ಸಾರಾಂಶ
ಜ.೧೩ ರಂದು ಮಧ್ಯಾಹ್ನ ೧ ಗಂಟೆಗೆ ಸಚಿವ ಶಿವಾನಂದ ಪಾಟೀಲರಿಗೆ ಬಸವನಬಾಗೇವಾಡಿಯಲ್ಲಿ ಮನವಿ ಸಲ್ಲಿಸಲಾಗುವುದು.
ಬಸವನಬಾಗೇವಾಡಿ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಗೆ ಹಾಗೂ ರಾಜ್ಯ ಸಂಜೀವಿನಿ ಯೋಜನೆ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಆಗ್ರಹಿಸಿ ಜ.೧೩ ರಂದು ಮಧ್ಯಾಹ್ನ ೧ ಗಂಟೆಗೆ ಸಚಿವ ಶಿವಾನಂದ ಪಾಟೀಲರಿಗೆ ಬಸವನಬಾಗೇವಾಡಿಯಲ್ಲಿ ಮನವಿ ಸಲ್ಲಿಸಲಾಗುವುದು. ತಾಲೂಕಿನ ಸಮಸ್ತ ಸರ್ಕಾರಿ ನೌಕರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಾನಂದ ಮಂಗಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.