• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೇ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಮನವಿ
ಮುಧೋಳ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಎನ್‌ಪಿಎಸ್ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಸ್ಥಾಪಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಮುಧೋಳ ಘಟಕದ ವತಿಯಿಂದ ಅಧ್ಯಕ್ಷ ಮಂಜುನಾಥ ಪರೀಟ ಹಾಗೂ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರಿಗೆ ಮನವಿ ಸಲ್ಲಿಸಿದರು.
ಸಿಎಎ, ಸಮಾನ ನಾಗರಿಕ ಸಂಹಿತೆ ಜಾರಿ ಆಗೋದು ಗ್ಯಾರಂಟಿ: ಪ್ರಮೋದ್ ಮುತಾಲಿಕ್
ಬಾಗಲಕೋಟೆ: ಸಿಎಎ ಜಾರಿ ಆಗಲೇಬೇಕು, ಆಗ ವಿರೋಧ ಉಂಟಾಗಿ ಆಗಿರಲಿಲ್ಲ. ಈಗ ಕೇಂದ್ರ ಸರ್ಕಾರ ಮಾಡೇ ಮಾಡುತ್ತದೆ. ಈಗ ಆಗದಿದ್ದರೂ ಮುಂದಿನ ಚುನಾವಣೆಗಾದರೂ ಜಾರಿ ಮಾಡೇ ಮಾಡುತ್ತಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ಜೊತೆಗೆ ಸಮಾನ ನಾಗರಿಕ ಸಂಹಿತೆ, ಜನಸಂಖ್ಯೆ ನಿಯಂತ್ರಣ ಕಾನೂನು ಕೂಡ ಜಾರಿಯಾಗಿ, ಹಿಂದು ರಾಷ್ಟ್ರ ಘೋಷಣೆ ಕೂಡ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಫೆ.2ರಂದು ಗಾಣಿಗ ಸಮುದಾಯದಿಂದ ಹೋರಾಟ
ಬಾಗಲಕೋಟೆ: ಗಾಣಿಗ ಅಭಿವೃದ್ಧಿ ನಿಗಮ ಮಂಡಳಿಯ ಅನುಷ್ಠಾನ, ನೊಂದಣಿ, ಅಧಿಕೃತ ಕಚೇರಿ ಹಾಗೂ ಹೆಚ್ಚಿನ ಅನುದಾನ ಬೇಡಿಕೆಗಾಗಿ ಫೆ.2ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಪ್ರೀಡಂ ಪಾರ್ಕ್‌ ನಲ್ಲಿ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಆನಂದ ಕೆ.ಮಂಡ್ಯ ಹೇಳಿದರು.ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಇಂದಿನಿಂದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ: ಅಮರೇಶ ನಾಯಕ
ಬಾಗಲಕೋಟೆ: ಕುಷ್ಠರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜನವರಿ 30 ರಿಂದ ಫೆಬ್ರವರಿ 13ರವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ತಿಳಿಸಿದರು. ಜಿಪಂ ಸಭಾಭವನದಲ್ಲಿ ಸೋಮವಾರ ಕುಷ್ಠರೋಗ ಜಾಗೃತಿ ಅಭಿಯಾನ ಕುರಿತು ಜರುಗಿದ ಅಂತರ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಷ್ಠರೋಗ ಶಾಪವಲ್ಲ. ಸೂಕ್ತ ಚಿಕಿತ್ಸೆಯಿಂದ ಅಂಗವಿಕಲತೆ ಆಗುವುದನ್ನು ತಡೆಗಟ್ಟಬಹುದಾಗಿದೆ ಎಂದರು.
ಭ್ರಷ್ಟಾಚಾರದ ವಿರುದ್ಧ ಲೋಕಾಯಕ್ತರ ಕಠಿಣ ನಿಲುವು: ಬಿ.ಎಸ್. ಪಾಟೀಲ
ಬಾಗಲಕೋಟೆ: ಪಾರದರ್ಶಕ ಆಡಳಿತ, ಜನಸಾಮಾನ್ಯರಿಗೆ ಹತ್ತಿರವಾಗಿ ಕೆಲಸ ಮಾಡುವ ಹಾಗೂ ಉತ್ತಮ ಕೆಲಸ ಮಾಡುವವರಿಗೆ ಲೋಕಾಯುಕ್ತ ಇಲಾಖೆ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಕರ್ನಾಟಕ ಲೋಕಾಯುಕ್ತ ಬಿ.ಎಸ್. ಪಾಟೀಲ ತಿಳಿಸಿದರು. ಜಿಲ್ಲೆಯ ಜಮಖಂಡಿ ತಾಲೂಕಿನ ತಹಸೀಲ್ದಾರ್‌ ಕಚೇರಿಯ ಸಭಾಭವನದಲ್ಲಿ ಸೋಮವಾರ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲಾ ವಾಹನ ಅಪಘಾತ: ನಾಲ್ಕು ಮಕ್ಕಳ ಸಾವು, 30ಕ್ಕೂ ಅಧಿಕ ಜನ ಗಾಯ
ಜಮಖಂಡಿ: ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ಮಕ್ಕಳನ್ನು ಮನೆಗೆ ತಲುಪಿಸಲು ತೆರಳುತ್ತಿದ್ದ ಶಾಲಾ ವಾಹನವೊಂದು ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದ ಬಳಿ ವಿಜಯಪುರ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 30ಕ್ಕೂ ಅಧಿಕ ವಿದ್ಯಾರ್ಥಿಗಳು, ಪಾಲಕರು ಗಾಯಗೊಂಡಿದ್ದು, ಅವರನ್ನು ಜಮಖಂಡಿ ಮತ್ತು ವಿಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪುಂಡಲೀಕಪ್ಪ ಹುಗ್ಗಿ ಆಯ್ಕೆ
ಗುಳೇದಗುಡ್ಡ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಜಿಲ್ಲಾ ಮತ್ತು ತಾಲೂಕು ಘಟಕಗಳ ಆಶ್ರಯದಲ್ಲಿ ಗುಳೇದಗುಡ್ಡ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಟಗೇರಿನಲ್ಲಿ ಫೆ.10ರಂದು ನಡೆಯುತ್ತಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದ ಡಾ.ಪುಂಡಲೀಕಪ್ಪ ಹುಗ್ಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು. ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಂಘಟನೆಯಿಂದ ಮಾತ್ರ ಸರ್ಕಾರದ ಕಣ್ಣು ತೆರೆಸಲು ಸಾಧ್ಯ: ಬಿ.ಎಸ್.ಸೋಮಶೇಖರ
ತೇರದಾಳ(ರ-ಬ): ನೇಕಾರ ಕಾಯಕದ ೨೧ ಪಂಗಡಗಳು ಸೇರಿಕೊಂಡು ನೇಕಾರ ಒಕ್ಕೂಟ ರಚನೆಗೊಂಡಿದ್ದು, ಸರ್ಕಾರಗಳ ಗಮನ ಸೆಳೆಯಲು ಕಡಿಮೆ ಜನಸಂಖ್ಯೆಯ ಅಶಕ್ತ ಸಮುದಾಯಗಳು ಸಂಘಟನೆ ಮತ್ತು ಸಾಮಾಜಿಕ ನ್ಯಾಯದ ತಳಹದಿಯಲ್ಲಿ ತಮ್ಮ ಸಮುದಾಯಕ್ಕೆ ಬೇಕಿರುವ ಸೌಲಭ್ಯಗಳನ್ನು ಸರ್ಕಾರದಿಂದ ಪಡೆಯಲು ಸಾಧ್ಯವಿದೆ ಎಂದು ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಸೋಮಶೇಖರ ಹೇಳಿದರು.ಕರ್ನಾಟಕ ರಾಜ್ಯ ನೀಲಗಾರ ಸಮಾಜ ತೆರದಾಳ ಘಟಕ ಹಮ್ಮಿಕೊಂಡಿದ್ದ 8ನೇ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸಮಾಜಕ್ಕಾಗಿ ಶ್ರಮಿಸಿದರೆ ಮಹತ್ಸಾಧನೆ ಸಾಧ್ಯ: ಗುರುಮಹಾಂತ ಸ್ವಾಮೀಜಿ
ಹುನಗುಂದ: ಸಮಾಜಕ್ಕಾಗಿ ಪ್ರತಿಯೊಬ್ಬರು ನಿರಂತರ ಕಾಯಕ ಮತ್ತು ಸೇವೆ ಮಾಡಿದರೆ ಸಮಾಜ ನಿಮ್ಮ ಸ್ಮರಣೋತ್ಸವ ಕಾರ್ಯಕ್ರಮ ಮಾಡುತ್ತದೆ ಎಂದು ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಸಭಾಭವನದಲ್ಲಿ ಭಾನುವಾರ ನಡೆದ ಕಾಯಕಯೋಗಿ ಗುರುಬಸವಾರ್ಯ ಮಠದ ಗುರುಗಳ 45ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ. ಈ ಸಂಸ್ಥೆ ಕಟ್ಟಲು ಮಠಗುರುಗಳು ಹಗಲಿರುಳು ಶ್ರಮಿಸಿದ್ದು, ಇಲ್ಲಿ ಕಲಿತ ಇಬ್ಬರು ವಿದ್ಯಾರ್ಥಿಗಳು ರಾಜ್ಯದ ಕುಲಪತಿಗಳಾಗಿದ್ದಾರೆ.
ರಸ್ತೆ ಸುಧಾರಣೆ ಕಾಮಗಾರಿಗೆ ಸಚಿವ ತಿಮ್ಮಾಪುರ ಚಾಲನೆ
ಮುಧೋಳ: ಜಲಸಂಪನ್ಮೂಲ ಇಲಾಖೆಯ ಅಚ್ವುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳಡಿ ಉತ್ತೂರ ಗ್ರಾಮದಿಂದ ರೂಗಿ, ಗುಲಗಾಲಜಂಬಗಿ, ಮೆಟಗುಡ್ಡ ಗ್ರಾಮದವರೆಗೆ ಮುಖ್ಯರಸ್ತೆ ಸುಧಾರಣೆಗೆ ₹ 41 ಲಕ್ಷ ಅನುದಾನ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಚಾಲನೆ ನೀಡಿದರು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved