• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣುಮಕ್ಕಳು ಆದಿಶಕ್ತಿಯ ಪ್ರತಿರೂಪವಿದ್ದಂತೆ: ಭಾರತಿ ಬೆಳಗಲಿ
ರಬಕವಿ-ಬನಹಟ್ಟಿ: ರಬಕವಿಯ ಶ್ರೀಬನಶಂಕರಿ ಅಂಗನವಾಡಿಯಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸಿ ಉದ್ಘಾಟಿಸಿದ ಭಾರತಿ ಬೆಳಗಲಿ, ಹೆಣ್ಣುಮಕ್ಕಳು ಯಾವುದೇ ಕುಟುಂಬದಲ್ಲಿ ಜನಿಸಬೇಕಾದರೆ ಅಲ್ಲಿ ಪೂರ್ವ ಜನ್ಮದ ಪುಣ್ಯವಿರುತ್ತದೆ. ಹೆಣ್ಣು ಜನ್ಮ ನೀಡಿ ಪೋಷಿಸುವ ತಾಯಿಯಾಗಿ, ಸಂಸಾರದ ರಥ ಸಮರ್ಥವಾಗಿ ಸಾಗಲು ಪತಿಗೆ ನಿರಂತರ ಸಹಕರಿಸುತ್ತ ಕುಟುಂಬದ ಕುಡಿಗಳ ಭವಿಷ್ಯ ಉಜ್ವಲವಾಗಿಸಲು ಶ್ರಮಿಸುವ, ಕುಟುಂಬ ನಿರ್ವಹಣೆಯಲ್ಲಿ ಮತ್ತು ಎಲ್ಲ ಕ್ಷೇತ್ರಗಳಲ್ಲಿ ಪುರುಷನಿಗೆ ಸರಿಸಾಟಿಯಾಗಿ ದುಡಿಯುವ ಮೂಲಕ ಆದಿಶಕ್ತಿಯ ಪ್ರತಿರೂಪವಾಗಿದ್ದಾಳೆಂದರು.
ಇಳಕಲ್ಲ: ಸಂಭ್ರಮದ ಬನಶಂಕರದೇವಿ ರಥೋತ್ಸವ
ಇಳಕಲ್ಲ: ಬಾದಾಮಿಯ ಬನಶಂಕರಿ ದೇವಿಯ ಅಕ್ಕನೆಂದು ಕರೆಯು ಇಳಕಲ್ಲಿನ ಮುನವಳ್ಳಿ ಪೇಟಯ ಬನಶಂಕರಿ ದೇವಸ್ಥಾನದ ವೈಭವದ ರಥೋತ್ಸವ ಗುರುವಾರ ಸಂಜೆ ೬ ಗಂಟೆಗೆ ಅನೇಕ ವಾದಮೇಳ, ಸಹಸ್ರಾರು ಭಕ್ತರ ಮಧ್ಯೆ ಅತ್ಯಂತ ವಿಜ್ರಂಭಣೆಯಿಂದ ಜರುಗಿತು.
ಪ್ರಜಾಪ್ರಭುತ್ವ ದೇಶದಲ್ಲಿ ಮತದಾರರೇ ಪ್ರಭುಗಳು: ಡಾ.ಎಂ.ಎಸ್. ಪಾಟೀಲ
ಗುಳೇದಗುಡ್ಡ: ಇಲ್ಲಿನ ಭಂಡಾರಿ ಮತ್ತು ರಾಠಿ ಮಹಾವಿದ್ಯಾಲಯದಲ್ಲಿ ಜರುಗಿದ ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ಭಾರತೀಯ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರದ ಅಧ್ಯಕ್ಷತೆ ವಹಿಸಿ ಮಾತನಾಡಿ ಡಾ.ಎಂ.ಎಸ್. ಪಾಟೀಲ, ಪ್ರಜಾಪ್ರಭುತ್ವ ದೇಶದಲ್ಲಿ ಪ್ರಜೆಗಳ ಮತದಾನಕ್ಕೆ ಮಹತ್ವದ ಸ್ಥಾನವಿದೆ. ದೇಶದ ಅಭಿವೃದ್ಧಿ ಮತ್ತು ಕಲ್ಯಾಣದ ಹಿದೃಷ್ಟಿಯಿಂದ ಮತದಾರರು ರಾಷ್ಟ್ರದ ಆಸ್ತಿಯಾಗಿದ್ದಾರೆಂದು ಹೇಳಿದರು.
ಕಾಂಗ್ರೆಸ್‌ ಸಭೆಯಲ್ಲಿ ಪಕ್ಷ ಸೇರ್ಪಡೆ ವಿಚಾರಕ್ಕೆ ಜಟಾಪಟಿ
ರಬಕವಿ-ಬನಹಟ್ಟಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೇರದಾಳ ವಿಧಾನಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದು ಕೊಣ್ಣೂರರನ್ನು ಆಯ್ಕೆ ಮಾಡಿದ್ದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಾ.ಪದ್ಮಜೀತ ನಾಡಗೌಡ ಪಾಟೀಲ ನೇತೃತ್ವದ ನೂರಾರು ಕಾರ್ಯಕರ್ತರನ್ನು ಮರಳಿ ಪಕ್ಷಕ್ಕೆ ಕರೆತರುವ ವಿಚಾರದಲ್ಲಿ ಕಾರ್ಯಕರ್ತರ ಪರ-ವಿರೋಧ ಚರ್ಚೆಗಳು ನಡೆದು ಕೆಲಕಾಲ ಸಭೆಯಲ್ಲಿ ಗೊಂದಲ ಉಂಟಾಯಿತು. ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಎದುರಲ್ಲಿಯೇ ಈ ಘಟನೆ ನಡೆದಿದ್ದು, ಮುಜುಗರಕ್ಕೆ ಕಾರಣವಾಯಿತು.
ಪಂಚ ಗ್ಯಾರಂಟಿಗಳಿಂದ ಇಂದಿರಾ ಕನಸು ನನಸು: ಎಸ್‌.ಜಿ. ನಂಜಯ್ಯನಮಠ
ರಬಕವಿ-ಬನಹಟ್ಟಿ: ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿಯಾಗಿಸಿದೆಯಾ? ೫ ಗ್ಯಾರಂಟಿಗಳನ್ನು ನೀಡಿ ಜನಸಾಮಾನ್ಯರ ವಿಶ್ವಾಸಕ್ಕೆ ಪಾತ್ರವಾಗಿ ಇಂದಿರಾ ಗಾಂಧಿಯವರ ಕನಸು ನನಸು ಮಾಡುವಲ್ಲಿ ಸಿಎಂ ಸಿದ್ರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು. ಬನಹಟ್ಟಿಯ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ದೊಡ್ಡ ದೊಡ್ಡ ಉದ್ಯಮಿಗಳ ₹ ೧೨ ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಕೇವಲ ₹ ೮೦ ಸಾವಿರ ಕೋಟಿ ಹಂಚಿಕೆ ಮಾಡಿದ್ದರಿಂದ ರಾಜ್ಯ ಹಾಳಾಗುತ್ತದೆಯಾ? ಎಂದು ಪ್ರಶ್ನಿಸಿದರು.
ಆತ್ಮವಿಶ್ವಾಸದಿಂದ ಸಾಗಿದರೆ ಯಶಸ್ಸು ಖಚಿತ: ಪ್ರಾಚಾರ್ಯ ಕೆ.ಎಚ್. ಹೊಸೂರ
ಬಾಗಲಕೋಟೆ: ನಗರದ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ನಡೆದ 2023-24ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಬಿವಿವಿ ಸಂಘದ ಕಾಲೇಜು ಆಡಳಿತ ಮಂಡಳಿಯ ಪದನಿಮಿತ್ತ ಕಾರ್ಯದರ್ಶಿಗಳು ಹಾಗೂ ರಾಮದುರ್ಗ ಸ್ಟೇಟ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಕೆ.ಎಚ್. ಹೊಸೂರ ವಿದ್ಯಾರ್ಥಿಗಳು ಕಷ್ಟಗಳಿಗೆ ಹೆದರದೆ, ತಮ್ಮಲ್ಲಿರುವ ಪ್ರತಿಭೆ, ಆಸಕ್ತಿ ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಸಾಗಿದರೆ ಯಶಸ್ಸು ನಿಮ್ಮದಾಗುತ್ತದೆ ಎಂದು ಹೇಳಿದರು.
ಪುಲಕೇಶಿ, ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಕ್ರಮ ಕೈಗೊಳ್ಳಿ: ಸಂಸದ ಗದ್ದಿಗೌಡರ
ಬಾಗಲಕೋಟೆ: ಜಿಲ್ಲಾ ಪಂಚಾಯತಿ ನೂತನ ಸಭಾಭವನದಲ್ಲಿ ಬುಧವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಪಿ.ಸಿ. ಗದ್ದಿಗೌಡರ, ಐತಿಹಾಸಿಕ ಬಾದಾಮಿ ನಗರವನ್ನು ಅಂದಗೊಳಿಸಲು ಹಾಗೂ ಗತವೈಭವ ಮರುಕಳುಹಿಸುವ ಕಾರ್ಯವಾಗಬೇಕಿದ್ದು, ಈ ದಿಶೆಯಲ್ಲಿ ಚಾಲುಕ್ಯರ ಪ್ರಸಿದ್ಧ ರಾಜ ಇಮ್ಮಡಿ ಪುಲಕೇಶಿ ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗಳು ನಿರ್ಮಾಣಗೊಂಡಿವೆ. ಶೀಘ್ರ ಅವುಗಳ ಪ್ರತಿಷ್ಠಾಪನೆಗೆ ಸ್ಥಳ ಗುರುತಿಸುವ ಕಾರ್ಯವಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಬನಶಂಕರಿದೇವಿ ಪೀತಾಂಭರ ಸೀರೆ: ಪಾಲಕಿ ಮೆರವಣಿಗೆ
ಅಮೀನಗಡ: ಇಲಕಲ್ಲ ತಾಲೂಕಿನ ಗುಡೂರ(ಎಸ್.ಸಿ) ಗ್ರಾಮದಲ್ಲಿ ಶ್ರೀ ಹಂಪಿ ಹೇಮಕೂಟ ಶ್ರೀಗಾಯತ್ರಿ ಪೀಠದಿಂದ ಪಲ್ಲಕ್ಕಿಯೊಂದಿಗೆ ಪಾದಯಾತ್ರೆ ಮೂಲಕ ಬಾದಾಮಿಯ ಶ್ರೀ ಬನಶಂಕರೀದೇವಿಗೆ ಪೀತಾಂಬರ ಸೀರೆ ಸಮರ್ಪಣೆಗೆ ಹೊರಟಿದ್ದ ಮೆರವಣಿಗೆಯನ್ನು ಗುಡೂರಿನ ದೇವಾಂಗ ಸಮಾಜದವರು ಹಾಗೂ ಸಾರ್ವಜನಿಕರು ಗ್ರಾಮದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು.
ಕಾಂಗ್ರೆಸ್‌ನಿಂದ ರಾಜ್ಯದ ಜನತೆಗೆ ವಂಚನೆ: ಮಾಜಿ ಡಿಸಿಎಂ ಗೋವಿಂದ ಕಾರಜೋಳ
ಮುಧೋಳ: ರಾಜ್ಯದ ಮತದಾರರಿಗೆ ಸುಳ್ಳು ಭರವಸೆ ನೀಡಿ, ಮೋಸ ಮಾಡಿ ಮತಪಡೆದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬರಗಾಲ ಆರಂಭವಾಗಿದೆ, ಬರಕ್ಕೆ ರೈತರು ತತ್ತರಿಸಿ ಹೋಗಿದ್ದಾರೆ. ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ದೂರಿದರು. ಬುಧವಾರ ಸ್ಥಳೀಯ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇವು ಬ್ಯಾಂಕ್, ಗೋಶಾಲೆ ಈವರೆಗೂ ತೆರೆದಿಲ್ಲ. ಅನ್ನಕ್ಕಾಗಿ ಉತ್ತರ ಕರ್ನಾಟಕದ ಜನ ಗುಳೆ ಹೋಗುವುದು ತಪ್ಪಿಲ್ಲ. ಹೊಸ ಕಾಮಗಾರಿಗಳಂತೂ ಆರಂಭವಾಗಿಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಹಿಂಜಾವೇ ಮನವಿ
ಇಳಕಲ್ಲ: ಫೇಸ್ಬುಕ್ ಖಾತೆಯಲ್ಲಿ ಹಿಂದು ದೇವರ ಬಗ್ಗೆ ಅಶ್ಲೀಲ ಚಿತ್ರ ಪೋಸ್ಟ್ ಹಾಕುವ ಮೂಲಕ ಹಿಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದ್ದು, ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಇಳಕಲ್ಲ ತಾಲೂಕು ಹಿಂದು ಜಾಗರಣಾ ವೇದಿಕೆ ನಗರದ ಪೋಲಿಸ್ ಠಾಣೆಯ ಪಿಎಸ್ಐ ಹಾಗೂ ತಾಲೂಕು ಗ್ರೇಡ್-೨ ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved