ಶಿಲ್ಪಕಲೆಯ ಪರಂಪರೆ ಸಂರಕ್ಷಣೆ ಎಲ್ಲರ ಜವಾಬ್ದಾರಿ: ಡಾ. ಎಂ.ಎಸ್. ಕೃಷ್ಣಮೂರ್ತಿ15 ನೂರು ವರ್ಷಗಳ ಹಿಂದೆ ಬಾದಾಮಿ, ಪಟ್ಟದಕಲ್ಲು, ಐಹೊಳೆಯಂತಹ ಅದ್ಭುತ ಸಮೂಹ ದೇವಾಲಯಗಳಲ್ಲಿ ನಮ್ಮ ದೇಶದ ಸಂಸ್ಕ್ರತಿ, ಪರಂಪರೆಯನ್ನು ಕಲ್ಲಿನಲ್ಲಿ ಕೆತ್ತನೆ ಮೂಲಕ ಚಾಲುಕ್ಯರು ಅಜರಾಮರಗೊಳಿಸಿದ್ದಾರೆ. ಸ್ಮಾರಕಗಳ ಸಂರಕ್ಷಣೆ ಇಲಾಖೆಗೆ ಸೀಮಿತವಲ್ಲ, ಪ್ರತಿಯೊಬ್ಬರ ಜವಾಬ್ದಾರಿ ಎಂದು ಮೈಸೂರು ವಿವಿ ನಿವೃತ್ತ ಪ್ರೊಫೆಸರ್ ಡಾ. ಎಂ.ಎಸ್. ಕೃಷ್ಣಮೂರ್ತಿ ಹೇಳಿದರು.