ಸಾರಾಂಶ
ತಾಲೂಕಿನ ಮಾದಾಪುರದ ಕಾರೇಕಾಡಿನ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ಪೂಜೆ ಎರಡು ದಿನಗಳ ಕಾಲ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕಿನ ಮಾದಾಪುರದ ಕಾರೇಕಾಡಿನ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ಪೂಜೆ ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಶ್ರದ್ಧಾ ಭಕ್ತಿಯಿಂದ ನಡೆಯಿತು.ಪೂಜಾ ಅಂಗವಾಗಿ ದೇವಾಲಯದಲ್ಲಿ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜೆಗಳನ್ನು ಕಾರ್ಯಕ್ರಮಗಳನ್ನು ಅರ್ಚಕರಾದ ಪ್ರಸನ್ನ ಭಟ್ ನೇತೃತ್ವದಲ್ಲಿ ನಡೆಯಿತು. ದೇವಾಲಯಕ್ಕೆ ಆಗಮಿಸಿದ ಎಲ್ಲರಿಗೂ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕಿಶೋರ್, ಪದಾಧಿಕಾರಿಗಳಾದ ರಾಜೇಶ್, ಪ್ರಸಾದ್, ಜಯರಾಮ್, ಗ್ರಾಮಸ್ಥರು ಭಾಗವಹಿಸಿದ್ದರು.-------------------------------------
ಮದ್ಯ ಸೇವಿಸಿ ಗಲಾಟೆ: ಆರೋಪಿಗಳಿಗೆ ಆಸ್ಪತ್ರೆ ಸ್ವಚ್ಛಗೊಳಿಸಲು ಆದೇಶಿಸಿದ ನ್ಯಾಯಾಧೀಶರುಕನ್ನಡಪ್ರಭವಾರ್ತೆ ಸೋಮವಾರಪೇಟೆಮದ್ಯಸೇವಿಸಿ ಸಾರ್ವಜನಿಕವಾಗಿ ಗಲಾಟೆ ಮಾಡಿ ಶಾಂತಿ ಕದಡುತ್ತಿದ್ದ ಮೂವರು ಆರೋಪಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಒಂದು ದಿನದ ಸ್ವಚ್ಛತಾ ಕೆಲಸ ಮತ್ತು ಒಂದು ಸಾವಿರ ರು.ಗಳ ದಂಡ ವಿಧಿಸಿ ಸೋಮವಾರಪೇಟೆ ನ್ಯಾಯಾಲಯ ಆದೇಶ ನೀಡಿದೆ.ಪಟ್ಟಣದಲ್ಲಿ ದೀಪಕ್, ಕೌಶಿಕ್, ಕಾರ್ತಿಕ್ ಎಂಬುವರು ಮದ್ಯಸೇವಿಸಿ ಗಲಾಟೆ ಮಾಡುತ್ತಿದ್ದ ಸಂದರ್ಭ ಪಟ್ಟಣದ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 275 ರಂತೆ ನ್ಯಾಯಾಲಯದಲ್ಲಿ ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಅವರು ಬುಧವಾರ ಶಿಕ್ಷೆ ವಿಧಿಸಿದ್ದಾರೆ.ಸೋಮವಾರಪೇಟೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಗೋಪಾಲ್ ಸಮ್ಮುಖದಲ್ಲಿ ಆರೋಪಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸಿದರು.