• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋಟೆಲ್‌ನಲ್ಲಿ ಅನಿಲ ಸೋರಿಕೆ: ಬೆಂಕಿ ತಗುಲಿ ಸಿಬ್ಬಂದಿ ಸ್ಥಿತಿ ಗಂಭೀರ
ರಬಕವಿ-ಬನಹಟ್ಟಿ: ಬನಹಟ್ಟಿಯಲ್ಲಿ ಸಿಲಿಂಡರ್‌ ಅನಿಲ ಸೋರಿಕೆಯಿಂದ ಹತ್ತಿದ ಬೆಂಕಿಗೆ ಹೊಟೇಲ್ ಕಾರ್ಮಿಕನೋರ್ವ ಗಂಭೀರ ಗಾಯಗೊಂಡ ಪರಿಣಾಮ ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಹಟ್ಟಿಯ ಬಸ್ ನಿಲ್ದಾಣ ಎದುರಿನ ಸುಖಸಾಗರ ಹೋಟೆಲ್‌ನಲ್ಲಿ ಮಧ್ಯಾಹ್ನ ೧ ಗಂಟೆ ಸುಮಾರಿಗೆ ಹೋಟೆಲ್‌ನಲ್ಲಿ ಭಾರೀ ಶಬ್ದ ಕೇಳಿಬಂದಿದ್ದರಿಂದ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹಾಗೂ ಗ್ರಾಹಕರು ಭಯಗೊಂಡು ಹೊರಗೆ ಓಡಿ ಬಂದರು.
ಸತ್ಯ, ಪ್ರಾಮಾಣಿಕತೆಯಿಂದ ನಡೆದರೆ ಜೀವನ ಸುಖಮಯ: ರಂಭಾಪುರಿ ಜಗದ್ಗುರು
ಕಲಾದಗಿ: ಇತಿಹಾಸ ಹೇಳುತ್ತಿದೆ. ನಿನ್ನೆ ಸುಖ ಇತ್ತು ಎಂದು, ವಿಜ್ಞಾನ ಹೇಳುತ್ತಿದೆ ನಾಳೆ ಸುಖ ಇದೆ ಎಂದು. ಆದರೆ ಧರ್ಮ ಹೇಳುತ್ತದೆ ಮನುಷ್ಯನಲ್ಲಿ ಸತ್ಯ, ಪ್ರಾಮಾಣಿಕತೆಯಿಂದ ಇದ್ದರೆ ನಿತ್ಯವೂ ಸುಖ ಇದೆ ಎಂದು ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ಡಾ,ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಹೇಳಿದರು. ಉದಗಟ್ಟಿ ಗ್ರಾಮದಲ್ಲಿ ಶನಿವಾರ ಮಹಾಪುರಾಣ ಮಂಗಲ ಹಾಗೂ ಧರ್ಮ ಜಾಗೃತಿ ಸಭೆಯಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಸರ್ವ ಕಾಲಕ್ಕೂ, ಸರ್ವ ಸಮುದಾಯಕ ಬೆಳಕು ಕೊಡುತ್ತಿರೋದು ಧರ್ಮ ಮಾತ್ರ ಎಂದರು.
ತಹಸೀಲ್ದಾರ್‌ ನೇತೃತ್ವದಲ್ಲಿ ಮತಗಟ್ಟೆಗಳ ಪರಿಶೀಲನೆ
ತೇರದಾಳ: ಬರಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳ ಪರಿಶೀಲನೆ ಕಾರ್ಯ ಆರಂಭವಾಗಿದ್ದು, ಪಟ್ಟಣದ ಶ್ರೀಸಿದ್ಧೇಶ್ವರ ಶಾಲೆಯಲ್ಲಿನ ೪ ಮತಗಟ್ಟೆಗಳನ್ನು ರಬಕವಿ-ಬನಹಟ್ಟಿ ತಹಸೀಲ್ದಾರ್ ಗಿರೀಶ ಸ್ವಾದಿ, ತೇರದಾಳ ತಹಸೀಲ್ದಾರ್ ವಿಜಯಕುಮಾರ ಕಡಕೋಳ ಪರಿಶೀಲಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಪ್ರತಿಭಟನೆ
ಮೆಡಿಕಲ್ ಕಾಲೇಜಿಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡದಿರುವುದಕ್ಕೆ ಆಕ್ರೋಶ ಹೊರಹಾಕಿದ್ದು, ಮಾನವ ಸರಪಳಿಸಿ ನಿರ್ಮಿಸಿದರು.
ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲು ವ್ಯಾಪಾರಸ್ಥರ ಆಗ್ರಹ
ಬಾಗಲಕೋಟೆ: ಮುಳ ಗಡೆಯಿಂದಾಗಿ ಕುಂಠಿತವಾಗಿರುವ ವ್ಯಾಪಾರ ವಹಿವಾಟು ಚೇತರಿಸಿಕೊಳ್ಳುಲು, ಒಂದೇ ಸೂರಿನಡಿ ಎಲ್ಲ ವ್ಯವಸ್ಥೆ ಕಲ್ಪಿಸಲು ನವನಗರದ ಯೂನಿಟ್ 3ರಲ್ಲಿ 250 ಎಕರೆ ವ್ಯಾಪ್ತಿ ಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಬೇಕು ಎಂದು ಬಾಗಲಕೋಟೆ ವಿವಿಧ ವ್ಯಾಪಾರಸ್ಥರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ವ್ಯಾಪಾರಸ್ಥರು ಬಿಟಿ ಡಿಎ ಸೂಪರಿಡೆಂಟ್ ಇಂಜಿನಿಯರ್ ವಿಜಯಕುಮಾರ ಹೆಬ್ಬಳ್ಳಿ ಅವರಿಗೆ ಮನವಿ ಸಲ್ಲಿಸಿದರು.
ವಿವಾಹ ಆಮಂತ್ರಣ ಜೊತೆ ಸಿಯಾರಾಮ್ ವಿಗ್ರಹ ಕಾಣಿಕೆ
ರಬಕವಿ-ಬನಹಟ್ಟಿ: ಮದುವೆ ಸಮಾರಂಭಕ್ಕೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುವುದು ಸಾಮಾನ್ಯ. ಆದರೆ, ಇಲ್ಲೊಬ್ಬರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಸವಿನೆನಪಿಗಾಗಿ ೨ ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪಂಚಲೋಹದ ರಾಮ, ಲಕ್ಷ್ಮಣ ಸೀತೆ ಹಾಗೂ ಹನುಮಂತನ ಮೂರ್ತಿ ನೀಡಿ ಮದುವೆಗೆ ಆಮಂತ್ರಣ ನೀಡುತ್ತಿದ್ದಾರೆ.
ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಕೆರೂರ: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ನಾಮಫಲಕ ಹೊತ್ತ ರಥಯಾತ್ರೆ ಗುರುವಾರ ರಾತ್ರಿ ಕೆರೂರ ಪಟ್ಟಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಪುಷ್ಪವೃಷ್ಟಿಗೈದು ಬರಮಾಡಿಕೊಂಡರು.
ರೋಗಿಗಳ ಆರೈಕೆ ಮಾಡುವ ನರ್ಸ್‌ಗಳ ಸೇವೆಗೆ ಬೆಲೆ ಕಟ್ಟಲಾಗದು: ಡಾ.ವೆಂಕಟೇಶ ಮಲಘಾಣ
ಮಹಾಲಿಂಗಪುರ: ರೋಗಿಗಳ ಸೇವೆ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಕಾರ್ಯ. ವೈದ್ಯಕೀಯ ರಂಗದಲ್ಲಿ ರೋಗಿಗಳ ಆರೈಕೆ ಮಾಡುವ ನರ್ಸ್‌ಗಳ ಸೇವೆಗೆ ಬೆಲೆ ಕಟ್ಟಲಾಗದು. ಅವರು ಮಾಡುವ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಮುಧೋಳ ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ಹೇಳಿದರು. ನಗರದ ದಿ.ಡಾ.ವಿ.ಪಿ. ಕನಕರೆಡ್ಡಿ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ ಕಾಲೇಜಿನಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ದೀಪ ಬೆಳಗಿಸುವ ಹಾಗೂ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಪಂ ಅಧ್ಯಕ್ಷೆಯ ಪುತ್ರ, ಸದಸ್ಯನ ಮಧ್ಯೆ ಮಾರಾಮಾರಿ
ಹುನಗುಂದ: ರಾಜಕೀಯ ವೈಷಮ್ಯದ ಹಿನ್ನೆಲೆ ಗ್ರಾಮ ಪಂಚಾಯತಿ ಅಧ್ಯಕ್ಷೆಯ ಪುತ್ರ ಹಾಗೂ ಗ್ರಾಪಂ ಸದಸ್ಯನ ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಮೂವರು ಗಾಯಗೊಂಡ ಘಟನೆ ತಾಲೂಕಿನ ಧನ್ನೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಪಂ ಸದಸ್ಯ ಸುರೇಶ್ ತಳವಾರ, ಸುನಂದಾ ತಳವಾರ, ಸಂಜೀವ್ ತಳವಾರ ಗಾಯಗೊಂಡವರು. ಹುನಗುಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗೀತ ವಿದ್ಯೆಗೆ ಪರಿಶ್ರಮ ಅವಶ್ಯ:ಬರಗುಂಡಿ
ಗುಳೇದಗುಡ್ಡ: ಸಂಗೀತ ಕಲೆಯಲ್ಲಿ ಸಾಧನೆ ಮಾಡುವುದು ಸುಲಭವಲ್ಲ. ಶ್ರದ್ಧೆ, ಆಸಕ್ತಿ, ನಿರಂತರ ಪರಿಶ್ರಮದಿಂದ ಸಾಧನೆ ಮಾಡಿದರೆ ಮಾತ್ರ ಸಂಗೀತ ಒಲಿಯುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಇಲ್ಲಿನ ವಿಶ್ವಾಸ ಸಂಗೀತ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದೊಂದಿಗೆ ನಡೆದ ಸಂಗೀತ ಸೌರಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 413
  • next >
Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved