ನಗರಸಭೆ ಆಯವ್ಯಯ ಅಂದಾಜು ಪತ್ರಿಕೆಗೆ ಅನುಮೋದನೆ: ಆಯುಕ್ತ ರಮೇಶ ಜಾಧವಬಾಗಲಕೋಟೆ: ನಗರಸಭೆಯ 2024-25ನೇ ಸಾಲಿನ ನಿರೀಕ್ಷಿಸಲಾದ ಆದಾಯ ಮತ್ತು ವೆಚ್ಚಗಳಿಗೆ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ. ಅನುಮೋದನೆ ನೀಡಿದ್ದಾರೆ ಎಂದು ಆಯುಕ್ತ ರಮೇಶ ಜಾಧವ ತಿಳಿಸಿದ್ದಾರೆ. ನಗರದ ಜನೆತೆಗೆ ಮೂಲ ಸೌಲಭ್ಯ ಒದಗಿಸುವುದು ನಗರಸಭೆಯ ಆದ್ಯ ಕರ್ತವ್ಯ ಆಗಿರುವುದರಿಂದ ಸಂಪನ್ಮೂಲ ಕ್ರೋಢೀಕರಿಸಿ ನಗರದ ನೀರು ಪೂರೈಕೆ, ಸ್ವಚ್ಛತೆ, ಘನತ್ಯಾಜ್ಯ ವಸ್ತುಗಳ ವಿಲೇವಾರಿ, ಬೀದಿ ದೀಪಗಳ ನಿರ್ವಹಣೆ, ನಗರದ ಚರಂಡಿ, ರಸ್ತೆ, ಶೌಚಾಲಯಗಳ ವ್ಯವಸ್ಥೆಯಂಥ ಅನೇಕ ವ್ಯವಸ್ಥೆಗಳನ್ನು ಸಮರ್ಪಕವಾಗಿ ಒದಗಿಸಲು ಅನುದಾನ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.