ಈಶ್ವರಪ್ಪನವರಿಂದ ದಾರಿ ತಪ್ಪಿಸುವ ಕೆಲಸ: ಹೆಗಡೆಕನ್ನಡಪ್ರಭ ವಾರ್ತೆ ಬಾಗಲಕೋಟೆ ಕೆ.ಎಸ್.ಈಶ್ವರಪ್ಪನವರು ಶರಣರ ನಾಡಿನಲ್ಲಿ ತಮ್ಮ ಸ್ವಾರ್ಥಕ್ಕಾಗಿ ಹಿಂದುಳಿದ, ದಲಿತ ಸಮುದಾಯಗಳನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೋರಾಟಗಾರ ಯಲ್ಲಪ್ಪ ಹೆಗಡೆ ಕಿಡಿಕಾರಿದರು. ನವನಗರದ ಪತ್ರಿಕಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರು ಪ್ರಸಕ್ತ ಹಿಂದುಳಿದ, ದಲಿತ ಹಾಗೂ ಸಮಗ್ರ ಹಿಂದೂ ಸಮಾಜದ ಸಮಸ್ಯೆಗಳ ಮತ್ತು ಸವಾಲುಗಳ ಚಿಂತನ-ಮಂಥನ ಸಭೆ ಮಾಡುವ ಬದಲು, ಪ್ರಸಕ್ತ ರಾಜಕಾರಣದಲ್ಲಿ ಈಶ್ವರಪ್ಪನವರು ಕುಟುಂಬವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಚಿಂತನ ಮಂಥನ ಸಭೆ ನಡೆಸಿದರೇ ಉಪಯುಕ್ತವಾಗುತ್ತಿತ್ತು ಎಂದು ತಿಳಿಸಿದರು.