ವಿಜಯಪುರ: ನಗರದ ಇಬ್ರಾಹಿಂ ರೋಜಾ, ಸಾಯಿ ಪಾರ್ಕ್, ಬಂಜಾರಾ ಕ್ರಾಸ್ ಸೇರಿದಂತೆ ವಿವಿಧೆಡೆ ಅನಧಿಕೃತ ಅಡ್ಡೆಗಳ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು 8 ಗೃಹೋಪಯೋಗಿ ಎಲ್ಪಿಜಿ ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ. ಗೃಹೋಪಯೋಗಿ ಸಿಲಿಂಡರ್ಗಳನ್ನು ಅಕ್ರಮವಾಗಿ ವಾಣಿಜ್ಯೋದ್ಯಮಕ್ಕೆ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ದಾಳಿ ಮಾಡಿದ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ನಯೀಮ ಅತ್ತಾರ ಹಾಗೂ ಸಿಬ್ಬಂದಿ ಒಟ್ಟು 8 ಗ್ಯಾಸ್ ತುಂಬಿದ ಗೃಹೋಪಯೋಗಿ ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ದ್ರವೀಕೃತ ಪೆಟ್ರೋಲಿಯಂ ಅನಿಲ (ಸರಬರಾಜು ಮತ್ತು ವಿತರಣೆಯ ನಿಯಂತ್ರಣ) ಆದೇಶ 2000 ಉಲ್ಲಂಘನೆ ಮೇರೆಗೆ ಅಗತ್ಯ ವಸ್ತುಗಳ ಕಾಯ್ದೆ 1955ರ ಸೆಕ್ಷನ್-7ರ ಮೇರೆಗೆ ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಅಡ್ಡೆಗಳ ಮೇಲೆ ದಾಳಿ: 8 ಸಿಲಿಂಡರ್ ವಶ
ವಿಜಯಪುರ: ನಗರದ ಇಬ್ರಾಹಿಂ ರೋಜಾ, ಸಾಯಿ ಪಾರ್ಕ್, ಬಂಜಾರಾ ಕ್ರಾಸ್ ಸೇರಿದಂತೆ ವಿವಿಧೆಡೆ ಅನಧಿಕೃತ ಅಡ್ಡೆಗಳ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು 8 ಗೃಹೋಪಯೋಗಿ ಎಲ್ಪಿಜಿ ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ. ಗೃಹೋಪಯೋಗಿ ಸಿಲಿಂಡರ್ಗಳನ್ನು ಅಕ್ರಮವಾಗಿ ವಾಣಿಜ್ಯೋದ್ಯಮಕ್ಕೆ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ದಾಳಿ ಮಾಡಿದ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ನಯೀಮ ಅತ್ತಾರ ಹಾಗೂ ಸಿಬ್ಬಂದಿ ಒಟ್ಟು 8 ಗ್ಯಾಸ್ ತುಂಬಿದ ಗೃಹೋಪಯೋಗಿ ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.