ಕೊಟ್ಟೂರಿನ ಬನಶಂಕರಿ ದೇವಸ್ಥಾನದ ಬಳಿ ಗುರುವಾರ ಬಿರುಗಾಳಿಗೆ ಮರವೊಂದು ಬಿದ್ದು ಹಾನಿ ಸಂಭವಿಸಿದ ಸ್ಥಳ ಪರಿಶೀಲನೆಯನ್ನು ಶಾಸಕ ಕೆ.ನೇಮಿರಾಜ ನಾಯ್ಕ ನಡೆಸಿದರು. | Kannada Prabha
Image Credit: KP
ಕೊಟ್ಟೂರಿಗೆ ಪ್ರತ್ಯೇಕ ಕುಡಿಯುವ ನೀರು ಯೋಜನೆ ಜಾರಿಗೊಳಿಸುವ ಕಾಮಗಾರಿಗೆ ಡಿಪಿಎಆರ್ ಆಗಿದೆ. ಅದು ಕೂಡ ಶೀಘ್ರವೇ ಚಾಲನೆಗೊಳ್ಳುವ ಸಂಭವವಿದೆ.
ಕೊಟ್ಟೂರು: ಚುನಾವಣೆ ನೀತಿ ಸಮಿತಿ ಮುಗಿದ ಕೂಡಲೇ ಕೊಟ್ಟೂರು ಪಟ್ಟಣ ಮತ್ತು ತಾಲೂಕಿನಲ್ಲಿ ಹಮ್ಮಿಕೊಂಡಿರುವ ಭರಪೂರದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಸರ್ಕಾರದ ಅನುದಾನ ಇಲ್ಲದೆಯೂ ಪರ್ಯಾಯ ಮೂಲಗಳ ಮೂಲಕ ಅನುದಾನ ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ನೇಮಿರಾಜ ನಾಯ್ಕ ಹೇಳಿದರು.
ಗಾಳಿಗೆ ಮರ, ವಿದ್ಯುತ್ ಕಂಬ ನೆಲಕ್ಕುರುಳಿ ಸಂಭವಿಸಿದ ಹಾನಿ ಪ್ರದೇಶಕ್ಕೆ ಭೇಟಿ ಪರಿಶೀಲಿಸಿದ ಶಾಸಕರು, ಈಗಾಗಲೇ ಕೊಟ್ಟೂರಿಗೆ ಪ್ರತ್ಯೇಕ ಕುಡಿಯುವ ನೀರು ಯೋಜನೆ ಜಾರಿಗೊಳಿಸುವ ಕಾಮಗಾರಿಗೆ ಡಿಪಿಎಆರ್ ಆಗಿದೆ. ಅದು ಕೂಡ ಶೀಘ್ರವೇ ಚಾಲನೆಗೊಳ್ಳುವ ಸಂಭವವಿದೆ ಎಂದರು.
ಬಸ್ ನಿಲ್ದಾಣವನ್ನು ಪುನರ್ ಅಭಿವೃದ್ಧಿ ಪಡಿಸುವ ₹3.50 ಕೋಟಿ ವೆಚ್ಚದಲ್ಲಿ ಕೆಕೆಆರ್ಟಿಸಿ ಮತ್ತು ಡೆಲ್ಟಾ ಅನುದಾನದಡಿ ಕಾಮಗಾರಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆದಿದೆ. ಕೆಲ ದಿನಗಳಲ್ಲಿ ಇದರ ಕಾಮಗಾರಿ ನಡೆದು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
ಕೊಟ್ಟೂರಿನಲ್ಲಿ ಮುಂಬರುವ ವರ್ಷದೊಳಗೆ ಹಲವು ಬಗೆಯ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. ಬಸ್ ನಿಲ್ದಾಣದ ಜೊತೆಗೆ ಬಸ್ ಡಿಪೋವನ್ನು ಪಟ್ಟಣದ ಹೊರ ಹೊಲಯದಲ್ಲಿ ನಿರ್ಮಿಸಲೆಂದೇ ಜಮೀನು ಪರಿಶೀಲಿಸುವ ಕಾರ್ಯ ನಡೆದಿದೆ ಎಂದು ಅವರು ಹೇಳಿದರು.
ಹಾಲಿ ಇರುವ ಬಸ್ನಿಲ್ದಾಣದ ಬಳಿ ಬೃಹತ್ ಕಾಲುವೆ ಮಳೆ ನೀರಿನಿಂದ ತುಂಬಿ ಮುಂದೆ ಹರಿಯದಂತಾಗಲು ಚರಂಡಿ ತುಂಬೆಲ್ಲ ಪ್ಲಾಸ್ಟಿಕ್ ಮತ್ತಿತರರ ಸಾಮಾನುಗಳನ್ನು ಅಂಗಡಿಗಳವರು ಹಾಕುತ್ತಿರುವುದು ಸರಿಯಲ್ಲ. ಕೂಡಲೇ ಪಪಂ ಆಡಳಿತ ಈ ಸಂಬಂಧ ಅಂಗಡಿಯವರಿಗೆ ನೊಟೀಸ್ ಜಾರಿಗೊಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾಗಬೇಕು ಎಂದು ಮುಖ್ಯಾಧಿಕಾರಿಗೆ ಸೂಚಿಸಿದರು.
ಜಿಪಂ ಮಾಜಿ ಸದಸ್ಯ ಎಂ.ಎಂ.ಜೆ ಹರ್ಷವರ್ಧನ್, ಕೊಟ್ಟೂರು ತಹಶೀಲ್ದಾರ್ ಅಮರೇಶ್ ಜಿ.ಕೆ., ಪಪಂ ಮುಖ್ಯಾಧಿಕಾರಿ ವೈ.ಎಂ. ತುಕಾರಾಂ, ಎಪಿಎಂಸಿ ಮಾಜಿ ಅಧ್ಯಕ್ಷ ಬೂದಿ ಶಿವಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯರಾದ ಬಾವಿಕಟ್ಟಿ ಶಿವಾನಂದ, ಮರಬದ ಕೊಟ್ರೇಶ್, ಮಾಜಿ ಸದಸ್ಯರಾದ ಎಚ್.ಗುರುಬಸವರಾಜ, ಡಿಸ್ ಮಂಜುನಾಥ, ಗುರು, ಬಸವರಾಜ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.