ಬಸವನಬಾಗೇವಾಡಿ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಗೆ ಹಾಗೂ ರಾಜ್ಯ ಸಂಜೀವಿನಿ ಯೋಜನೆ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಆಗ್ರಹಿಸಿ ಜ.೧೩ ರಂದು ಮಧ್ಯಾಹ್ನ ೧ ಗಂಟೆಗೆ ಸಚಿವ ಶಿವಾನಂದ ಪಾಟೀಲರಿಗೆ ಬಸವನಬಾಗೇವಾಡಿಯಲ್ಲಿ ಮನವಿ ಸಲ್ಲಿಸಲಾಗುವುದು. ತಾಲೂಕಿನ ಸಮಸ್ತ ಸರ್ಕಾರಿ ನೌಕರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಾನಂದ ಮಂಗಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೧೩ಕ್ಕೆ ಸಚಿವ ಶಿವಾನಂದ ಪಾಟೀಲರಿಗೆ ಮನವಿ
ಜ.೧೩ ರಂದು ಮಧ್ಯಾಹ್ನ ೧ ಗಂಟೆಗೆ ಸಚಿವ ಶಿವಾನಂದ ಪಾಟೀಲರಿಗೆ ಬಸವನಬಾಗೇವಾಡಿಯಲ್ಲಿ ಮನವಿ ಸಲ್ಲಿಸಲಾಗುವುದು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.