ಬೆಳಗೊಳ ಗ್ರಾಪಂ ಅಧ್ಯಕ್ಷರಾಗಿ ಬಿ.ರವಿಕುಮಾರ್ ಅವಿರೋಧ ಆಯ್ಕೆ

| Published : Jun 19 2025, 11:50 PM IST

ಬೆಳಗೊಳ ಗ್ರಾಪಂ ಅಧ್ಯಕ್ಷರಾಗಿ ಬಿ.ರವಿಕುಮಾರ್ ಅವಿರೋಧ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಪಂ ನೂತನ ಅಧ್ಯಕ್ಷರಾಗಿ ಬಿ.ರವಿಕುಮಾರ್ ಅವಿರೋಧವಾಗಿ ಆಯ್ಕೆಯಾದರು. ನಿಕಟ ಪೂರ್ವ ಅಧ್ಯಕ್ಷ ಪುಟ್ಟರಾಜು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಪಂಚಾಯ್ತಿಯ ಒಟ್ಟು 26 ಸದಸ್ಯರಲ್ಲಿ ಚುನಾವಣಾ ಸಭೆಗೆ 24 ಮಂದಿ ಹಾಜರಾಗಿದ್ದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ಬೆಳಗೊಳ ಗ್ರಾಪಂ ನೂತನ ಅಧ್ಯಕ್ಷರಾಗಿ ಬಿ.ರವಿಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ನಿಕಟ ಪೂರ್ವ ಅಧ್ಯಕ್ಷ ಪುಟ್ಟರಾಜು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಪಂಚಾಯ್ತಿಯ ಒಟ್ಟು 26 ಸದಸ್ಯರಲ್ಲಿ ಚುನಾವಣಾ ಸಭೆಗೆ 24 ಮಂದಿ ಹಾಜರಾಗಿದ್ದರು.

ಬಿ.ರವಿಕುಮಾರ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ, ತಾಪಂ ಇಒ ವೇಣು ಘೋಷಣೆ ಮಾಡಿದರು. ಪಂಚಾಯ್ತಿ ಕಾರ್ಯದರ್ಶಿ ವೆಂಕಟರಾಮು ಚುನಾವಣಾ ಸಹಾಯಕರಾಗಿದ್ದರು.

ಈ ವೇಳೆ ಗ್ರಾಪಂ ಮಾಜಿ ಅಧ್ಯಕ್ಷರಾದ ಬಿ.ವಿ.ಸುರೇಶ್, ಪುಟ್ಟರಾಜು, ಸದಸ್ಯರಾದ ಅರವಿಂದ್, ರಜಿನಿಕಾಂತ್, ಶಿವಕುಮಾರ್, ಕೃಷ್ಣ, ನಾಗಣ್ಣ, ಆರ್ಮುಗಂ ಕಾಂತ್ ರಾಜು, ಪ್ರಭಾ ಸುರೇಶ್, ಅಶ್ವಿನಿ ರವಿಕುಮಾರ್ ರಾಧ ಬಿಎಂ ಸಸ್ವಾಮೀಗೌಡ, ವಿಷಕಂಠೇಗೌಡ ಇತರರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.ಡಾ.ಬಿ.ಬಿ.ಪ್ರವೀಣ್ ಕುಮಾರ್ ಅಧಿಕಾರ ಸ್ವೀಕಾರ

ಶ್ರೀರಂಗಪಟ್ಟಣ:

ಪಟ್ಟಣದ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ತಾಲೂಕು ಸಹಾಯಕ ನಿರ್ದೇಶಕರಾಗಿ ಡಾ.ಬಿ.ಬಿ. ಪ್ರವೀಣ್ ಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.

ಡಾ.ಜಿ.ಜೆ.ಸುರೇಶ್ ಮಂಡ್ಯ ತಾಲೂಕು ಪಶು ಇಲಾಖೆ ಸಹಾಯಕ ನಿರ್ದೇಶಕರಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಡಾ.ಬಿ.ಬಿ.ಪ್ರವೀಣ್ ಕುಮಾರ್ ಅಧಿಕಾರ ಸ್ವೀಕಾರ ಮಾಡಿದರು. ಇವರು ಮಂಡ್ಯದಲ್ಲಿ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ವೇದಮೂರ್ತಿ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದರು.

ಈ ವೇಳೆ ಪಶು ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಉದಯಶಂಕರ್, ಸಹಾಯಕ ನಿರ್ದೇಶಕ ಡಾ. ಜಿ.ಜೆ.ಸುರೇಶ್, ಮುಖ್ಯ ಪಶು ವೈದ್ಯಾಧಿಕಾರಿಗಳಾದ ಡಾ.ಕೆ. ಆನಂದಕುಮಾರ್, ಡಾ.ರಾಘವೇಂದ್ರ ಇತರರಿದ್ದರು.