• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಂಭುಲಿಂಗಾನಂದ ಸ್ವಾಮೀಜಿ ಪಲ್ಲಕ್ಕಿ ಉತ್ಸವ ಸಂಭ್ರಮ
ಲೋಕಾಪುರ: ಪಟ್ಟಣದ ವೆಂಕಟೇಶ್ವನಗರದ ಬ್ರಹ್ಮಲೀನ ಶಂಭುಲಿಂಗಾನಂದ ಸ್ವಾಮಿಗಳ 26ನೆಯ ಪುಣ್ಯಾರಾಧನೆ ಪ್ರಯುಕ್ತ ಶನಿವಾರ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು. ಕಾಡರಕೊಪ್ಪದ ನ್ಯಾಯವೇಂದಾಂತಾಚಾರ್ಯರ ದಯಾನಂದ ಸರಸ್ವತಿ ಮಹಾಸ್ವಾಮೀಜಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಶಂಭುಲಿಂಗಾನಂದ ಆಶ್ರಮದಿಂದ ಹೊರಟ ಅಲಂಕೃತಗೊಂಡ ಪಲ್ಲಕ್ಕಿ ಉತ್ಸವ ಸಕಲ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಡೊಳ್ಳು, ಸಮಾಳ, ನೆರೆದಿದ್ದ ಜನರ ಗಮನ ಸೆಳೆಯಿತು. ಸುಮಂಗಲೆಯರು ಆರತಿಯೊಂದಿಗೆ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಜಾನುವಾರು ಜಾತ್ರೆ, ಗಣರಾಜ್ಯೋತ್ಸವದ ಪೂರ್ವಭಾವಿ ಸಭೆ
ಬಾದಾಮಿ: ಸುಕ್ಷೇತ್ರ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿರುವ ಜಾನುವಾರು ಜಾತ್ರೆ ಹಾಗೂ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ ಸಭಾಭವನದಲ್ಲಿ ಶನಿವಾರ ನಡೆದ ಜಾನುವಾರು ಜಾತ್ರೆ ಹಾಗೂ ಗಣರಾಜ್ಯೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಜ.೩೦ ರಿಂದ ಫೆ.೩ರವರೆಗೆ ಎಪಿಎಂಸಿ ಆವರಣದಲ್ಲಿ ಜಾನುವಾರು ಜಾತ್ರೆ ಹಮ್ಮಿಕೊಳ್ಳಲಾಗಿದೆ.
ಬ್ರಹ್ಮಾನಂದ ಪರಮಹಂಸರ ರಥೋತ್ಸವ ಸಂಭ್ರಮ
ಬಾದಾಮಿ: ಕುಳಗೇರಿ ಕ್ರಾಸ್ ಮಲಪ್ರಭಾ ತಟದಲ್ಲಿರುವ ಸುಕ್ಷೇತ್ರ ಗೋವನಕೊಪ್ಪ ಬ್ರಹ್ಮಾನಂದ ಪರಮಹಂಸ ೮೬ನೇ ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಮಧ್ಯೆ ವಿಜೃಂಭಣೆಯಿಂದ ಶನಿವಾರ ನೆರವೇರಿತು. ಆರತಿ, ಕುಂಭ ಹೊತ್ತ ಮಹಿಳೆಯರ ಸಾಲು, ಸಕಲ ವಾದ್ಯಗಳೊಂದಿಗೆ ಸುಂದರವಾಗಿ ಅಲಂಕಾರಗೊಂಡಿದ್ದ ರಥ ಎಳೆದು ಭಕ್ತರು ಧನ್ಯತಾಭಾವ ಮೆರೆದರು.
ರುಚಿಕಟ್ಟಾದ ಅಡುಗೆ ತಯಾರಿಕೆ ಒಂದು ಕಲೆ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಬಾದಾಮಿ: ನಗರದ ಶ್ರೀ ವೀರಪುಲಿಕೇಶಿ ಸಂಸ್ಥೆಯ ಬಸವಭವನದಲ್ಲಿ ತಾಪಂ, ಪ್ರಧಾನಮಂತ್ರಿ ಪೋಷಣ್‌ ಶಕ್ತಿ ಅಭಿಯಾನ ಹಾಗೂ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಸರ್ಕಾರಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಅಡುಗೆ ಸಿಬ್ಬಂದಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಮತ್ತು ತಾಲೂಕು ಮಟ್ಟದ ಅಡುಗೆ ತಯಾರಿಕಾ ಸ್ಪರ್ಧೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಶಾಸಕ ಭೀಮಸೇನ ಚಿಮ್ಮನಕಟ್ಟಿ, ರುಚಿಕಟ್ಟಾದ ಅಡುಗೆ ತಯಾರಿಸುವುದು ಸಹ ಒಂದು ಕಲೆ. ಶಾಲೆ ಮತ್ತು ಮನೆಗಳಲ್ಲಿ ರುಚಿಶುಚಿಯಾದ ಅಡುಗೆ ತಯಾರಿಕೆಯಲ್ಲಿ ಅಡುಗೆ ಸಿಬ್ಬಂದಿ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.
ಭಾಷೆ ಸತ್ತರೆ ಒಂದು ಜನಾಂಗ ಸತ್ತಂತೆ: ಸಾಹಿತಿ ಮಲ್ಲಿಕಾರ್ಜುನ ಬನ್ನಿ
ಗುಳೇದಗುಡ್ಡ: ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಹಾಗೂ ಸಾವಿತ್ರಿಭಾಯಿ ಪುಲೆ ಶಿಕ್ಷಕಿಯರ ಸಂಘದ ಆಶ್ರಯದಲ್ಲಿ ಪಟ್ಟಣದ ಸರಸ್ವತಿ ವಿದ್ಯಾಮಂದಿರದ ಸಭಾಭವನದಲ್ಲಿ ಶನಿವಾರ ಭಾಗೀರಥಿ ಆಲೂರ ಅವರ ನೆನಪಿನಂಗಳ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಮಲ್ಲಿಕಾರ್ಜುನ ಬನ್ನಿ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ ನಶಿಸಿ ಹೋಗುತ್ತಿಲ್ಲ. ಬದಲಾಗಿಭಾಷೆ ಪ್ರಬುದ್ಧವಾಗಿ ಬೆಳೆಯುತ್ತಿದೆ. ಭಾಷೆ, ಭಾವನೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಸಾಹಿತಿ ಚಂದ್ರಶೇಖರ ಹೆಗಡೆ ಪುಸ್ತಕ ಅವಲೋಕನ ಮಾಡಿದರು.
ಗಣರಾಜ್ಯೋತ್ಸವ ಪೂರ್ವಭಾವಿ ಸಭೆ
ಮಹಾಲಿಂಗಪುರ : ಗಣರಾಜ್ಯೋತ್ಸವ ಪ್ರಯುಕ್ತ ಪುರಸಭೆ ವತಿಯಿಂದ ಶಾಲಾ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಹೇಳಿದರು. ಸ್ಥಳೀಯ ಪುರಸಭಾ ಸಭಾಭವನದಲ್ಲಿ ಕರೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿ,ಎರಡು ದಿನಗಳ ಕಾಲ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜ.25 ರ ಸಂಜೆ ಪುರಸಭಾ ವ್ಯಾಪ್ತಿಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ದೇಶ ಭಕ್ತಿ ಗೀತೆ ಸ್ಪರ್ಧೆ, ಸ್ವಚ್ಛ ಭಾರತ ರೂಪಕಗಳು ಹಾಗೂ 26 ರ ಬೆಳಿಗ್ಗೆ ಧ್ವಜಾರೋಹಣ ಮತ್ತು ಪಥಸಂಚಲನೆ ಜರುಲಿವೆ ಎಂದರು.
ಕುಮಾರೇಶ್ವರ ಆಸ್ಪತ್ರೆಗೆ ಸ್ತನ್ಯಪಾನ ಸ್ನೇಹಿ ಆಸ್ಪತ್ರೆ ಮಾನ್ಯತೆ
ಬಾಗಲಕೋಟೆ: ಬಿವಿವಿ ಸಂಘದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಸ್ತನ್ಯಪಾನಸ್ನೇಹಿ ಆಸ್ಪತ್ರೆ ಎಂದು ರಾಷ್ಟ್ರೀಯ ಮಾನ್ಯತಾ ಕೇಂದ್ರದಿಂದ (ನ್ಯಾಕ್‌) ಮಾನ್ಯತೆ ದೊರೆತಿದೆ. ಸ್ತನ್ಯಪಾನ ಸ್ನೇಹಿ ಆಸ್ಪತ್ರೆ ಯೋಜನೆಯಡಿ (ಬಿ.ಎಫ್.ಎಚ್.ಐ) ದೆಹಲಿಯ ರಾಷ್ಟ್ರೀಯ ಮಾನ್ಯತಾ ಕೇಂದ್ರ ಪರಿವೀಕ್ಷಣೆ ನಡೆಸಿ ಸ್ತನ್ಯಪಾನಸ್ನೇಹಿ ಮಾನ್ಯತೆ-ಗ್ರೇಡ್ 1 ಎಂದು ಪ್ರಮಾಣಪತ್ರ ನೀಡಿದೆ. ಕುಮಾರೇಶ್ವರ ಆಸ್ಪತ್ರೆ ಈ ಮಾನ್ಯತೆ ಪಡೆದ ರಾಜ್ಯದ ಎರಡನೇ ಮತ್ತು ಉತ್ತರ ಕರ್ನಾಟಕದ ಪ್ರಥಮ ಆಸ್ಪತ್ರೆ ಎನ್ನುವುದು ವಿಶೇಷವಾಗಿದೆ.
ವಚನಗಳಲ್ಲಿ ಗಣಿತ ಬಳಸಿ ಅಧ್ಯಾತ್ಮ ಸಮೀಕರಿಸಿದ್ದ ಶರಣರು: ಸಾಹಿತಿ ಮಲ್ಲಿಕಾರ್ಜುನ ಯಾಳವಾರ
ಬಾಗಲಕೋಟೆ: 12ನೇ ಶತಮಾನದಲ್ಲಿ ಶರಣರು ಗಣಿತ ಸಂಖ್ಯೆಗಳನ್ನು ವಚನಗಳಲ್ಲಿ ಬಳಸುವುದರ ಮೂಲಕ ಅಧ್ಯಾತ್ಮವನ್ನು ಸಮೀಕರಿಸಿದ್ದರು ಎಂದು ಹಿರಿಯ ಸಾಹಿತಿ ಮಲ್ಲಿಕಾರ್ಜುನ ಯಾಳವಾರ ಹೇಳಿದರು. ನಗರದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ ಹಾಗೂ ಗಣಿತಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ವಚನಗಳಲ್ಲಿ ಗಣಿತ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೀರಾಮಚಂದ್ರ ಹಿಂದು ಸಂಸ್ಕೃತಿಯ ಪ್ರತೀಕ: ಶಾಸಕ ಸಿದ್ದು ಸವದಿ
ರಬಕವಿ-ಬನಹಟ್ಟಿ: ರಬಕವಿ-ಬನಹಟ್ಟಿ ತಾಲೂಕಿನ ವಿವಿಧ ಹಿಂದು ಸಂಘಟನೆಗಳು ಮಕ್ಕಳಿಗೆ ಶನಿವಾರ ಆಯೋಜಿಸಿದ್ದ ರಾಮ, ಸೀತಾ, ಲಕ್ಷ್ಮಣ ಮತ್ತು ಹನುಮಾನ್ ವೇಷಧಾರಿಗಳ ಸಮಾವೇಶ ನಡೆಯಿತು. ವೇದಿಕೆಯಲ್ಲಿ ಒಟ್ಟು ೧೫ ಶಾಲೆಗಳ ೫೧೦ ಮಕ್ಕಳು ವೇಷಧಾರಿಗಳಾಗಿ ಸಭಿಕರ ಮನಸೆಳೆದರು. ಶ್ರೀರಾಮ, ಸೀತಾಮಾತೆ, ಲಕ್ಷ್ಮಣ ಮತ್ತು ಹನುಮಂತ ಸೇರಿ ೧೧೬ ತಂಡಗಳು, ೩೬ ವಿದ್ಯಾರ್ಥಿನಿಯರು ಸೀತಾಮಾತೆ ಮತ್ತು ೧೦ ವಿದ್ಯಾರ್ಥಿಗಳು ಶ್ರೀರಾಮ ವೇಷಧಾರಿಗಳಾಗಿ ಮಿಂಚಿದರು.
ವಿಕಲಚೇತನ ಮಕ್ಕಳ ಬಗ್ಗೆ ಕೀಳರಿಮೆ ಬೇಡ: ಎಂ.ಪಿ.ಮಾಗಿ
ಗುಳೇದಗುಡ್ಡ: ಪಟ್ಟಣದ ಬಾಲಕರ ಪ.ಪೂ. ಕಾಲೇಜಿನಲ್ಲಿ 2023-24ನೇ ಸಾಲಿನ ವಿಕಲಚೇತನ ಮಕ್ಕಳ ಕ್ರೀಡೆ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಾಲಕಿಯರ ಪ.ಪೂ. ಕಾಲೇಜು(ಪ್ರೌಢಶಾಲೆ ವಿಭಾಗ) ಉಪಪ್ರಾಚಾರ್ಯ ಎಂ.ಪಿ. ಮಾಗಿ ಮಾತನಾಡಿ, ವಿಕಲಚೇತನ ಮಕ್ಕಳ ಬಗ್ಗೆ ಕೀಳರಿಮೆ ಬೇಡ. ಇತರ ಸಾಮಾನ್ಯ ಮಕ್ಕಳಂತೆ ಕಾಳಜಿ ವಹಿಸಿ ಸಮನ್ವಯಗೊಳಿಸಿ ಬೋಧಿಸಿದರೆ ಇತರರಂತೆ ಸಾಧನೆ ಮಾಡುತ್ತಾರೆ ಎಂದರು.ವಿಕಲಚೇತನ ಮಕ್ಕಳಿಗೆ ಚಮಚದಲ್ಲಿ ಲಿಂಬೆ ಹಣ್ಣು ಇಟ್ಟುಕೊಂಡು ಓಡುವ ಸ್ಪರ್ಧೆ, ಕೆರೆದಡ, ಕಪ್ಪೆ ಓಟ, ಓಟದ ಸ್ಪರ್ಧೆ ಸೇರಿಂತೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ, ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 372
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved