• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತದ ಪ್ರಜಾಪ್ರಭುತ್ವ ಪ್ರಪಂಚಕ್ಕೆ ಮಾದರಿ: ಸಂಸದ ಪಿ.ಸಿ. ಗದ್ದಿಗೌಡರ
ಬಾಗಲಕೋಟೆ: ಭಾರತದ ಪ್ರಜಾಪ್ರಭುತ್ವ ಪ್ರಪಂಚಕ್ಕೆ ಮಾದರಿಯಾಗಿದೆ. ಸಂವಿಧಾನದಲ್ಲಿ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಲಾಗಿದ್ದು, ಹಕ್ಕು ಎಷ್ಟು ಮುಖ್ಯವೋ ಕರ್ತವ್ಯವೂ ಅಷ್ಟೆ ಮುಖ್ಯವಾಗಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು. ನಗರದ ಶಿವಾನಂದ ಜೀನ್ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಫೆ.10ಕ್ಕೆ ಗುಳೇದಗುಡ್ಡ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಗುಳೇದಗುಡ್ಡ: ಫೆ.10ರಂದು ತಾಲೂಕಿನ ಕಟಗೇರಿ ಗ್ರಾಮದಲ್ಲಿ ಗುಳೇದಗುಡ್ಡ ತಾಲೂಕಿನ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಫೆ. 10ರಂದು ಬೆಳಗ್ಗೆ 7.30 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ರಾಷ್ಟ್ರ ಧ್ವಜಾರೋಹಣ, ಜಿಲ್ಲಾ ಕಸಾಪ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ನಾಡಧ್ವಜ ಮತ್ತು ತಾಲೂಕು ಅಧ್ಯಕ್ಷ ಎಚ್.ಎಸ್.ಘಂಟಿ ಪರಿಷತ್ ಧ್ವಜಾರೋಹಣ ನೆರವೇರಿಸುವರು.9 ಗಂಟೆಗೆ ಸಮ್ಮೇಳನ ಅಧ್ಯಕ್ಷರ ಭವ್ಯ ಮೆರವಣಿಗೆ, 11 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಉದ್ಘಾಟನೆ ಜರುಗುವುದು.
ಮಹಾನ್ ನಾಯಕರು ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ: ಶಾಸಕ ಜೆ.ಟಿ. ಪಾಟೀಲ
ಬೀಳಗಿ: ಮಹಾನ್ ನಾಯಕರು ತ್ಯಾಗ, ಬಲಿದಾನ ಮಾಡಿ ಬ್ರಿಟಿಷರ ಕಪಿಮುಷ್ಠಿಯಿಂದ ಬಿಡುಗಡೆಗೊಳಿಸಿ, ಪ್ರಜಾಪ್ರಭುತ್ವದ ಅಡಿಯಲ್ಲಿ ಬದುಕುವಂತೆ ಮಾಡಿದ್ದಾರೆಂದು ಶಾಸಕ ಜೆ.ಟಿ. ಪಾಟೀಲ ಸ್ಮರಿಸಿದರು. ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಪಟ್ಟಣ ಪಂಚಾಯತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.
ನಾಳೆ ವೇಮನರ ಜಯಂತಿ, ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಅಡಿಗಲ್ಲು
ಬಾದಾಮಿ: ತಾಲೂಕು ಮಟ್ಟದ ಮಹಾಯೋಗಿ ವೇಮನರ 612ನೇ ಜಯಂತ್ಯುತ್ಸವ ಹಾಗೂ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಅಡಿಗಲ್ಲು ಸಮಾರಂಭ ಭಾನುವಾರ ಬೆಳಗ್ಗೆ 10.30ಕ್ಕೆ ತಾಲೂಕಿನ ಕಗಲಗೊಂಬ ಗ್ರಾಮದ ಶ್ರೀ ರಾಮಾನಂದ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಮ ವೇಮ ಚಾರಿಟಬಲ್ ಸಂಸ್ಥೆಯ ಅಧ್ಯಕ್ಷ ಡಿ.ಎಂ.ಪೈಲ್ ಹಾಗೂ ಕಾರ್ಯದರ್ಶಿ ಎಸ್.ಎ.ಭರಮಗೌಡ್ರ ತಿಳಿಸಿದರು. ಶುಕ್ರವಾರ ನಗರದ ಶ್ರೀ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಧರ್ಮ, ಜಾತಿಯ ಆಧಾರದಲ್ಲಿ ದೇಶ ಒಡೆಯುವ ಹುನ್ನಾರ: ವಿಜಯಾನಂದ ಕಾಶಪ್ಪನವರ
ಹುನಗುಂದ: ದೇಶದ ಕೆಲವಷ್ಟು ಪಟ್ಟಭದ್ರ ಹಿತಾಸಕ್ತಿಗಳು ಧರ್ಮ ಮತ್ತು ಜಾತಿಯ ಆಧಾರದಲ್ಲಿ ದೇಶವನ್ನು ಒಡೆಯುವ ಹುನ್ನಾರ ನಡೆಸಿವೆ. ಈ ದೇಶವನ್ನು ಧರ್ಮ ಮತ್ತು ಜಾತಿಯ ವ್ಯವಸ್ಥೆಯಲ್ಲಿ ಒಡೆಯಲು ಸಾಧ್ಯವಿಲ್ಲ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ತಾಲೂಕು ಆಡಳಿತದಿಂದ ಟಿಸಿಎಚ್ ಕಾಲೇಜು ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೈದ್ಯಕೀಯ ಕ್ಷೇತ್ರದ ಬದಲಾವಣೆಗಳಿಗೆ ಹೊಂದಿಕೊಳ್ಳಿ: ಡಾ.ಗಜಾನನ್ ಹೆಗಡೆ
ಬಾಗಲಕೋಟೆ: ನಗರದ ಎಂಆರ್ ಎನ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ನಡೆದ 2023-24ನೇ ಸಾಲಿನ ಬಿಎಎಂಎಸ್ ಹಾಗೂ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಆರ್ ಜಿಯುಎಚ್ಎಸ್ ನ ಸಿಂಡಿಕೇಟ್ ಸದಸ್ಯ ಡಾ.ಗಜಾನನ್ ಹೆಗಡೆ ಮಾತನಾಡಿ, ಬದಲಾದ ವೈದ್ಯಕೀಯ ವಿಧಾನಗಳಲ್ಲಿ ಆಯುರ್ವೇದ ಪದ್ಧತಿ ದೇಶದಲ್ಲಿಯೇ ಎರಡನೇ ಸ್ಥಾನ ಪಡೆದಿದೆ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ವೈದ್ಯಕೀಯ ಕ್ಷೇತ್ರದಲ್ಲಿನ ಬದಲಾವಣೆಗಳಿಗೆ ತಕ್ಕಂತೆ ಹೊಂದಿಕೊಂಡು ಹೋದರೆ ಯಶಸ್ಸನ್ನು ಸಾಧಿಸಬಹುದು ಎಂದರು.
ಮುಧೋಳ ಕ್ಷೇತ್ರದ ಜನತೆಯ ಋುಣ ಮರೆಯಲಾರೆ: ಡಿಸಿಎಂ ಗೋವಿಂದ ಕಾರಜೋಳ
ಮುಧೋಳ: ಗುರುವಾರ ಸ್ಥಳೀಯ ಹೌಸಿಂಗ್ ಕಾಲೋನಿಯ ಉದ್ಯಾನದಲ್ಲಿ ಅಭಿಮಾನಿಗಳು ಆಯೋಜಿಸಿದ್ದ ತಮ್ಮ 74ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಗೋವಿಂದ ಕಾರಜೋಳ , ಜನ್ಮದಿನ ಆಚರಿಸಕೊಳ್ಳಬಾರದೆಂದು ನಿರ್ಧರಿಸಿದ್ದೆ. ಆದರೆ, ಅಭಿಮಾನಿಗಳು, ಕಾರ್ಯಕರ್ತರು ಸರಳವಾಗಿ ಆಚರಿಸುವುದಾಗಿ ಹೇಳಿದ್ದರಿಂದ ಅವರು ನನ್ನ ಮೇಲಿಟ್ಟಿರುವ ಅತಿಯಾದ ಅಭಿಮಾನ ಮತ್ತು ಪ್ರೀತಿಯಿಂದ ಹುಟ್ಟುಹಬ್ಬದ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಥಮ ಚಿಕಿತ್ಸಕರ ಪ್ರತಿಭಟನೆ
ಮಹಾಲಿಂಗಪುರ: ಇಲ್ಲಿನ ಜಿ.ಎಲ್.ಬಿಸಿ ಅತಿಥಿ ಗೃಹದಲ್ಲಿ ನಡೆದ ಪ್ರಥಮ ಚಿಕಿತ್ಸಕರ ಸಂಘದ ಸಭೆಯಲ್ಲಿ ಪ್ರಥಮ ಚಿಕಿತ್ಸಕರ ಸಂಘದ ರಾಜ್ಯಾಧ್ಯಕ್ಷ ಡಾ.ಮಹಾದೇವ ಕದ್ದಿಮನಿ ಮಾತನಾಡಿ, ಮಾರು ವರ್ಷಗಳಿಂದ ಸರ್ಕಾರದ ಯಾವುದೇ ವೈದ್ಯಕೀಯ ಸೇವೆಗಳಿಲ್ಲದ ಸ್ಥಳಗಳಲ್ಲಿ ಪ್ರಥಮ ಚಿಕಿತ್ಸಕರು ಗ್ರಾಮೀಣ ಭಾಗದ ಜನರಿಗೆ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ಸರ್ಕಾರ ನಮ್ಮ ಸೇವೆಯನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.
ಸಂಭ್ರಮದ ಬಾದಾಮಿ ಬನಶಂಕರಿ ರಥೋತ್ಸವ
ಬಾದಾಮಿ: ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಬಾದಾಮಿ-ಬನಶಂಕರಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಸಂಜೆ 5 ಗಂಟೆಗೆ ಮಾಹಾ ರಥೋತ್ಸವ ಸಹಸ್ರಾರು ಭಕ್ತರ ಉಪಸ್ಥಿತಿಯಲ್ಲಿ ಮಧ್ಯೆ ಸಡಗರ, ಸಂಭ್ರಮದಿಂದ ಜರುಗಿತು. ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ರಥಕ್ಕೆ ಉತ್ತತ್ತಿ, ನಿಂಬೆಹಣ್ಣು, ಬಾಳೆಹಣ್ಣು ಸಮರ್ಪಿಸಿ ಭಕ್ತಿ ಮೆರೆದ ಭಕ್ತ ಸಮೂಹ ಬನಶಂಕರಿದೇವಿ ನಿನ್ನ ಪಾದಕ ಶಂಭು ಕೋ... ಎಂದು ನಾಮಸ್ಮರಣೆ ಮಾಡಿದರು.
ಒಬ್ಬಟ್ಟಿನಿಂದ ಎಲ್ಲರೂ ಸೇರಿ ಜಾತ್ರೆ ಯಶಸ್ವಿಗೊಳಿಸಲು ನಿರ್ಧಾರ
ಸಾವಳಗಿ: ಗ್ರಾಮದ ಆರಾಧ್ಯದೇವಿ ಶ್ರೀ ಅಂಬಾಭವಾನಿ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ಪೂರ್ವಾಭಾವಿ ಸಭೆ ತಮ್ಮಣ್ಣಾ ಜೋಶಿ ನೇತೃತ್ವದಲ್ಲಿ ನಡೆಯಿತು.ಫೆ.16,17,18 ಮತ್ತು 19 ರಂದು ಅಂಬಾಭವಾನಿ ಜಾತ್ರೆ ಅದ್ಧೂರಿಯಾಗಿ ನಡೆಯಲಿದೆ. ಎಲ್ಲ ಸಮಾಜದ ಮುಖಂಡರು ತಮ್ಮ ಸಲಹೆ-ಸೂಚನೆ ನೀಡಬೇಕೆಂದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved