ಸಾರಾಂಶ
ಶಿವಮೊಗ್ಗ: ಸರ್ಕಾರಿ ಕಾಲೇಜಿನಲ್ಲಿ ಅನೇಕ ಸೌಲಭ್ಯಗಳನ್ನು ಇವೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪೂರಕ ವಾತಾವರಣವೂ ಇದೆ. ವಿದ್ಯಾರ್ಥಿಗಳಿಗೆ ಇಚ್ಛಾಶಕ್ತಿ ಇದ್ದರೆ ಎಲ್ಲವನ್ನೂ ಗೆಲ್ಲಬಹುದು ಎಂದು ಪ್ರಾಂಶುಪಾಲ ಪ್ರೊ. ಚನ್ನೇಶ್ ಹೇಳಿದರು.
ಶಿವಮೊಗ್ಗ: ಸರ್ಕಾರಿ ಕಾಲೇಜಿನಲ್ಲಿ ಅನೇಕ ಸೌಲಭ್ಯಗಳನ್ನು ಇವೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪೂರಕ ವಾತಾವರಣವೂ ಇದೆ. ವಿದ್ಯಾರ್ಥಿಗಳಿಗೆ ಇಚ್ಛಾಶಕ್ತಿ ಇದ್ದರೆ ಎಲ್ಲವನ್ನೂ ಗೆಲ್ಲಬಹುದು ಎಂದು ಪ್ರಾಂಶುಪಾಲ ಪ್ರೊ. ಚನ್ನೇಶ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ ಸಮಾರೋಪದಲ್ಲಿ ಸ್ಪರ್ಧಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಒಳ್ಳೆಯ ಅವಕಾಶಗಳಿವೆ. ಇಂದು ಕ್ರೀಡೆಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳಿವೆ. ಕಾಲೇಜಿನಲ್ಲಿ ಅಧ್ಯಾಪಕರು ಒಂದು ತಂಡವಾಗಿ ಕೆಲಸ ಮಾಡಿದರೆ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ಈ ಕ್ರೀಡಾ ಸ್ಪರ್ಧೆ ತೋರಿಸಿಕೊಟ್ಟಿದೆ ಎಂದರು.
ಪರಿವೀಕ್ಷಕರಾಗಿ ಆಗಮಿಸಿದ ನಾರಾಯಣ ಮಾತನಾಡಿದರು.ಕೆಜಿಸಿಟಿ ವಲಯ ಅಧ್ಯಕ್ಷ ಅನಿಲ್ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ವಸಂತಕುಮಾರ್, ಕುವೆಂಪು ವಿಶ್ವವಿದ್ಯಾಲಯದ ಕ್ರೀಡಾ ಸಹಾಯಕ ನಿರ್ದೇಶಕ ರವೀಂದ್ರ ಗೌಡ ಅಭಿಪ್ರಾಯ ಹಂಚಿಕೊಂಡರು. ಶಿವಮೊಗ್ಗದ ಪುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿವಾಸ ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಿದರು.
ಪ್ರಾಧ್ಯಾಪಕ ರಾಜ್ ಕುಮಾರ, ವಾಣಿಶ್ರೀ, ಡಾ.ಸೀಮಾ, ಡಾ.ಅಣ್ಣಪ್ಪ ಎನ್. ಮಳೀಮಠ್, ಡಾ. ಎಸ್.ಎಚ್. ಪ್ರಸನ್ನ, ಎನ್.ಆರ್. ಹೆಗಡೆ, ಸ್ವಪ್ನ, ಕೆ.ಪಿ.ಪವಿತ್ರ, ಡಾ.ಅಶ್ವಿನಿ ಹಾಗೂ ಇತರ ಕಾಲೇಜಿನ ಕ್ರೀಡಾ ಸಂಚಾಲಕರು ಹಾಜರಿದ್ದರು.