• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ಪ್ರಾಚ್ಯಪ್ರಜ್ಞೆ ಜ್ಞಾನ ಅವಶ್ಯಕ: ಎಂಎಲ್ಸಿ ಪಿ.ಎಚ್.ಪೂಜಾರ
ಬಾಗಲಕೋಟೆ: ನವನಗರದ ಕಲಾಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಪ್ರಾಚ್ಯಪ್ರಜ್ಞೆ ರಾಜ್ಯಮಟ್ಟದ ಸ್ಪರ್ಧೆ ಮತ್ತು ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾತನಾಡಿ, ಮಕ್ಕಳಲ್ಲಿ ದೇಶದ ಇತಿಹಾಸ, ಪರಂಪರೆಗಳ ಹಾಗೂ ಸಂಸ್ಕೃತಿಗಳ ಮಹತ್ವದ ಅರಿವು ಮೂಡಿಸುವುದು ಅವಶ್ಯವಾಗಿದೆ ಎಂದು ಹೇಳಿದರು. ಸ್ಪರ್ಧೆಯಲ್ಲಿ ವಿಜೇತರಿಗೆ ಗಣ್ಯರು ಬಹುಮಾನ ನೀಡಿದರು.
ತೋಟಗಾರಿಕೆ ಮೇಳದಲ್ಲಿ ಜನಾಕರ್ಷಿಸಿದ ಶ್ವಾನ ಪ್ರದರ್ಶನ
ಬಾಗಲಕೋಟೆ: ನಗರದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವಿದ್ಯಾಗಿರಿಯಲ್ಲಿ ಹಮ್ಮಿಕೊಂಡ ತೋಟಗಾರಿಕೆ ಮೇಳದಲ್ಲಿ ಪಶು ಸಂಗೋಪನ ಇಲಾಖೆ ವತಿಯಿಂದ ಆಯೋಜಿಸಿದ್ದ ವಿವಿಧ ತಳಿಗಳ ಶ್ವಾನಗಳ ಪ್ರದರ್ಶನ ಜನಾಕರ್ಷಿಸಿತು.
ಗುಣಮಟ್ಟದ ಚಿಕಿತ್ಸೆಗೆ ಆಧುನಿಕ ವೈದ್ಯಕೀಯ ಉಪಕರಣ ಅಗತ್ಯ: ಡಾ.ವೀರಣ್ಣ ಚರಂತಿಮಠ
ಬಾಗಲಕೋಟೆ: ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅರವಳಿಕೆ ಶಾಸ್ತ್ರ ವಿಭಾಗ ಮತ್ತು ಭಾರತೀಯ ಅರವಳಿಕೆ ಶಾಸ್ತ್ರಜ್ಞರ ಸಂಘದ ಕರ್ನಾಟಕ ರಾಜ್ಯ ಶಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಎರಡು ದಿನಗಳ ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಪರೀಕ್ಷೆ ಸಂಬಂಧಿತ ಕಾರ್ಯಾಗಾರದಲ್ಲಿ ವೈದ್ಯಕೀಯ ಉಪಕರಣಗಳ ಪ್ರದರ್ಶನ ಮಳಿಗೆಗಳನ್ನು ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಉದ್ಘಾಟಿಸಿದರು. ಬಳಿಕ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಆಧುನಿಕ ವೈದ್ಯಕೀಯ ಉಪಕರಣಗಳು ಅಗತ್ಯವಾಗಿವೆ. ಹೊಸ ತಂತ್ರಜ್ಞಾನದ ಉಪಕರಣಗಳನ್ನು ವೈದ್ಯರು ಬಳಸಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.
ಸಂವಿಧಾನ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸಿ: ಮೋಹನ ಕೊರಡ್ಡಿ
ಲೋಕಾಪುರ: ಸಂವಿಧಾನ ದಿನ ನಿಮಿತ್ತ ನಡೆಯಲಿರುವ ಸಂವಿಧಾನ ಜಾಗೃತಿ ಜಾಥಾ ಪಟ್ಟಣದಲ್ಲಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಮಾಜ ಕಲ್ಯಾಣಾಧಿಕಾರಿ ಮೋಹನ ಕೊರಡ್ಡಿ ಹೇಳಿದರು. ಪಟ್ಟಣ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್‌ ಶ್ರೇಷ್ಠ ಸಂವಿಧಾನ ಕೊಟ್ಟಿದ್ದರಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸಹೋದರತ್ವದಿಂದ ಎಲ್ಲರೂ ಬಾಳುತ್ತಿದ್ದೇವೆ. ಸದೃಢ ಭಾರತಕ್ಕಾಗಿ ಸಂವಿಧಾನದ ಕುರಿತು ಪ್ರತಿಯೊಬ್ಬರಲ್ಲಿ ಅರಿವು ಮೂಡಿಸುವುದೇ ಜಾಥಾ ಉದ್ದೇಶ, ಪಟ್ಟಣದಲ್ಲಿ ಫೆ.೨೨ರಂದು ನಡೆಯಲಿರುವ ಕಾಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದರು.
ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ಮೆರೆದ ರೈತ
ಮಹಾಲಿಂಗಪುರ: ಪಟ್ಟಣಕ್ಕೆ ಮೊಸರು ಮಾರಲು ಬಂದ ಸಂಗಾನಟ್ಟಿ ಗ್ರಾಮದ ಅಜ್ಜಿಯೋರ್ವಳು ಪಟ್ಟಣದ ನಡುಚೌಕಿ ಮುಖಾಂತರ ಮೊಸರು ಮಾರುತ್ತಾ ಹೋಗುವ ವೇಳೆ ಕಳೆದುಕೊಂಡಿದ್ದ ಒಂದು ತೊಲೆ ಬಂಗಾರದ ಆಭರಣ (ಬೋರಮಾಳ)ವನ್ನು ಅಜ್ಜಿಗೆ ಮರಳಿಸಿದ ರೈತನೊಬ್ಬ ಪ್ರಾಮಾಣಿಕತೆ ಮೆರೆದಿದ್ದಾನೆ.
ಸರ್ಕಾರಿ ಶಾಲೆಗಳು ದೇವಸ್ಥಾನಗಳಿದ್ದಂತೆ: ಶಾಸಕ ಸಿದ್ದು ಸವದಿ
ಮಹಾಲಿಂಗಪುರ: 2019-20ನೇ ಸಾಲಿನ ನಬಾರ್ಡ್‌ ಸಹಯೋಗದ ಆರ್ ಐಡಿಎಫ್ 25ರ ಯೋಜನೆಯಡಿ ಸ್ಥಳೀಯ ಪಿ.ಡಿ.ಬುದ್ನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ₹ 60 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ 5 ಕೊಠಡಿಗಳು ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ವಿವೇಕ ಯೋಜನೆಯಡಿ ಸ್ಥಳೀಯ ಸರ್ಕಾರಿ ಪ್ರೌಢಶಾಲೆಯಲ್ಲಿ ₹ 32.80 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ 2 ಕೊಠಡಿಗಳನ್ನು ಶಾಸಕ ಸಿದ್ದು ಸವದಿ ಉದ್ಘಾಟಿಸಿ ಮಾತನಾಡಿ, ಬಡ ಮಕ್ಕಳು ಕಲಿಯುವ ಸರ್ಕಾರಿ ಶಾಲೆಗಳು ದೇವಸ್ಥಾನಗಳಿದ್ದಂತೆ, ಆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಲು ತಾವು ಸದಾ ಸಿದ್ಧ ಎಂದು ಹೇಳಿದರು.
ಮಡಿವಾಳ ಸಮುದಾಯ ಮುಖ್ಯ ವಾಹಿನಿಗೆ ಬರಲಿ: ವೀಣಾ ಕಾಶಪ್ಪನವರ
ಮಹಾಲಿಂಗಪುರ: ರಾಜ್ಯದ ಸಣ್ಣ ಸಣ್ಣ ಸಮುದಾಯಗಳಲ್ಲಿ ಮಡಿವಾಳ ಸಮುದಾಯವು ಒಂದು ಈ ಸಮುದಾಯ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಆಗಲೇ ಸಮುದಾಯ ಗುರುತಿಸಲು ಸಾಧ್ಯವಾಗುತ್ತದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು.ನಗರದ ಕಲ್ಪಾಡ್‌ ಹತ್ತಿರವಿರುವ ದೋಬಿ ಘಾಟ್‌ ದ್ವಾರ ಬಾಗಿಲು ಉದ್ಘಾಟಿಸಿ ಮಾತನಾಡಿ, 12ನೇ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು-ಕೀಳು ತಾರತಮ್ಯ, ಅಸ್ಪೃಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು.
ಎಸ್ಸಿಪಿ ಕಾಲೇಜಿನ ತಂಡಕ್ಕೆ ಜನರಲ್ ಚ್ಯಾಂಪಿಯನ್‌ ಟ್ರೊಫಿ
ಮಹಾಲಿಂಗಪುರ: ಕೆಎಲ್ಇ ಸಂಸ್ಥೆಯ ಎಸ್ಸಿಪಿ ಕಲಾ,ವಿಜ್ಞಾನ ಮತ್ತು ಡಿ.ಡಿ ಶಿರೋಳ ವಾಣಿಜ್ಯ ಪದವಿ ಮಹಾವಿದ್ಯಾಲದ ವಿದ್ಯಾರ್ಥಿಗಳು ಎಸ್.ಡಿ.ವಿ.ಎಸ್ ಸಂಘ, ಅನ್ನಪೂರ್ಣ ಇನಸ್ಟಿಟ್ಯೂಟ್‌ ಆಫ್‌ ಮ್ಯಾನಜ್‌ಮೆಂಟ್‌ ರಿಸರ್ಚ್‌ ಸಂಕೇಶ್ವರದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಆರಂಭ -2024 ಮೆಘಾ ನ್ಯಾಷನಲ್ ಲೆವಲ್ ಪೆಸ್ಟ್‌ ನಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಜನರಲ್ ಚಾಂಪಿಯನ್‌ ಟ್ರೋಫಿ ಪಡೆದಿದ್ದಾರೆ.
ರಾಷ್ಟ್ರೀಯತೆಯ ಜಾಗೃತಿ ಮೂಡಿಸಿದ ಪಂ.ದೀನದಯಾಳರು: ಡಾ.ವೀರಣ್ಣ ಚರಂತಿಮಠ
ಬಾಗಲಕೋಟೆ: ಪಂ.ದೀನದಯಾಳ್ ಉಪಾಧ್ಯಾಯರು ಪರಂಪರೆ, ಆಧುನಿಕತೆ ಬೆಸೆದ ದಿವ್ಯ ಚೇತನವಾಗಿದ್ದರು. ಪತ್ರಿಕೆಯಿಂದ ರಾಷ್ಟ್ರೀಯತೆಯ ಜಾಗೃತಿ ಮೂಡಿಸಿದರು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು. ನಗರದ ಶಿವಾನಂದ ಜಿನ್ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ನಗರ ಮಂಡಲ ವತಿಯಿಂದ ಹಮ್ಮಿಕೊಂಡ ಭಾರತೀಯ ಜನತಾ ಪಕ್ಷದ ಪ್ರೇರಣಾ ಶಕ್ತಿ ಪಂಡಿತ್ ದೀನದಯಾಳ್‌ ಉಪಾಧ್ಯಾಯನವರ ಬಲಿದಾನ ದಿವಸ್‌ ಕಾರ್ಯಕ್ರಮದಲ್ಲಿ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಜೈನ ಧರ್ಮದಲ್ಲಿ ಮನೆಯಿಂದಲೇ ಸಂಸ್ಕಾರದ ಶಿಕ್ಷಣ: ವೀರಶ್ರೀ ಸಮಾಜೆ
ರಬಕವಿ-ಬನಹಟ್ಟಿ: ತಾಲೂಕಿನ ಹನಗಂಡಿ ಗ್ರಾಮದ ಆದಿನಾಥ ದಿಗಂಬರ ಜೈನ ಮಂದಿರದಲ್ಲಿ ಅಖಿಲ ಕರ್ನಾಟಕ ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಜೈನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕಿ, ರಾಜ್ಯ ಸಂಪನ್ಮೂಲ ವ್ಯಕ್ತಿ ವೀರಶ್ರೀ ಸಮಾಜೆ ಮಾತನಾಡಿ, ಪ್ರಾಚೀನ ಧರ್ಮವಾಗಿರುವ ಜೈನ ಧರ್ಮದ ಆಚರಣೆಗಳು ದೇಹ ಮತ್ತು ಮನಸ್ಸುಗಳನ್ನು ಕ್ರಿಯಾಶೀಲಗೊಳಿತ್ತವೆ. ಸನಾತನ ಸಂಸ್ಕೃತಿ, ಸಂಸ್ಕಾರ ಮತ್ತು ಹೊಂದಾಣಿಕೆ ಶೈಶವಾವಸ್ಥೆಯಲ್ಲೇ ರೂಢಿಯಾಗುವುದರಿಂದ ಜೈನ ಧರ್ಮದಲ್ಲಿ ಮಾತೃರೂಪಿ ಶಿಕ್ಷಣವು ಮನೆಯಿಂದಲೇ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 373
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved