ಸಾರಾಂಶ
ಕಿನ್ನಿಗೋಳಿಯ ರಾಜರತ್ನಪುರ ಸರಾಪ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆದ ಕಿನ್ನಿಗೋಳಿ-ಮೆನ್ನಬೆಟ್ಟು ಭ್ರಾಮರೀ ಮಹಿಳಾ ಸಮಾಜ 18 ನೇ ವಾರ್ಷಿಕೋತ್ಸವ ಹಾಗು ಆಟಿಡ್ ಪಡ್ಸಲೆದ ಪೊರ್ಲು ಕಾರ್ಯಕ್ರಮವನ್ನು ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಉದ್ಘಾಟಿಸಿದರು.
ಕನ್ನಡಪ್ರಭವಾರ್ತೆ ಮೂಲ್ಕಿ
ಕಿನ್ನಿಗೋಳಿಯ ರಾಜರತ್ನಪುರ ಸರಾಪ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆದ ಕಿನ್ನಿಗೋಳಿ-ಮೆನ್ನಬೆಟ್ಟು ಭ್ರಾಮರೀ ಮಹಿಳಾ ಸಮಾಜ 18 ನೇ ವಾರ್ಷಿಕೋತ್ಸವ ಹಾಗು ಆಟಿಡ್ ಪಡ್ಸಲೆದ ಪೊರ್ಲು ಕಾರ್ಯಕ್ರಮವನ್ನು ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಉದ್ಘಾಟಿಸಿದರು.ಭ್ರಾಮರೀ ಮಹಿಳಾ ಸಮಾಜ ಗೌರವಾಧ್ಯಕ್ಷೆ ಸಾವಿತ್ರಿ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲೆಯ ತುಳು ಶಿಕ್ಷಕಿ ಸುಷ್ಮಾ ದುರ್ಗಾಪ್ರಸಾದ್ ಆಟಿ ಆಚರಣೆಯ ಬಗ್ಗೆ ಮಾಹಿತಿ ನೀಡಿದರು. ಸರಾಫ್ ಅಣ್ಣಯ್ಯಾಚಾರ್ಯ ಸಭಾಭವನ ಸಮಿತಿ ರಾಜರತ್ನಪುರದ ಅಧ್ಯಕ್ಷ ಪೃಥ್ವಿರಾಜ್ ಆಚಾರ್ಯ, ಆದರ್ಶ ಬಳಗ , ಕೊಡೆತ್ತೂರುನ ಅಧ್ಯಕ್ಷ ಯುವರಾಜ ಶೆಟ್ಟಿ, ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ, ಕಿನ್ನಿಗೋಳಿಯ ಅಧ್ಯಕ್ಷ ಜಗದೀಶ್ ಆಚಾರ್ಯ, ಪ್ರಭಾಕರ ಆಚಾರ್ಯ, ಸಾರ್ವಜನಿಕ ಶ್ರೀ ಬಾಲಗಣೇಶೋತ್ಸವ ಸಮಿತಿ, ರಾಜರತ್ನಪುರದ ಅಧ್ಯಕ್ಷ ಸತೀಶ್ ಪೂಜಾರಿ, ಭ್ರಾಮರೀ ಮಹಿಳಾ ಸಮಾಜದ ಅಧ್ಯಕ್ಷೆ ಮೀರಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಬಿತಾ ನರೇಶ್ ರನ್ನು ಸನ್ಮಾನಿಸಲಾಯಿತು. ರೇವತಿ ಪುರುಷೋತ್ತಮ ವರದಿ ವಾಚಿಸಿದರು. ಅನೂಷ ಕರ್ಕೆರಾ ಸನ್ಮಾನ ಪತ್ರ ವಾಚಿಸಿದರು. ಅಂಗನವಾಡಿ ಶಿಕ್ಷಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು, ಮೀರಾ ಶೆಟ್ಟಿ ಸ್ವಾಗತಿಸಿದರು, ಅಮಿತಾ ವಂದಿಸಿದರು.