ಸಾರಾಂಶ
ಮಕ್ಕಳ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಯು ಸಹ ಅಂಗನವಾಡಿ ಕೇಂದ್ರಗಳಿಂದಲೇ ಪ್ರಾರಂಭವಾಗುತ್ತವೆ. ಆದ್ದರಿಂದ ಮುತುವರ್ಜಿ ವಹಿಸಿ ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿಯು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರದ್ದಾಗಿರುತ್ತದೆ.
ಗಂಗಾವತಿ:
ಅಂಗನವಾಡಿ ಕೇಂದ್ರಗಳು ಮಕ್ಕಳ ಪ್ರಾಥಮಿಕ ಹಂತದ ಶಿಕ್ಷಣಕ್ಕೆ ಬುನಾದಿಯಾಗಿವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಸೇನಮ್ಮ ಹೇಳಿದರು.ತಾಲೂಕಿನ ಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಗತಿನಗರ ಗ್ರಾಮದ 4ನೇ ವಾರ್ಡಿನಲ್ಲಿ ಶುಕ್ರವಾರ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಯು ಸಹ ಅಂಗನವಾಡಿ ಕೇಂದ್ರಗಳಿಂದಲೇ ಪ್ರಾರಂಭವಾಗುತ್ತವೆ. ಆದ್ದರಿಂದ ಮುತುವರ್ಜಿ ವಹಿಸಿ ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿಯು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರದ್ದಾಗಿರುತ್ತದೆ ಎಂದರು.ಅಂಗನವಾಡಿ ಕೇಂದ್ರಗಳು ಮಕ್ಕಳ ಭವಿಷ್ಯ ನಿರ್ಧರಿಸುವ ಕೇಂದ್ರಗಳಾಗಿದ್ದು, ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸೇರಿಸಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ಪಿಡಿಒ ಬಸವರಾಜ ಗೌಡ್ರು ಮಾತನಾಡಿ, ಬಹು ವರ್ಷದ ಬೇಡಿಕೆಯಾದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಸಚಿವ ಶಿವರಾಜ್ ತಂಗಡಗಿ ಹಾಗೂ ಹಿಂದಿನ ಶಾಸಕರ ಸಹಕಾರದಿಂದ ನಿರ್ಮಾಣಗೊಂಡಿದೆ. ಇನ್ನೂ ಈ ಕಟ್ಟಡ ನಿರ್ಮಾಣ ಸೇರಿದಂತೆ ಅಂಗನವಾಡಿಗಳಿಗೆ ಕಾಂಪೌಂಡ್ ನಿರ್ಮಾಣವು ಅತ್ಯವಶ್ಯಕವಾಗಿತ್ತು. ಈ ನಿಟ್ಟಿನಲ್ಲಿ ಪಂಚಾಯಿತಿ ಸದಸ್ಯರ ಒತ್ತಾಸೆ ಮತ್ತು ಮನವಿ ಮೇರೆಗೆ ತಾಲೂಕು ಪಂಚಾಯಿತಿ ಅನುದಾನದಿಂದ ಕಾಂಪೌಂಡ್ ನಿರ್ಮಿಸಲಾಗಿದೆ. ಮಕ್ಕಳಿಗೆ ಪ್ರಾಥಮಿಕ ಪೂರ್ವ ಶಿಕ್ಷಣ ಒದಗಿಸಲು ಅಂಗನವಾಡಿ ಕೇಂದ್ರ ಪಾತ್ರ ದೊಡ್ಡದಿದ್ದು, ಅಂಗನವಾಡಿಗಳ ಅಭಿವೃದ್ಧಿಗೆ ಪಂಚಾಯಿತಿ ಸದಾ ಸಿದ್ಧವಿದೆ ಎಂದು ತಿಳಿಸಿದರು.ಈ ವೇಳೆ ತಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ರಫೀ, ಗ್ರಾಪಂ ಸದಸ್ಯೆ ಕೆ. ರೋಹಿಣಿ ಕೊಟ್ರೇಶ್, ನಜೀಯಾಮನ್ಸೂರ್ ಬೇಗ್, ವಿರೂಪಾಕ್ಷಪ್ಪ ಹೇಮಗುಡ್ಡ, ಶಿವಲಿಂಗಪ್ಪ, ಹೆಬ್ಬಾಳ ನಾಗರಾಜ್, ಹನುಮಂತರಾಯ, ಗುಂಡಯ್ಯಸ್ವಾಮಿ ಹಿರೇಮಠ, ಮಹಾದೇವಪ್ಪ, ಅಯ್ಯಪ್ಪ ದಳಪತಿ, ನಾಗಭೂಷಣ ಸ್ವಾಮಿ, ಜ್ಞಾನೇಶ್ವರಸ್ವಾಮಿ, ರಾಜಾಸಾಬ ಮೇಸ್ತ್ರಿ ಸೇರಿದಂತೆ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಚಂದ್ರಕಲಾ, ಕಾರ್ಯಕರ್ತೆ ಜಯಮ್ಮ, ನಾಗರತ್ನ, ದುರಗಮ್ಮ, ನಾಗಮ್ಮ ಮತ್ತು ಅಂಗನವಾಡಿ ಕೇಂದ್ರಗಳ ಸಹಾಯಕಿಯರು ಇದ್ದರು.