7ರಂದು ಬೆಂಗ್ಳೂರಲ್ಲಿ ಆಶಾಗಳ ಪ್ರತಿಭಟನೆ

| Published : Jan 03 2025, 12:31 AM IST

ಸಾರಾಂಶ

ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜ.7ರಂದು ಬೆಳಗ್ಗೆ 10.30ರಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ ಕುಕ್ಕವಾಡ ಹೇಳಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜ.7ರಂದು ಬೆಳಗ್ಗೆ 10.30ರಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ ಕುಕ್ಕವಾಡ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ₹15 ಸಾವಿರ ನಿಶ್ಚಿತ ಗೌರವಧನ ನಿಗದಿ, ನಗರ ಆಶಾಗಳಿಗೆ ಕನಿಷ್ಠ ₹2 ಸಾವಿರ ಗೌರ‍ವಧನ ಹೆಚ್ಚಿಸಬೇಕು, ರಾಜ್ಯಾದ್ಯಂತ ಬಾಕಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು, ಮೊಬೈಲ್ ಕೆಲಸಗಳ ಮೊದಲು ಕೈಬಿಡಬೇಕು. ಮೊಬೈಲ್ ಡೇಟಾ ಒದಗಿಸಿ, ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು. ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಚ್ಯುಟಿ, ಪಿಎಫ್‌-ಇಎಸ್ಐ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬಿತ್ಯಾದಿ ಬೇಡಿಕೆಗಳಿಗಾಗಿ ಪ್ರತಿಭಟಿಸಲಾಗುವುದು ಎಂದು ಮಂಜುನಾಥ ತಿಳಿಸಿದರು.

ಎಐಯುಟಿಯುಸಿ ಮುಖಂಡರಾದ ತಿಪ್ಪೇಸ್ವಾಮಿ ಅಣಬೇರು, ಸಂಘದ ಪರ್ವೀನ್ ಬಾನು, ಬಿ.ಹಾಲಮ್ಮ, ಎಸ್.ಆರ್.ಇಂದಿರಾ, ಹಳದಮ್ಮ ಇತರರು ಇದ್ದರು.

- - - -2ಕೆಡಿವಿಜಿ4: