• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಿ ಮಾರ್ಗದರ್ಶಿಗಳು ವೃತ್ತಿಗೆ ಗೌರವ ನೀಡಬೇಕು: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
ಬಾಗಲಕೋಟೆ: ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ನೀಡಲಾಗುತ್ತಿರುವ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಚಾಲನೆ ನೀಡಿದರು. ಪ್ರವಾಸೋದ್ಯಮವನ್ನು ಹೆಚ್ಚು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸುವ ಮೂಲಕ ಉದ್ಯೋಗ ಸೃಷ್ಟಿಸಿ ಆರ್ಥಿಕ ಸಬಲೀಕರಣಗೊಳಿಸುವ ಉದ್ದೇಶ ಹೊಂದಲಾಗಿದೆ. ಆದ್ದರಿಂದ ಪ್ರವಾಸಿ ಮಾರ್ಗದರ್ಶಿಗಳು ಈ ತರಬೇತಿಯ ಸದುಪಯೋಗ ಪಡಿಸಿಕೊಳ್ಳಬೇಕು. ವೃತ್ತಿಗೆ ಗೌರವ ಕೊಡುವ ಕೆಲಸವಾಗಬೇಕು. ತರಬೇತಿ ಪಡೆಯುವ ಮೂಲಕ ಇಲಾಖೆಗೂ ಒಳ್ಳೆಯ ಹೆಸರು ತರುವ ಕೆಲಸವಾಗಬೇಕು ಎಂದು ಹೇಳಿದರು.
ಆಧ್ಯಾತ್ಮಿಕ ಪ್ರಪಂಚಕ್ಕೆ ಮಧ್ವಾಚಾರ್ಯರ ಕೊಡುಗೆ ಅನನ್ಯ: ನಾಗಸಂಪಿಗೆ
ಬಾಗಲಕೋಟೆ: ಅಧ್ಯಾತ್ಮ ಪ್ರಪಂಚಕ್ಕೆ ಮಧ್ವಾಚಾರ್ಯರು ನೀಡಿದ ಕೊಡುಗೆ ಅದ್ವಿತೀಯವಾಗಿದೆ ಎಂದು ಪಂಡಿತ್ ಬಿಂದುಮಾಧವಾಚಾರ್ಯ ನಾಗಸಂಪಿಗೆ ಹೇಳಿದರು. ನಗರದ ವಿದ್ಯಾಗಿರಿ ವಿಪ್ರ ಅಭಿವೃದ್ಧಿ ಸಂಘದ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಧ್ವ ನವಮಿ ನಿಮಿತ್ತ ಹಮ್ಮಿಕೊಂಡಿದ್ದ ಜಗತ್ತಿಗೆ ಮಧ್ವರ ಸಂದೇಶ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಧ್ಯಯನದ ಜೊತೆಗೆ ಸಂಸ್ಕಾರ ಶಿಕ್ಷಣ ಅವಶ್ಯ: ಡಾ.ನಂದರಾಜ ಬಾವುರ
ಇಳಕಲ್ಲ: ನಗರದ ವಿಜಯ ಮಹಾಂತೇಶ್ವರ ಶಿಕ್ಷಣ ಸಂಸ್ಥೆಯ ಶಾಲೆಗಳ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ವಿಜಯ ಮಹಾಂತೇಶ್ವರ ಆರ್ಯುವೇದ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ನಂದರಾಜ ಬಾವುರ ಮಾತನಾಡಿ, ವಿದ್ಯಾರ್ಥಿಗಳಿಗೆ ನಯವಿನಯ ಮುಖ್ಯ. ವಿದ್ಯಾರ್ಥಿ ಜೀವನದಲ್ಲಿ ಅಧ್ಯಯನದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಕಲಿಯಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳನ್ನು ಗೌರವಿಸಿ ಸತ್ಕರಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ: ಎಸ್ಪಿ ಅಮರನಾಥರೆಡ್ಡಿ
ಗುಳೇದಗುಡ್ಡ: ಪಟ್ಟಣದ ನೆಹರು ಪಬ್ಲಿಕ್ ಶಾಲೆ ಹಾಗೂ ಪಪೂ ಕಾಲೇಜಿನ ವಾರ್ಷಿಕ ಸಮಾರಂಭ ಉದ್ಘಾಟಿಸಿದ ಎಸ್ಪಿ ಅಮರನಾಥರೆಡ್ಡಿ ಮಾತನಾಡಿ, ಮಕ್ಕಳಿಗೆ ಉತ್ತಮ ವಿದ್ಯೆ ಕೊಡಿಸುವುದರಿಂದ ಸಮಾಜದಲ್ಲಿ ಬದಲಾವಣೆ ಹಾಗೂ ಅಭಿವೃದ್ಧಿ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದುತಂತ್ರಜ್ಞಾನದಲ್ಲಿ ಸಾಕಷ್ಟು ಆವಿಷ್ಕಾರಗಳು ನಿತ್ಯ ಕಂಡು ಬರುತ್ತಿವೆ. ಶಿಕ್ಷಣ ಸಂಸ್ಥೆಗಳು ಅವುಗಳನ್ನು ಬಳಸಿಕೊಂಡಾಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶ: ಶಿಲ್ಪಾ ರಾಠೋಡ
ಬಾಗಲಕೋಟೆ: ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯುಎಸಿ ಅಡಿಯಲ್ಲಿ ಬಯೋಟೆಕ್ನಾಲಜಿ ಹಾಗೂ ಮೈಕ್ರೋಬಯಾಲಜಿ ವಿಭಾಗಗಳಿಂದ ನಡೆದ ರಾಜ್ಯ ಮಟ್ಟದ ಎರಡು ದಿನದ ಕಾರ್ಯಗಾರವನ್ನು ಬೆಂಗಳೂರಿನ ಮಿಡಿಯೋಮಿಕ್ಸ್ ಸಂಸ್ಥೆಯ ಸೀನಿಯರ್ ಜಿನೋಮ್ ವಿಶ್ಲೇಷಕಿ ಶಿಲ್ಪಾ ರಾಠೋಡ ಹೇಳಿದರು. ಉದ್ಘಾಟಿಸಿದರು. ಬಳಿಕ ಮಾತನಾಡಿ, ಇಂದು ಮುಂದುವರೆದ ತಂತ್ರಜ್ಞಾನದಲ್ಲಿ ಸಸ್ಯ, ಪ್ರಾಣಿ, ಸೂಕ್ಷಾಣುಜೀವಿಗಳ ಅಧ್ಯಯನ ತುಂಬಾ ಮಹತ್ವವನ್ನು ಪಡೆದಿದೆ. ಈ ಕ್ಷೇತ್ರಗಳಲ್ಲಿ ಮುಂದುವರೆದವರಿಗೆ ಉದ್ಯೋಗಾವಕಾಶಗಳು ಹೇರಳವಾಗಿವೆ ಎಂದು ಹೇಳಿದರು.
ಪರಕೀಯರ ವಿರುದ್ಧ ಹೋರಾಡಿದ ದೇಶಪ್ರೇಮಿ
ಕೆರೂರ: ಪರಕೀಯರ ದುರಾಡಳಿತ, ದಬ್ಬಾಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಿದ ಅಪ್ಪಟ ದೇಶಪ್ರೇಮಿ ಛತ್ರಪತಿ ಶಿವಾಜಿ ಮಹಾರಾಜರು ಎಂದು ಮುಖ್ಯಶಿಕ್ಷಕ ಎಂ.ಎ. ಚಿಗರೊಳ್ಳಿ ಹೇಳಿದರು. ಸೋಮವಾರ ಪಟ್ಟಣದ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಕ್ತರ ಪಾಲಿನ ಕಾಮದೇನು ಕಲ್ಪವೃಕ್ಷ ಕಾಳಿಕಾ ಮಾತೆ: ನಾಗಲಿಂಗ ಸ್ವಾಮೀಜಿ
ಮಹಾಲಿಂಗಪುರ: ಜಗತ್ತಿನಲ್ಲಿ ಅತ್ಯಂತ ಶಕ್ತಿಶಾಲಿಯಾದ ದೇವತೆ ಕಾಳಿಕಾ ಮಾತೆಯನ್ನು ವಿಶ್ವದ ತುಂಬೆಲ್ಲ ವಿವಿಧ ಹೆಸರಿನಿಂದ ಜನರು ಪೂಜಿಸಿ ಆರಾಧಿಸುತ್ತಾರೆ. ನಿರ್ಮಲ ಭಕ್ತಿಯಿಂದ ಬೇಡಿ ಬಂದವರಿಗೆ ಸಕಲವನ್ನೂ ಕರುಣಿಸುವ ಕಾಮಧೇನು ಕಲ್ಪವೃಕ್ಷ ಈ ಕಾಳಿಕಾ ಮಾತೆ ಎಂದು ಚಿಕ್ಕುಂಬಿಯ ಶ್ರೀ ನಾಗಾಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಶ್ರೀ ಮಾರುತಿ ಮಂದಿರದ ಹತ್ತಿರವಿರುವ ಶ್ರೀ ಕಾಳಿಕಾ ದೇವಿಯ ಎರಡನೆಯ ವರ್ಷದ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಧರ್ಮ ಸಭೆಯ ಸಾನ್ನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಶ್ರೇಷ್ಠ ಶಿವಾನುಭಾವಿ ಮೇದಾರ ಕೇತಯ್ಯ: ಸಿದ್ದಯ್ಯ ಸ್ವಾಮೀಜಿ
ಮಹಾಲಿಂಗಪುರ: ಶ್ರೀ ಶಂಭುಲಿಂಗ ಮಹಾಸ್ವಾಮಿಗಳ 16ನೆಯ ಪುಣ್ಯಾರಾಧನೆ ನಿಮಿತ್ತ ರನ್ನ ಬೆಳಗಲಿಯ ಶ್ರೀ ಲಕ್ಷ್ಮಿಗದ್ದುಗೆ ಗುಡಿಯಲ್ಲಿ ಆಯೋಜಿಸಿರುವ 15 ದಿನಗಳವರೆಗೆ ಪ್ರವಚನ ಕಾರ್ಯಕ್ರಮದಲ್ಲಿ ಶನಿವಾರ ಶರಣ ಚರಿತಾಮೃತ ಗ್ರಂಥದ ವಿಷಯದ ಮೇಲೆ ಮೇದಾರ ಕೇತಯ್ಯನ ಕುರಿತು ತೋಳನೂರಿನ ಸಿದ್ದಯ್ಯ ಸ್ವಾಮಿಗಳು ಪ್ರವಚನ ನೀಡಿ, ಮೇದಾರ ಕೇತಯ್ಯ ತನ್ನ ತನು-ಮನ-ಧನಗಳನ್ನು ಜಂಗಮಕ್ಕೆ ಅರ್ಪಿಸಿ ಶಿವಾನುಭವ ತತ್ವಗಳನ್ನು ನಿರೂಪಿಸಿದ ಶ್ರೇಷ್ಠ ಶಿವಾನುಭಾವಿ ಎಂದು ಹೇಳಿದರು.
ಕಲಾದಗಿ ಘಟನೆ: ೫೯ ಜನರ ವಿರುದ್ಧ ಪ್ರಕರಣ ದಾಖಲು
ಕಲಾದಗಿ: ಗ್ರಾಮದಲ್ಲಿ ಶನಿವಾರ ನಡೆದ ರಂಭಾಪುರಿ ಶ್ರೀಗಳವರ ವಿರುದ್ಧದ ಪ್ರತಿಭಟನೆಗೆ ಸಂಬಧಿಸಿದಂತೆ ೫೯ ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ. ಭಾನುವಾರ ಮಧ್ಯಾಹ್ನ ಸ್ಥಳೀಯ ಶ್ರೀ ಗುರುಲಿಂಗೇಶ್ವರ ಮಠಕ್ಕೆ ಆಗಮಿಸಿ ಮಠವನ್ನು ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದುಕೊಂಡರು.
ಅಂಬಾಭವಾನಿ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಸಾವಳಗಿ: ಗ್ರಾಮದ ಆರಾಧ್ಯದೇವಿ ಅಂಭಾಭವಾನಿ ದೇವಿ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಪೊಲೀಸ್‌ ಠಾಣೆಯ ಪಿಎಸ್‌ಐ ಗಂಗಾಧರ ಪೂಜೇರಿ ಜಾತ್ರೆಗೆ ಚಾಲನೆ ನೀಡಿದರು. ಬೆಳಗ್ಗೆ ರಥಸಪ್ತಮಿ ಹಾಲು ಉಕ್ಕಿಸುವುದು, ಶಾಂತಿಪುಷ್ಠಿ, ಮಹಾಭಿಷೇಕ, ಚಂಡಿಕಾಮಂಡಲ, ಪುಣ್ಯವಾಚನ, ಚಂಡಿಕಾ ಪಾರಾಯಣ, ರಾತ್ರಿ ಸಂಗಮೇಶ್ವರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗಿದವು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 373
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved