ಸಾರಾಂಶ
ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿ, ಮಾನಭಂಗಕ್ಕೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ ಅಪರ ಸಿವಿಲ್ ನ್ಯಾಯಾಧೀಶರು 4 ವರ್ಷಗಳ ಸೆರೆವಾಸ, 5 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.
ಕೊಳ್ಳೇಗಾಲ: ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿ, ಮಾನಭಂಗಕ್ಕೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ ಅಪರ ಸಿವಿಲ್ ನ್ಯಾಯಾಧೀಶರು 4 ವರ್ಷಗಳ ಸೆರೆವಾಸ, 5 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.
ಮೈಸೂರು ಜಿಲ್ಲೆ, ಸಿದ್ದಲಿಂಗಪುರ ಗ್ರಾಮದ ವಾಸಿ ಬಸ್ ಕ್ಲಿನರ್ ಕಾರ್ತಿಕ್ ಎಂಬಾತ ಸೆರೆವಾಸಕ್ಕೆ ಗುರಿಯಾದ ಆರೋಪಿ. ಈತ ಕೊಳ್ಳೇಗಾಲದ 2019 ರ ಅಕ್ಟೋಬರ್ 26 ರಂದು ಜೆ ಎಸ್ ಎಸ್ ಕಾಲೇಜು ಸೇತುವೆ ಸಮೀಪದಲ್ಲಿ ಜಯಲಕ್ಷ್ಮಿ ಎಂಬ ಮಹಿಳೆಯನ್ನು ಕೈ ಹಿಡಿದು ಎಳೆದಾಡಿ ಅನುಚಿತವಾಗಿ ನಡೆಸುಕೊಂಡು, ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆಯನ್ನು ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಈ ಸಂಬಂಧ ಮಹಿಳೆ ಪಟ್ಟಣ ಠಾಣೆಗೆ ದೂರು ನೀಡಿದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು, ಅಂದಿನ ಪಿಎಸ್ಐ ರಾಜೇಂದ್ರ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಸಂಬಂಧ ಸರ್ಕಾರಿ ಅಭಿಯೋಜಕರಾದ ಮಂಜುನಾಥ್ ಅವರು ಆರೋಪಿ ವಿರುದ್ದವಾಗಿ ವಾದ ಮಂಡಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಅಪರ ಸಿವಿಲ್ ನ್ಯಾಯಾಧೀಶರಾದ ಟಿ ಸಿ ಶ್ರೀಕಾಂತ್ ಅವರು ಕೂಲಂಕುಷ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ 4 ವರ್ಷಗಳ ಕಾಲ ಸೆರೆವಾಸ ಮತ್ತು 5 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.