ಸಾರಾಂಶ
ದಾಬಸ್ಪೇಟೆ: ಪ್ರತಿಯೊಬ್ಬರು ಹಣೆಯ ಮೇಲೆ ವಿಭೂತಿ ಧರಿಸುವುದು ಹಿಂದಿನಿಂದ ನಡೆದು ಬಂದ ಸಂಪ್ರದಾಯ, ಇದನ್ನು ಮುಂದುವರೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ಇಂದಿನ ಯುವಪೀಳಿಗೆಯ ಮೇಲಿದೆ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.
ಸೋಂಪುರ ಹೋಬಳಿಯ ಶಿವಗಂಗೆಯಲ್ಲಿ ಮೇಲಣಗವಿ ಮಠದ ವತಿಯಿಂದ ಹಮ್ಮಿಕೊಂಡಿದ್ದ ಮಾಸಿಕ ಧರ್ಮ ಚಿಂತನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ನಾವು ಹಣೆಗೆ ಹಚ್ಚುವ ವಿಭೂತಿಗೆ ವಿಶೇಷ ಸ್ಥಾನಮಾನವಿದೆ. ವಿಭೂತಿಯನ್ನು ಧರಿಸುವುದರಿಂದ ಕೆಟ್ಟ ಶಕ್ತಿಗಳಿಂದ ರಕ್ಷಣೆ ಸಿಗುತ್ತದೆ ಎಂಬ ನಂಬಿಕೆಯಿದೆ. ಹಿಂದಿನಿಂದಲೂ ಧಾರ್ಮಿಕ ಚಿಂತನಾ ಸಭೆಯನ್ನು ಮೇಲಣಗವಿ ಮಠದ ಪೂಜ್ಯರು ಮಾಡುತ್ತಾ ಬರುತ್ತಿದ್ದಾರೆ. ಯುವಕರು ಹೆಚ್ಚಾಗಿ ಧಾರ್ಮಿಕ ಚಿಂತನಾ ಸಭೆಯಲ್ಲಿ ಭಾಗವಹಿಸಬೇಕು. ನಾವು ಜೀವನದಲ್ಲಿ ಯಾವ ರೀತಿ ಬದುಕಬೇಕು ಎಂದು ತಿಳಿಸುವುದೇ ಧರ್ಮ, ಹೇಗೆ ಬದುಕಬೇಕು ಎಂದು ತಿಳಿಸುವವರೇ ಧರ್ಮಗುರುಗಳಾಗಿದ್ದು, ಯುವಜನತೆ ಧರ್ಮಸಂಹಿತೆ ಬಗ್ಗೆ ಚಿಂತನೆ ಮಾಡಬೇಕಿದೆ ಎಂದರು.
ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷರಾದ ಹೊನ್ನಗಂಗಶೆಟ್ಟಿ, ಉಮಾಶಂಕರ್, ಪಂಚಾಕ್ಷರಿ, ಸದಸ್ಯ ಮನುಪ್ರಸಾದ್, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಹೊನ್ನರಾಯನಹಳ್ಳಿ ಲೋಕೇಶ್, ರಾಜಣ್ಣ ಮುಪ್ಪಿನಸ್ವಾಮಿ, ವಕೀಲ ಮಹೇಶ್, ಹೊಸಳ್ಳಿಬಾಬು, ಕಂಬಾಳು ಬಾಬು, ನಂದೀಶ್, ರುದ್ರೇಶ್, ದಿನೇಶ್, ರಾಜಣ್ಣ, ಅಭಾವಿಪ ಮಹಿಳಾ ಘಟಕದ ಅಧ್ಯಕ್ಷೆ ವೇದಾವತಿ, ಮಂಜುಳಾ, ಪವಿತ್ರಾ, ಶಿಕ್ಷಕರಾದ ವೀರೇಶ್, ವಿಶ್ವನಾಥ್, ಯೋಗೇಶ್ವರಿ, ಜಗದೀಶ್ ಇತರರಿದ್ದರು.ಪೋಟೋ 3 :
ಸೋಂಪುರ ಹೋಬಳಿಯ ಶಿವಗಂಗೆಯಲ್ಲಿ ಮೇಲಣಗವಿ ಮಠದ ವತಿಯಿಂದ ಹಮ್ಮಿಕೊಂಡಿದ್ದ ಮಾಸಿಕ ಧರ್ಮ ಚಿಂತನಾ ಸಭೆಯನ್ನು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸಿದರು.