ಪ್ರಜಾಪ್ರಭುತ್ವ ಉಳಿಯಲು ಮತಕಳ್ಳತನ ನಿಲ್ಲಲಿ: ಆರ್.ಬಿ. ತಿಮ್ಮಾಪೂರದೇಶದಲ್ಲಾಗಲಿ, ರಾಜ್ಯದಲ್ಲಾಗಲಿ ಬಿಜೆಪಿಯವರು ಸ್ವತಂತ್ರವಾಗಿ ಸರ್ಕಾರ ರಚಿಸಿರುವ ಊದಾಹರಣೆ ಇಲ್ಲ. ಸರ್ಕಾರ ರಚನೆಗೆ ಬೇಕಾಗಿರುವಷ್ಠು ಸಂಖ್ಯಾಬಲವನ್ನು ಮತದಾರರು ಯಾವತ್ತೂ ಬಿಜೆಪಿ ಗೆಲ್ಲಿಸಿಲ್ಲ. ಬಿಜೆಪಿಯವರು ಮತ ಕಳ್ಳತನ ಮಾಡಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ್ದಾರೆ. ಮತಕಳ್ಳತನ ನಿಲ್ಲಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಮತದಾರರ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.