ಮುಧೋಳದಲ್ಲಿ ಮುಗಿಯದ ಸಂಚಾರಿ ಗೋಳು!ಮುಧೋಳ ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆಗಳು ಹೆಚ್ಚಾಗಿವೆ. ಹೀಗಾಗಿ ನಿತ್ಯ ಕಬ್ಬು ತುಂಬಿದ ಟ್ರ್ಯಾಕ್ಟರ್ಗಳು ಅಧಿಕವಾಗಿ ಸಂಚಾರ ಮಾಡುತ್ತಿವೆ. ಈ ಕಬ್ಬು ತುಂಬಿದ ಟ್ರ್ಯಾಕ್ಟರ್ಗಳು ನಿಧಾನವಾಗಿ ಸಂಚರಿಸುವ ಕಾರಣದಿಂದ ಉಳಿದ ವಾಹನಗಳು ಸಂಚಾರ ದುಸ್ತರವಾಗಿದೆ. ಇದಷ್ಟೇ ಅಲ್ಲದೇ ಈ ಕಬ್ಬು ತುಂಬಿದ ಟ್ರ್ಯಾಕ್ಟರ್ಗಳು ಅಲ್ಲಲ್ಲಿ ಕೆಟ್ಟು ನಿಲ್ಲುತ್ತಿರುವ ಕಾರಣಕ್ಕೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಇದಷ್ಟೇ ಅಲ್ಲದೇ ಅಪಘಾತಗಳು ಹೆಚ್ಚಾಗುತ್ತಿದೆ.