• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಟೇರಿಂಗ್ ಕಟ್ ಆಗಿ ಜಮೀನಿಗೆ ನುಗ್ಗಿದ ಬಸ್‌
ಕನ್ನಡಪ್ರಭ ವಾರ್ತೆ ಗುಳೇದಗುಡ್ಡಸ್ಟೇರಿಂಗ್‌ ರಾಡ್‌ ಕಟ್‌ ಆಗಿದ್ದರ ಪರಿಣಾಮ ನಿಯಂತ್ರಣ ಕಳೆದುಕೊಂಡ ಸಾರಿಗೆ ಬಸ್‌ ರಸ್ತೆ ಪಕ್ಕದ ಜಮೀನಿಗೆ ನುಗ್ಗಿರುವ ಘಟನೆ ನೀರಲಕೇರಿ ಗ್ರಾಮದ ಹತ್ತಿರ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಗಲಕೋಟೆಯಿಂದ ಗುಳೇದಗುಡ್ಡ ಕಡೆ ಬರುತ್ತಿದ್ದ ಗುಳೇದಗುಡ್ಢ ಘಟಕದ ಬಸ್ ಸ್ಟೇರಿಂಗ್ ರಾಡ್ ಕಟ್ ಆಗಿದ್ದರಿಂದ ಬಸ್ ಸ್ಕೀಡ್ ಆಗಿದೆ. ಬಸ್ ಸ್ಕಿಡ್ ಆಗಿದ್ದನ್ನು ನೋಡಿ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿದ್ದರು.
ಸೊಳ್ಳೆ ನಿಯಂತ್ರಣ ಡೆಂಘೀ ತಡೆಗೆ ಮಾರ್ಗ: ರೇಷ್ಮಾ
ಕನ್ನಡಪ್ರಭ ವಾರ್ತೆ ಲೋಕಾಪುರ ಡೆಂಘೀ ಜ್ವರ ಸೊಳ್ಳೆಯಿಂದ ಹರಡುವ ಖಾಯಿಲೆಯಾಗಿದ್ದು, ಇದು ಪ್ರಪಂಚದ ಉಷ್ಣವಲಯದಲ್ಲಿ ಕಂಡು ಬರುತ್ತದೆ ಎಂದು ವಿಜ್ಞಾನ ಶಿಕ್ಷಕಿ ರೇಷ್ಮಾ ಎಸ್ ಕಲಹಾಳ ಹೇಳಿದರು. ಹೆಬ್ಬಾಳದ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದ ಡೆಂಘೀ ಜ್ವರದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿ ವರ್ಷ ಪ್ರಪಂಚದಾದ್ಯಂತ ಲಕ್ಷಾಂತರ ಪ್ರಕರಣಗಳು ಸಂಭವಿಸುತ್ತವೆ, ಡೆಂಘೀ ಲಸಿಕೆಗಳ ಮೇಲೆ ಸಂಶೋಧನೆ ಮಾಡುತ್ತಿದ್ದಾರೆ.
ಸೈನಿಕರಿಗೆ ಪ್ರಾಣಕ್ಕಿಂತ ದೇಶ ಮುಖ್ಯ: ಯೋಧ ದಂಡಿನ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ದೇಶವನ್ನು ಕಾಪಾಡುವ ಸೈನಿಕರನ್ನು ಎಷ್ಟು ಗೌರವಿಸಿದರೂ ಸಾಲದು ಎಂದು ಯೋಧ ಸಿದ್ಧಲಿಂಗಪ್ಪ ದಂಡಿನ ಹೇಳಿದರು. ಇಲ್ಲಿನ ಪಿ.ಇ. ಟ್ರಸ್ಟಿನ ರಾಠಿ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ 25 ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಸೈನಿಕರು ದೇಶವನ್ನು ರಕ್ಷಿಸುವ ದೇಶ ಭಕ್ತರು. ಕಾರ್ಗಿಲ್ ಯುದ್ಧದಲ್ಲಿ ಅವರು ಪ್ರಾಣದ ಹಂಗು ತೊರೆದು ಹೋರಾಡಿದರು. ಹೋರಾಟದಲ್ಲಿ ನಮ್ಮವರೂ ಬಲಿಯಾದರು.
ಗುರು-ಶಿಷ್ಯ ಪರಂಪರೆಗೆ ಭಾರತ ವಿಶ್ವಗುರು
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಗುರು-ಶಿಷ್ಯ ಪರಂಪರೆಯಲ್ಲಿ ಭಾರತವೇ ವಿಶ್ವಗುರುವಾಗಿದೆ ಎಂದು ನಗರ ಲಯನ್ಸ್ ಕ್ಲಬ್ ಅಧ್ಯಕ್ಷ ರಾಜು ತಾಳಿಕೋಟಿ ಹೇಳಿದರು. ಸ್ಥಳೀಯ ಲಯನ್ಸ್‌ ಕ್ಲಬ್‌ ಆಫ್ ಮಹಾಲಿಂಗಪು ಗ್ರೀನ್ ಬೇಸಿನ್ ಮತ್ತು ಸ್ಫೂರ್ತಿ ಗ್ರಾಮೀಣ ತರಬೇತಿ ಸಂಸ್ಥೆ ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಸಿದ್ದಾರೂಢ ಭವನದಲ್ಲಿ ನಡೆದ ಗುರುಭ್ಯೋ ನಮಃ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಆಲಮಟ್ಟಿ ಸ್ಥಿತಿಗತಿ ವೀಕ್ಷಿಸಿದ ಡಿಸಿ, ಸಿಇಒ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಶುಕ್ರವಾರ ಭೇಟಿ ನೀಡಿ ಜಂಟಿಯಾಗಿ ವೀಕ್ಷಣೆ ಮಾಡಿದರು. ಆಲಮಟ್ಟಿ ಜಲಾಶಯದಲ್ಲಿರುವ ನೀರಿನ ಸಂಗ್ರಹ ಹಾಗೂ ಬಿಡುಗಡೆ ಮಾಡುತ್ತಿರುವ ನೀರಿನ ಪ್ರಮಾಣದ ಸ್ಥಿತಿಗತಿಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿ
ಸತತವಾಗಿ ಮಹಾರಾಷ್ಟ್ರದಲ್ಲಿ ಬಿಟ್ಟೂ ಬಿಡದೇ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ನದಿಯ ನೀರು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರಿಂದ ಸುತ್ತಲಿನ ನಂದಗಾಂವ, ಢಳವೇಶ್ವರ, ಮಿರ್ಜಿ ಸೇತುವೆಗಳು ತುಂಬಿ ರಸ್ತೆ ಸಂಚಾರ ಬಂದಾಗಿದೆ. ಅಷ್ಟೇ ಅಲ್ಲದೇ ರಭಸದಿಂದ ಬರುತ್ತಿರುವ ನೀರಿನ ಒತ್ತಡಕ್ಕೆ ನೀರು ನದಿ ತಟದಲ್ಲಿರುವ ರೈತರ ಜಮೀನುಗಳಿಗೆ ನುಗ್ಗಿ ಅಪಾರ ಬೆಳೆ ಹಾನಿಯುಂಟು ಮಾಡಿದೆ.
28ರಂದು ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಬಾಗಲಕೋಟೆ ತಾಲೂಕು ಘಟಕದಿಂದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಜು.28 ರಂದು ಬೆಳಿಗ್ಗೆ 10 ಗಂಟೆಗೆ ನವನಗರದ ಕಲಾಭವನ ಹಮ್ಮಿಕೊಂಡಿದ್ದೇವೆ ಎಂದು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾಧ್ಯಕ್ಷ ಬಸವರಾಜ ಶೀಲವಂತ ಹೇಳಿದರು.
ಬಿಡಿಸಿಸಿ ಬ್ಯಾಂಕ್‌ಗೆ ₹12.17 ಕೋಟಿ ನಿವ್ವಳ ಲಾಭ
ಬಾಗಲಕೋಟೆ ನಗರದ ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಕಳೆದ ಮಾರ್ಚ್ ಅಂತ್ಯಕ್ಕೆ ₹12.17 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಮಾಜಿ ಸಚಿವ ಅಜಯಕುಮಾರ ಸರನಾಯಕ ತಿಳಿಸಿದರು.
ಪ್ರವಾಹ ಎದುರಿಸಲು ತಾಲೂಕಾಡಳಿತ ಸನ್ನದ್ಧ
ಪ್ರವಾಹ ಪರಿಸ್ಥಿತಿ ಎದುರಿಸಲು ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ತಾಲೂಕಲ್ಲಿ 23 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಹಸೀಲ್ದಾರ ಸದಾಶಿವ ಮುಕ್ಕೊಜಿ ಮಾಹಿತಿ ನೀಡಿದರು.
ಮಾನವೀಯತೆ ಬೆಳೆಸುವ ಎನ್ನೆಸ್ಸೆಸ್
ಎನ್ನೆಸ್ಸೆಸ್ ನಮ್ಮಲ್ಲಿ ನಿಸ್ವಾರ್ಥತೆ, ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ ಎಂದು ಇಲ್ಲಿನ ಪಿಇ ಟ್ರಸ್ಟಿನ ಗೌರವ ಕಾರ್ಯದರ್ಶಿ ರವೀಂದ್ರ ಪಟ್ಟಣಶೆಟ್ಟಿ ಹೇಳಿದರು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 379
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved