ಅಯ್ಯಪ್ಪ ಸ್ವಾಮಿ ದೇವಳದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ

| Published : Mar 09 2025, 01:49 AM IST

ಸಾರಾಂಶ

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಪೂಜಾ ಕಾರ್ಯಕ್ರಮಗಳು ನಡೆಯಿತು.

ಕುಶಾಲನಗರ: ಇಲ್ಲಿನ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಮತ್ತು ದೇವಾಲಯ ಜೀರ್ಣೋದ್ಧಾರ ಸಮಿತಿ ಆಶ್ರಯದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಪೂಜಾ ಕಾರ್ಯಕ್ರಮಗಳು ಆರಂಭಗೊಂಡವು.

ಗುರುವಾರ ಬೆಳಗ್ಗೆ ಗಣಪತಿ ಹೋಮ ಹಾಗೂ ಸಂಜೆ 5 ಗಂಟೆ ಯಿಂದ ಪ್ರೇತ ಬಾಧೆ ಉಚ್ಚಾಟನೆ ಕಾರ್ಯಕ್ರಮಗಳು ಜರುಗಿದವು.

7ರ ಬೆಳಗ್ಗೆ ಪ್ರಾಯಶ್ಚಿತ್ತ ಪರಿಹಾರ ಪೂಜೆ ಮತ್ತು ಸಂಕೋಚ (ಬಾಲಾಲಯ) ಪೂಜೆ , ಹಾಗೂ ಮುಷ್ಟಿ ಕಾಣಿಕೆ ಪೂಜಾ ಕಾರ್ಯಕ್ರಮಗಳು ನೆರವೇರಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷರಾದ ಗಣಪತಿ ತಿಳಿಸಿದ್ದಾರೆ.