ಸಾರಾಂಶ
ಇಲ್ಲಿನ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ರತ್ನಾಕರ ಸಿ.ಕುನಗೋಡು ಅವರ "ಎದೆ ನೆಲದ ಕಾವು " ಕವನ ಸಂಕಲನಕ್ಕೆ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ ನೀಡುವ ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ಲಭ್ಯವಾಗಿದೆ.
ಸಾಗರ: ಇಲ್ಲಿನ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ರತ್ನಾಕರ ಸಿ.ಕುನಗೋಡು ಅವರ "ಎದೆ ನೆಲದ ಕಾವು " ಕವನ ಸಂಕಲನಕ್ಕೆ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ ನೀಡುವ ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ಲಭ್ಯವಾಗಿದೆ. ರಾಯಚೂರಿನಲ್ಲಿ ಜೂ.೨೮, ೨೯ರಂದು ನಡೆಯಲಿರುವ ೧೧ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ರತ್ನಾಕರ ಅವರಿಗೆ ಈಗಾಗಲೇ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ, ಸಹೃದಯ ಕಾವ್ಯ ಪ್ರಶಸ್ತಿ, ಸು.ರಂ.ಎಕ್ಕುಂಡಿ ಶತಮಾನೋತ್ಸವ ಕಾವ್ಯ ಪ್ರಶಸ್ತಿ ಲಭ್ಯವಾಗಿದೆ.