ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ: ಪ್ರಯಾಣಿಕರ ಪರದಾಟಗುಳೇದಗುಡ್ಡ ತಾಲೂಕಿನ ನಾಗರಾಳ ಎಸ್.ಪಿ. ಗ್ರಾಮದಿಂದ ಚಿಮ್ಮಲಗಿ, ಮಂಗಳಗುಡ್ಡ, ಕಾಟಾಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತು ಹಲವು ತಿಂಗಳುಗಳೇ ಕಳೆದರೂ ಪಿಡಬ್ಲ್ಯುಡಿ ಅಧಿಕಾರಿಗಳು, ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.