• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾನತೆ ಸಾರಿ ಜಗತ್ತಿಗೆ ಬೆಳಕು ಚೆಲ್ಲಿದ ಬಸವಾದಿ ಶರಣರು: ಡಾ.ಶಿವಕುಮಾರ್ ಸ್ವಾಮೀಜಿ
ಮಹಾಲಿಂಗಪುರ: ಅಂದು ಸರ್ವರೂ ಸಮಾನರು ಎಂದು ಸಾರಿ ಸಾರಿ ಹೇಳಿದರು. ಆವರ ಕಂಡ ಕನಸು ಇಂದಿಗೂ ಜಗತ್ತಿನ ಜನರೆಲ್ಲರೂ ಒಂದೇ ಮನುಜ ಕುಲ, ಉದೋಗ ಆಧರಿಸಿ ಹುಟ್ಟಿಕೊಂಡಿದ್ದು, ಜಾತಿ. ಆದರೆ ಹುಟ್ಟಿನಿಂದ ಯಾರೂ ನಿರ್ದಿಷ್ಟ ಜಾತಿಯಲ್ಲಿ ಹುಟ್ಟುವುದಿಲ್ಲ, ಹುಟ್ಟಿದು ಮನುಷ್ಯರಾಗಿ ಸಾಯುವುದು ಮನುಷ್ಯರಾಗಿಯೇ ಹೊರತು ಜಾತಿವಾದಿಯಾಗಿ ಅಲ್ಲ. ಅಂದೇ ಬಸವಾದಿ ಶರಣರು ಸಮಾನತೆ ಸಾರಿ ಜಗತ್ತಿಗೆ ಬೆಳಕು ಚೆಲ್ಲಿದ್ದರು ಎಂದು ಬಿದರ್‌ ಚಿದಂಬರ ಆಶ್ರಮದ ಡಾ.ಶಿವಕುಮಾರ್ ಸ್ವಾಮೀಜಿ ಹೇಳಿದರು. ನಗರದ ಬನಶಂಕರಿ ದೇವಸ್ಥಾನದ ಸಭಾ ಭವನದಲ್ಲಿ ಆರಂಭಗೊಂಡ ಪ್ರಕರಣ ಪ್ರವೀಣ ಶ್ರೀ ಬಸವಾನಂದರ 50 ನೇ ಪುಣ್ಯಾರಾಧನೆಯ ಸುವರ್ಣ ವೇದಾಂತ ಪರಿಷತ್ ಹಾಗೂ ಸಹಜಾನಂದ ಮಹಾಸ್ವಾಮಿಗಳು 80ನೇ ವರ್ಧಂತಿ (ಸಹಸ್ರ ಚಂದ್ರ ದರ್ಶನ) ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲೋಕಾಪುರ ಪಿಕೆಪಿಎಸ್ ಅಧಿಕಾರ ಬಿಜೆಪಿ ಪಾಲು
ಲೋಕಾಪುರ: ತೀವ್ರ ಜಿದ್ದಾ ಜಿದ್ದಿನಿಂದ ಕೂಡಿದ್ದ ಲೋಕಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಬಿಜೆಪಿ ಮೇಲುಗೈ ಸಾಧಿಸಿದೆ. ಡಿ.೧೭ರಂದು ಚುನಾವಣೆ ನಡೆದಿತ್ತು. ಮತ ಎಣಿಕೆಗೆ ಹೈಕೂರ್ಟಿನಿಂದ ತಡೆಯಾಜ್ಞೆ ತಂದ ಕಾರಣ ಫಲಿತಾಂಶ ವಿಳಂಬವಾಗಿತ್ತು. ಕಳೆದ ವಾರ ಮತ ಎಣಿಕೆಗೆ ಹೈಕೋರ್ಟ್‌ ಗ್ರೀನ್ ಸಿಗ್ನಲ್ ನೀಡಿದ್ದರಿಂದ ಭಾನುವಾರ ಮತ ಎಣಿಕೆ ನಡೆಯಿತು.
ಸಂಸದ ರಮೇಶ ಜಿಗಜಿಣಗಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಬಾಗಲಕೋಟೆ: ವಿಜಯಪುರ ಮೀಸಲು ಸಂಸದ, ಕೇಂದ್ರದ ಮಾಜಿ ಸಚಿವ ರಮೇಶ ಜಿಗಜಿಣಗಿ ಅವರು ತೀವ್ರ ಉಸಿರಾಟದ ತೊಂದರೆಯಿಂದ ಏಕಾಏಕಿ ಅಸ್ವಸ್ಥಗೊಂಡ ಘಟನೆ ಬಾಗಲಕೋಟೆ ಸಮೀಪ ಭಾನುವಾರ ನಡೆದಿದೆ. ತಕ್ಷಣವೇ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರಿಂದ ಚೇತರಿಸಿಕೊಂಡಿದ್ದಾರೆ. ವಿಜಯಪುರದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರಳುತ್ತಿದ್ದ ಸಂಸದ ಜಿಗಜಿಣಗಿ ಅವರಿಗೆ ದಾರಿಮಧ್ಯೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.ಒಂದು ವಾರದಿಂದ ಉಸಿರಾಟದ ತೊಂದರೆ(ನ್ಯೂಮೋನಿಯಾ) ಸಮಸ್ಯೆ ಇತ್ತೆಂದು ಹೇಳಲಾಗುತ್ತಿದ್ದು, ಕುಟುಂಬದ ಸದಸ್ಯರು ದೆಹಲಿಗೆ ತೆರಳಬೇಡಿ ಎಂದು ಸಲಹೆ ನೀಡಿದ್ದರಂತೆ.
ಸ್ವದೇಶಿ ವಸ್ತು ಬಳಿಸಿ ಗುಡಿ ಕೈಗಾರಿಕೆ ಉಳಿಸಿ: ರಾಚಪ್ಪ ಸರಡಗಿ
ಅಮೀನಗಡ: ಸ್ವದೇಶಿ ವಸ್ತಗಳ ಖರೀದಿ, ಗುಡಿ ಕೈಗಾರಿಕೆಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ ಭಾರತ ಸ್ವಾವಲಂಬಿ ರಾಷ್ಟ್ರವಾಗಲು ಸಾಧ್ಯ ಎಂದು ದೊಡ್ಡಣವರ ಮೈನ್ಸ್ ಉಪಾಧ್ಯಕ್ಷ ರಾಚಪ್ಪ ಸರಡಗಿ ಹೇಳಿದರು. ಸಮೀಪದ ದೊಡ್ಡಣವರ್ ಮೈನ್ಸ್ ಕಂಪನಿ ಆವರಣದಲ್ಲಿ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಮಾತನಾಡಿ, ಭಾರತೀಯರು ಅದರಲ್ಲೂ ಇಂದಿನ ಯುವ ಜನಾಂಗ ಪರದೇಶಿ ವಸ್ತಗಳ ವ್ಯಾಮೋಹ ತೊರೆದು ಸ್ವದೇಶಿ ವಸ್ತುಗಳನ್ನು ಹೆಚ್ಚು ಬಳಸುವುದರಿಂದ ರಾಷ್ಟ್ರದ ಆರ್ಥಿಕ ಪ್ರಗತಿ ಸಾಧ್ಯ ಎಂದರು.
ದೇಗುಲ ಬದಲಾಗಿ ಶಾಲೆಗೆ ಹಣ ಖರ್ಚು ಮಾಡಿದರೆ ಸಾರ್ಥಕ: ಗುರುಮಹಾಂತ ಮಹಾಸ್ವಾಮೀಜಿ
ಇಳಕಲ್ಲ: ಗುಡಿ-ಗುಂಡಾರಕ್ಕೆ ಸುಣ್ಣ ಬಣ್ಣ ಬಳೆದು ಸಿಂಗರಿಸುವ ಬದಲು, ಜೀವಂತ ದೇವರು ಇರುವ ಶಾಲೆಗಳಿಗೆ ಖರ್ಚು ಮಾಡಿ ಅಭಿವೃದ್ಧಿ ಮಾಡಿದರೆ ಸಾರ್ಥಕವಾಗುತ್ತದೆ ಎಂದು ಚಿತ್ತರಗಿ-ಇಳಕಲ್ಲ ಸಂಸ್ಥಾನ ಮಠದ ಪೀಠಾಧಿಪತಿ ಗುರುಮಹಾಂತ ಮಹಾಸ್ವಾಮೀಜಿ ಹೇಳಿದರು. ನಗರದ ಬಸವೇಶ್ವರ ಶಿಕ್ಷಣ ಸಮಿತಿ ನಡೆಸುತ್ತಿರುವ ಬಸವೇಶ್ವರ ಕನ್ನಡ ಮಾಧ್ಯಮ ಶಿಶುವಿಹಾರ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ೨೯ನೇ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಬಸವೇಶ್ವರ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟ ಶ್ರೇಷ್ಠವಾದದ್ದು ಎಂದರು.
ಗುಡಿ ಗುಂಡಾರ ನಿರ್ಮಾಣಕ್ಕೆ ಸೀಮಿತವಾಗಬೇಡಿ: ಜೆ.ಟಿ. ಪಾಟೀಲ
ಕೆರೂರ: ರಡ್ಡಿ ಸಮಾಜ ಗುಡಿ ಗುಂಡಾರ ನಿರ್ಮಾಣಕ್ಕೆ ಸೀಮಿತವಾಗಬಾರದು. ಜೀವಂತ ಗುಡಿಗಳೆಂದರೆ ಶಿಕ್ಷಣ ಸಂಸ್ಥೆಗಳು. ಈಗಿನ ಅಧುನಿಕ ಯುಗದಲ್ಲಿ ಇತರ ದೇಶಗಳೊಂದಿಗೆ ಪೈಪೋಟಿ ಮಾಡುವ ಶಕ್ತಿಯನ್ನು ಶಿಕ್ಷಣದ ಮೂಲಕ ಒದಗಿಸಬೇಕಾಗಿದೆಯೆಂದು ಬೀಳಗಿ ಶಾಸಕ, ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಜೆ.ಟಿ. ಪಾಟೀಲ ಹೇಳಿದರು. ಬಾದಾಮಿ ತಾಲೂಕಿನ ಬೀಳಗಿ ಕ್ಷೇತ್ರದ ಕಗಲಗೊಂಬ ಗ್ರಾಮದಲ್ಲಿ ಶ್ರೀ ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆ ಕಗಲಗೊಂಬ ಮತ್ತು ಹೇಮ ವೇಮ ಚಾರಿಟಬಲ್‌ ಸಂಸ್ಥೆ ಬಾದಾಮಿ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಜರುಗಿದ ಬಾದಾಮಿ ತಾಲೂಕು ಮಟ್ಟದ ಮಹಾಯೋಗಿ ಶ್ರೀ ವೇಮನರ 612ನೇ ಜಯಂತಿ ಹಾಗೂ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು ಸಮಾರಂಭದಲ್ಲಿ ಮಾತನಾಡಿದರು.
ಇಂದು ವೇಮನರ ಜಯಂತಿ, ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಅಡಿಗಲ್ಲು
ಬಾದಾಮಿ: ತಾಲೂಕಾಮಟ್ಟದ ಮಹಾಯೋಗಿ ವೇಮನರ 612ನೇ ಜಯಂತ್ಯುತ್ಸವ ಹಾಗೂ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಅಡಿಗಲ್ಲು ಸಮಾರಂಭ ಭಾನುವಾರ ಬೆಳಗ್ಗೆ 10.30ಕ್ಕೆ ತಾಲೂಕಿನ ಕಗಲಗೊಂಬ ಗ್ರಾಮದ ಶ್ರೀ ರಾಮಾನಂದ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಮ ವೇಮ ಚಾರಿಟಬಲ್ ಸಂಸ್ಥೆಯ ಅಧ್ಯಕ್ಷ ಡಿ.ಎಂ.ಪೈಲ್ ಹಾಗೂ ಕಾರ್ಯದರ್ಶಿ ಎಸ್.ಎ.ಭರಮಗೌಡ್ರ ತಿಳಿಸಿದರು. ಶುಕ್ರವಾರ ನಗರದ ಶ್ರೀ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಸಾರಿಗೆ ಸಚಿವ ರಾಮಲಿಂಗರಡ್ಡಿ, ಕಾನೂನು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲೆಯ ಶಾಸಕರು, ಪರಿಷತ್ ಸದಸ್ಯರು, ಗಣ್ಣು ಉಪಸ್ಥಿತರಿರುವರು ಎಂದು ತಿಳಿಸಿದರು.
ಕಾರ್ಯಕರ್ತರಿಗೆ ಯಾವುದೇ ಅಸಮಾಧಾನವಿಲ್ಲ: ನಂಜಯನಮಠ
ಬಾಗಲಕೋಟೆ: ನಿಗಮ ಮಂಡಳಿಗಳಿಗೆ ಸರ್ಕಾರ ಅಧ್ಯಕ್ಷರನ್ನು ನೇಮಿಕ ಮಾಡಿರುವುದು ಜಿಲ್ಲೆಯಲ್ಲಿ ಕಾರ್ಯಕರ್ತರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದ್ದಾರೆ.
ವೆಂಕಟೇಶ್ವರ ಏತ ನೀರಾವರಿ ಯೋಜನೆಗೆ ಪ್ರಾಯೋಗಿಕ ಚಾಲನೆ
ರಬಕವಿ-ಬನಹಟ್ಟಿ: ತಾಲೂಕಿನ ವೆಂಕಟೇಶ್ವರ ಏತ ನೀರಾವರಿ ಯೋಜನೆಯು ನೂರಕ್ಕೆ ನೂರರಷ್ಟು ಮುಕ್ತಾಯಗೊಂಡಿದೆ. ಕೆಲವು ಕಾರಣಗಳಿಂದ ಯೋಜನೆ ವಿಳಂಬವಾಗಿತ್ತು. ಇಂದು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು. ಶುಕ್ರವಾರ ತಾಲೂಕಿನ ನಾವಲಗಿ ಗ್ರಾಮದ ಹತ್ತಿರ ಇರುವ ಕಾಲುವೆಗೆ ನೀರು ಹರಿಯುತ್ತಿರುವುದನ್ನು ವೀಕ್ಷಣೆ ಮಾಡಿ ಮಾತನಾಡಿ, ವೆಂಕಟೇಶ್ವರ ಏತ ನೀರಾವರಿ ಯೋಜನೆ ಹಾಗೂ ಕುಲಹಳ್ಳಿ ಹುನ್ನೂರು ಏತ ನೀರಾವರಿ ಯೋಜನೆಗಳು ಆರು ತಿಂಗಳ ಹಿಂದೆಯೇ ಮುಕ್ತಾಯಗೊಂಡಿದ್ದವು. ಕೆಲವು ಕಾರಣಗಳಿಂದ ವಿಳಂಬವಾಗಿದ್ದವು. ಕುಲಹಳ್ಳಿ ಹನ್ನೂರು ಏತ ನೀರಾವರಿ ಯೋಜನೆಯಿಂದಾಗಿ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಮುಧೋಳದ 14 ಹಳ್ಳಿಗಳ ನೂರಾರು ಜನ ರೈತರ ಸಾವಿರಾರು ಎಕರೆ ಭೂ ಪ್ರದೇಶಕ್ಕೆ ಅನುಕೂಲವಾಗಲಿದೆ ಎಂದರು.
ಎಲ್ಲರಿಗೂ ಸರಿಸಮಾನ ಹಕ್ಕು ನೀಡಿದ ಭಾರತೀಯ ಸಂವಿಧಾನ: ಶಾಸಕ ಜಗದೀಶ ಗುಡಗುಂಟಿ
ಜಮಖಂಡಿ: ಜಾತಿ, ಮತ ಎನ್ನದೆ ಎಲ್ಲರೂ ಸರಿಸಮಾನವಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಂತೆ ಸಂವಿಧಾನ ರಚಿಸಿದ ಕೀರ್ತಿ ಡಾ.ಬಿ.ಆರ್. ಅಂಬೇಡ್ಕರ್‌ ಅವರಿಗೆ ಸಲ್ಲುತ್ತದೆ. ಸ್ವಚ್ಛ, ಶಸಕ್ತ, ಸುಭದ್ರ ಭಾರತವನ್ನಾಗಿ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮ ಅವಿಸ್ಮರಣೀಯ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಆಶ್ರಯದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved