳವಂಕಿ, ಎಂ.ಎಂ.ಪಾಟೀಲ, ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೆ.ಆಂಜನೇಯ, ಭಾರತ ಸ್ಕೌಟ್ಸ್ ಗೈಡ್ಸ್ ರಾಜ್ಯ ಸಹಾಯಕ ಆಯುಕ್ತೆ ಪ್ರಭಾವತಿ ಪಾಟೀಲ, ರಾಜ್ಯ ಕೋಶಾಧಿಕಾರಿ ಟಿ.ಪ್ರಭಾಕರ, ಡಿಒಟಿ ರಾಜಕುಮಾರ ಕುಂಬಾರ, ನಾಗೇಶ ಶಿವಾಪುರ, ವಿಠ್ಠಲ.ಎಸ್, ಹನುಮಂತ ಭಜಂತ್ರಿ ಹಾಗೂ ರಾಜ್ಯ ಸ್ಕೌಟ್ಸ್ ಗೈಡ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.