ರಾಜ್ಯಕ್ಕೆ ಸುರ್ಜೆವಾಲಾ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿಕಾಂಗ್ರೆಸ್ ಶಾಸಕರು ಅನುದಾನ ಪಡೆಯಬೇಕಾದರೆ, ಸಿಎಂ ಕಡೆ ಮುಖ ಮಾಡ್ತಿಲ್ಲ, ಬದಲಾಗಿ ಸುರ್ಜೆವಾಲಾ ಭೇಟಿ ಮಾಡ್ತೀವಿ ಅಂತಿದಾರೆ. ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುವುದಕ್ಕೆ ಇದು ಸಣ್ಣ ಉದಾಹರಣೆ. ಸಿದ್ದರಾಮಯ್ಯ ಸಾಂವಿಧಾನಿಕ ಹುದ್ದೆ ಅಲಂಕರಿಸಿ ಕುಳಿತಿದ್ದಾರೆ. ಸೂಪರ್ ಸಿಎಂ ಸುರ್ಜೆವಾಲಾ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.