• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸದಾಗಿ 21,919 ಯುವ ಮತದಾರರು ಸೇರ್ಪಡೆ: ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ.
ಬಾಗಲಕೋಟೆ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ ಒಟ್ಟು 21,919 ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಪರಿಷ್ಕೃತ ಮತದಾರರ ಪಟ್ಟಿ ವಿತರಿಸಿ ಮಾತನಾಡಿದ ಅವರು, ಅಂತಿಮ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 1726 ಮತಗಟ್ಟೆಗಳಿದ್ದು, ಒಟ್ಟು 15,91,208 ಮತದಾರರಿದ್ದಾರೆ. ಈ ಪೈಕಿ 7,88,051 ಪುರುಷ ಮತದಾರರು, 8,03,068 ಮಹಿಳಾ ಮತದಾರರು ಹಾಗೂ 89 ತೃತೀಯ ಲಿಂಗ ಮತದಾರರು ಇದ್ದಾರೆ. ಲಿಂಗಾನುಪಾತ ಪ್ರತಿ 1000 ಪುರುಷ ಮತದಾರರಿಗೆ 874 ಮಹಿಳಾ ಮತದಾರರಿದ್ದಾರೆ ಎಂದು ತಿಳಿಸಿದರು.
ಶ್ರೀರಾಮ ಮಹಿಮಾ ಪುರುಷ: ಶಾಸಕ ವಿಜಯಾನಂದ ಕಾಶಪ್ಪನವರ
ಇಳಕಲ್ಲ: ರಾಮನ ಮಹಿಮೆ ಜಗತ್ತಿನಲ್ಲೇ ಪ್ರಸಿದ್ಧಿಯಾಗಿದೆ. ಆತ ಮಹಿಮಾ ಪುರುಷ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ರಾಮಲಲ್ಲಾ ಪ್ರತಿಷ್ಠಾಪನೆ ದಿನವಾದ ಸೋಮವಾರ ಇಳಕಲ್ಲ ನಗರದ ಮಾಹೇಶ್ವರಿ ಸಮಾಜದ ರಾಮ ಮಂದಿರದಲ್ಲಿ ರಾಮ, ಸೀತಾ, ಲಕ್ಷ್ಮಣ ಹಾಗೂ ಹನುಮಂತ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಮಾಡಿ ರಾಜ್ಯದ ಜನರನ್ನು ಸಂತಸ, ಸಮೃದ್ಧಿಯಾಗಿ ಇಡುವಂತೆ ದೇವರಲ್ಲಿ ಪ್ರಾರ್ಥಿಸಿದರು. ನಂತರ ಮಾಹೇಶ್ವರಿ ಸಮಾಜದ ಹತ್ತು ಸಾವಿರಕ್ಕೂ ಅಧಿಕ ಜನರೊಂದಿಗೆ ಭಾವಚಿತ್ರದ ಭವ್ಯ ಮೆರವಣಿಗೆಯಲ್ಲಿ ಭಜನೆಗಳನ್ನು ಮಾಡುತ್ತ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಭ್ರಮಿಸಿದರು.
ನುಡಿದಂತೆ ನಡೆದ ನೇರ ನಿಷ್ಠುರ ನಿಜಶರಣ: ಶಾಸಕ ಬಿ.ಬಿ. ಚಿಮ್ಮನಕಟ್ಟಿ
ಬಾದಾಮಿ: ೧೨ನೇ ಶತಮಾನದಲ್ಲಿ ಬಸವಣ್ಣನವರು ಕಾಯಕ ಯೋಗಿಗಳನ್ನು ಗುರುತಿಸಿ ಲಿಂಗಧಾರಣೆ ಮಾಡಿ ಶರಣ ಸಂಸ್ಕೃತಿಯಿಂದ ಅನುಭವ ಮಂಟಪದ ಮೂಲಕ ಲೋಕ ಕಲ್ಯಾಣಾರ್ಥ ಕಾಲಜ್ಞಾನ ಚಿಂತನೆ ನಡೆಸಿದ್ದರು. ಎಲ್ಲ ಶರಣರಗಿಂತ ಅಂಬಿಗರ ಚೌಡಯ್ಯನವರು ದಿಟ್ಟ ಮತ್ತು ಕ್ರಾಂತಿಕಾರಕ ನುಡಿದಂತೆ ನಡೆದು ನೇರ, ನಿಷ್ಠುರ ವ್ಯಕ್ತಿ ಎಂದು ಹೆಸರುವಾಸಿಯಾದವರು ಅಂಬಿಗರ ಚೌಡಯ್ಯ ಎಂದು ಶಾಸಕ ಬಿ.ಬಿ. ಚಿಮ್ಮನಕಟ್ಟಿ ಹೇಳಿದರು. ಭಾನುವಾರ ಕುಮಾರೇಶ್ವರ ಸಭಾಭವನ ಮಂಟಪದಲ್ಲಿ ತಾಲೂಕು ಆಡಳಿತ ಮತ್ತು ಅಂಬಿಗರ ಸಮಾಜದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ೯೦೪ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲರಿಗೂ ಶರಣರು ಎಂದಿದ್ದರೆ. ಅಂಬಿಗರ ಚೌಡಯ್ಯನವರಿಗೆ ನಿಜಶರಣ ಎಂದು ಕರೆದರು.
ಶ್ರೀರಾಮ ಚರಿತಾಮೃತ ರೂಪಕ ಪ್ರದರ್ಶನ
ಮಹಾಲಿಂಗಪುರ: ಅಯೋಧ್ಯೆಯಲ್ಲಿ ಸೋಮವಾರ ಶ್ರೀ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಸ್ಥಳೀಯ ಜೆಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಶ್ರೀರಾಮ ಚರಿತಾಮೃತ ರೂಪಕ ಪ್ರದರ್ಶನ ಹಾಗೂ ಅಯೋಧ್ಯೆ ರಾಮಮಂದಿರ ಭವ್ಯ ಪ್ರತಿಕೃತಿ ಜನಮನ ಸೂರೆಗೊಂಡಿತು.
ಶಂಭುಲಿಂಗಾನಂದ ಸ್ವಾಮೀಜಿ ಪಲ್ಲಕ್ಕಿ ಉತ್ಸವ ಸಂಭ್ರಮ
ಲೋಕಾಪುರ: ಪಟ್ಟಣದ ವೆಂಕಟೇಶ್ವನಗರದ ಬ್ರಹ್ಮಲೀನ ಶಂಭುಲಿಂಗಾನಂದ ಸ್ವಾಮಿಗಳ 26ನೆಯ ಪುಣ್ಯಾರಾಧನೆ ಪ್ರಯುಕ್ತ ಶನಿವಾರ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು. ಕಾಡರಕೊಪ್ಪದ ನ್ಯಾಯವೇಂದಾಂತಾಚಾರ್ಯರ ದಯಾನಂದ ಸರಸ್ವತಿ ಮಹಾಸ್ವಾಮೀಜಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಶಂಭುಲಿಂಗಾನಂದ ಆಶ್ರಮದಿಂದ ಹೊರಟ ಅಲಂಕೃತಗೊಂಡ ಪಲ್ಲಕ್ಕಿ ಉತ್ಸವ ಸಕಲ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಡೊಳ್ಳು, ಸಮಾಳ, ನೆರೆದಿದ್ದ ಜನರ ಗಮನ ಸೆಳೆಯಿತು. ಸುಮಂಗಲೆಯರು ಆರತಿಯೊಂದಿಗೆ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಜಾನುವಾರು ಜಾತ್ರೆ, ಗಣರಾಜ್ಯೋತ್ಸವದ ಪೂರ್ವಭಾವಿ ಸಭೆ
ಬಾದಾಮಿ: ಸುಕ್ಷೇತ್ರ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿರುವ ಜಾನುವಾರು ಜಾತ್ರೆ ಹಾಗೂ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ ಸಭಾಭವನದಲ್ಲಿ ಶನಿವಾರ ನಡೆದ ಜಾನುವಾರು ಜಾತ್ರೆ ಹಾಗೂ ಗಣರಾಜ್ಯೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಜ.೩೦ ರಿಂದ ಫೆ.೩ರವರೆಗೆ ಎಪಿಎಂಸಿ ಆವರಣದಲ್ಲಿ ಜಾನುವಾರು ಜಾತ್ರೆ ಹಮ್ಮಿಕೊಳ್ಳಲಾಗಿದೆ.
ಬ್ರಹ್ಮಾನಂದ ಪರಮಹಂಸರ ರಥೋತ್ಸವ ಸಂಭ್ರಮ
ಬಾದಾಮಿ: ಕುಳಗೇರಿ ಕ್ರಾಸ್ ಮಲಪ್ರಭಾ ತಟದಲ್ಲಿರುವ ಸುಕ್ಷೇತ್ರ ಗೋವನಕೊಪ್ಪ ಬ್ರಹ್ಮಾನಂದ ಪರಮಹಂಸ ೮೬ನೇ ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಮಧ್ಯೆ ವಿಜೃಂಭಣೆಯಿಂದ ಶನಿವಾರ ನೆರವೇರಿತು. ಆರತಿ, ಕುಂಭ ಹೊತ್ತ ಮಹಿಳೆಯರ ಸಾಲು, ಸಕಲ ವಾದ್ಯಗಳೊಂದಿಗೆ ಸುಂದರವಾಗಿ ಅಲಂಕಾರಗೊಂಡಿದ್ದ ರಥ ಎಳೆದು ಭಕ್ತರು ಧನ್ಯತಾಭಾವ ಮೆರೆದರು.
ರುಚಿಕಟ್ಟಾದ ಅಡುಗೆ ತಯಾರಿಕೆ ಒಂದು ಕಲೆ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಬಾದಾಮಿ: ನಗರದ ಶ್ರೀ ವೀರಪುಲಿಕೇಶಿ ಸಂಸ್ಥೆಯ ಬಸವಭವನದಲ್ಲಿ ತಾಪಂ, ಪ್ರಧಾನಮಂತ್ರಿ ಪೋಷಣ್‌ ಶಕ್ತಿ ಅಭಿಯಾನ ಹಾಗೂ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಸರ್ಕಾರಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಅಡುಗೆ ಸಿಬ್ಬಂದಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಮತ್ತು ತಾಲೂಕು ಮಟ್ಟದ ಅಡುಗೆ ತಯಾರಿಕಾ ಸ್ಪರ್ಧೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಶಾಸಕ ಭೀಮಸೇನ ಚಿಮ್ಮನಕಟ್ಟಿ, ರುಚಿಕಟ್ಟಾದ ಅಡುಗೆ ತಯಾರಿಸುವುದು ಸಹ ಒಂದು ಕಲೆ. ಶಾಲೆ ಮತ್ತು ಮನೆಗಳಲ್ಲಿ ರುಚಿಶುಚಿಯಾದ ಅಡುಗೆ ತಯಾರಿಕೆಯಲ್ಲಿ ಅಡುಗೆ ಸಿಬ್ಬಂದಿ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.
ಭಾಷೆ ಸತ್ತರೆ ಒಂದು ಜನಾಂಗ ಸತ್ತಂತೆ: ಸಾಹಿತಿ ಮಲ್ಲಿಕಾರ್ಜುನ ಬನ್ನಿ
ಗುಳೇದಗುಡ್ಡ: ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಹಾಗೂ ಸಾವಿತ್ರಿಭಾಯಿ ಪುಲೆ ಶಿಕ್ಷಕಿಯರ ಸಂಘದ ಆಶ್ರಯದಲ್ಲಿ ಪಟ್ಟಣದ ಸರಸ್ವತಿ ವಿದ್ಯಾಮಂದಿರದ ಸಭಾಭವನದಲ್ಲಿ ಶನಿವಾರ ಭಾಗೀರಥಿ ಆಲೂರ ಅವರ ನೆನಪಿನಂಗಳ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಮಲ್ಲಿಕಾರ್ಜುನ ಬನ್ನಿ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ ನಶಿಸಿ ಹೋಗುತ್ತಿಲ್ಲ. ಬದಲಾಗಿಭಾಷೆ ಪ್ರಬುದ್ಧವಾಗಿ ಬೆಳೆಯುತ್ತಿದೆ. ಭಾಷೆ, ಭಾವನೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಸಾಹಿತಿ ಚಂದ್ರಶೇಖರ ಹೆಗಡೆ ಪುಸ್ತಕ ಅವಲೋಕನ ಮಾಡಿದರು.
ಗಣರಾಜ್ಯೋತ್ಸವ ಪೂರ್ವಭಾವಿ ಸಭೆ
ಮಹಾಲಿಂಗಪುರ : ಗಣರಾಜ್ಯೋತ್ಸವ ಪ್ರಯುಕ್ತ ಪುರಸಭೆ ವತಿಯಿಂದ ಶಾಲಾ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಹೇಳಿದರು. ಸ್ಥಳೀಯ ಪುರಸಭಾ ಸಭಾಭವನದಲ್ಲಿ ಕರೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿ,ಎರಡು ದಿನಗಳ ಕಾಲ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜ.25 ರ ಸಂಜೆ ಪುರಸಭಾ ವ್ಯಾಪ್ತಿಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ದೇಶ ಭಕ್ತಿ ಗೀತೆ ಸ್ಪರ್ಧೆ, ಸ್ವಚ್ಛ ಭಾರತ ರೂಪಕಗಳು ಹಾಗೂ 26 ರ ಬೆಳಿಗ್ಗೆ ಧ್ವಜಾರೋಹಣ ಮತ್ತು ಪಥಸಂಚಲನೆ ಜರುಲಿವೆ ಎಂದರು.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 413
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved