• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂಗಾರು ಹಂಗಾಮು ನೀರು ಪೂರೈಕೆಗೆ ಕ್ರಮ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಅಬಕಾರಿ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆಯಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಡಿಸೆಂಬರ್‌ 9, 2024ರಿಂದ ಮಾರ್ಚ್‌ 23, 2025ರವರೆಗೆ ಕಾಲುವೆ ಜಾಗಕ್ಕೆ ನೀರು ಹರಿಸಲಾಗುತ್ತದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಅಧೀಕ್ಷಕ ಅಭಿಯಂತರ ಗೋವಿಂದ ರಾಠೋಡ ತಿಳಿಸಿದ್ದಾರೆ.
ಮಹಾತ್ಮರ ಆದರ್ಶ ಪಾಲಿಸಿದ್ರೆ ಬದುಕು ಸುಂದರ
ಅಮೀನಗಡ: ಜಗಜ್ಯೋತಿ ಬಸವಣ್ಣನವರು, ಸ್ವಾಮಿ ವಿವೇಕಾನಂದರ ತತ್ವಾದರ್ಶ, ಅನುಭವಾಮೃತಗಳನ್ನು ನಿತ್ಯದ ಬದುಕಿನಲ್ಲಿ ಅಳವಡಿಸಿಕೊಂಡರೆ ಸುಂದರ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರಿನ ನಿವೃತ್ತ ಸಹಾಯಕ ಆಯುಕ್ತ ಕೆ.ಎನ್.ಬಸವರಾಜ ಹೇಳಿದರು.
ಕನಕದಾಸರ ಕಂಚಿನ ಮೂರ್ತಿ ಲೋಕಾರ್ಪಣೆ ಇಂದು
ಇಳಕಲ್ಲ: ಅವಳಿ ತಾಲೂಕಿನ (ಇಳಕಲ್ಲ, ಹುನಗುಂದ) ಹಾಲುಮತ ಸಮಾಜದ ಆಶ್ರಯದಲ್ಲಿ ಗುಡೂರ ಜಿಪಂ, ಸರ್ವ ಸಮುದಾಯಗಳ ಸಹಯೋಗದಲ್ಲಿ ತಾಲೂಕಿನ ಚಿಲ್ಲಾಪುರ ಗ್ರಾಮದಲ್ಲಿ ದಾಸ ಶ್ರೇಷ್ಠ ಕನಕದಾಸರ ೫೩೭ನೇ ಜನ್ಮದಿನೋತ್ಸವ ಹಾಗೂ ಕನಕದಾಸರ ಕಂಚಿನ ಪುತ್ಥಳಿ ಲೋಕಾರ್ಪಣೆ ಸಮಾರಂಭ ನ.22ರಂದು ನಡೆಯಲಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ನೇಕಾರರ ಬೇಡಿಕೆಗೆ ಸ್ಪಂದಿಸದಿದ್ರೆ ಹೋರಾಟ ತೀವ್ರ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ನೇಕಾರರ ದಶಕಗಳ ಕಾಲದ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸದಿದ್ದರೆ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘಟನೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುತ್ತದೆ, ಮುಂದಿನ ಆಗುಹೋಗುಗಳಿಗೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ನೇಕಾರ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ಎಚ್ಚರಿಕೆ ನೀಡಿದರು
ಲೋಕಾಪುರ ಆರೋಗ್ಯ ಕೇಂದ್ರಕ್ಕೆ ಡಿಸಿ ಭೇಟಿ, ಪರಿಶೀಲನೆ
ಕನ್ನಡಪ್ರಭ ವಾರ್ತೆ ಲೋಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರು ಬುಧವಾರ ಭೇಟಿ ನೀಡಿ ರೋಗಿಗಳಿಗೆ ನೀಡಲಾಗುತ್ತಿರುವ ವೈದ್ಯ ಉಪಚಾರ ಪರಿಶೀಲಿಸಿದ್ದಲ್ಲದೆ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ಮತ್ತು ರೋಗಿಗಳಿಗೆ ಸರಿಯಾಗಿ ಉಪಚರಿಸುವಂತೆ ವೈದ್ಯ ಸಿಬ್ಬಂದಿಗೆ ಸೂಚಿಸಿದರು.
30ಕ್ಕೂ ಅನಧಿಕೃತ ಅಧಿಕ ಅಂಗಡಿಗಳ ತೆರವು
ಕನ್ನಡಪ್ರಭ ವಾರ್ತೆ ಲೋಕಾಪುರ ಬೆಳಗಾವಿ-ರಾಯಚೂರು, ಸಂಗಮ-ಸಂಕೇಶ್ವರ ರಾಜ್ಯ ಹೆದ್ದಾರಿ ಪೊಲೀಸ್‌ ಕಚೇರಿಯಿಂದ ಬಾಗಲಕೋಟ ರಸ್ತೆ ಬ್ರಿಡ್ಜ್‌ ಬಳಿಯವರೆಗೆ ಬುಧವಾರ ಬೆಳಂ ಬೆಳಗ್ಗೆ ಜೆಸಿಬಿ ಯಂತ್ರಗಳ ರೌದ್ರನರ್ತನ ಮೊಳಗಿತು. ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳು ಹಾಗೂ ಶೆಡ್‌ಗಳನ್ನು ಇದೆ ವೇಳೆ ತೆರವುಗೊಳಿಸಲಾಯಿತು.
ಮೈಕ್ರೋ ಫೈನಾನ್ಸ್‌ಗಳ ಕಿರುಕಳ ವಿರೋಧಿಸಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಜಮಖಂಡಿ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋಫೈನಾನ್ಸ್‌ಗಳ ಕಿರುಕುಳ ತಪ್ಪಿಸಬೇಕೆಂದು ಉದ್ಯಮಿ ತೌಫಿಕ್‌ ಪಾರ್ಥನಳ್ಳಿ ಆಗ್ರಹಿಸಿದರು. ನಗರದಲ್ಲಿ ಸೋಮವಾರ ವಿವಿಧ ಮಹಿಳಾ ಸಂಘಗಳ ಆಶ್ರಯದಲ್ಲಿ ಫೈನಾನ್ಸ್‌ ಕಂಪನಿಗಳ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆ ಉದ್ದೇಶಿಸಿ ಮಾತನಾಡಿ, ಫೈನಾನ್ಸ್‌ ಹೆಸರಿನಲ್ಲಿ ಸಾಲಗಾರರ ಮನೆಗಳಿಗೆ ನುಗ್ಗಿ ದಾಂಧಲೆ ನಡೆಸುವುದು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡುತ್ತಿರುವ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕು.
ದುರ್ಗುಣ ದೂರವಿಡಲು ಅಧ್ಯಾತ್ಮವೊಂದೇ ಮಾರ್ಗ
ಕನ್ನಡಪ್ರಭ ವಾರ್ತೆ ಅಮೀನಗಡ ಇಂದಿನ ಯುವಕರಲ್ಲಿ ದ್ವೇಷ, ಅಸೂಯೆ, ಕ್ರೋಧ, ಮತ್ಸರಗಳು ಹೆಚ್ಚಾಗುತ್ತಿವೆ. ಶರಣರ ಆದರ್ಶ ತತ್ವಗಳು ಮರೆಯಾಗುತ್ತಿದ್ದು ಈಗ ಮತ್ತೊಮ್ಮೆ ಧಾರ್ಮಿಕ ಕ್ರಾಂತಿ ಆಗಬೇಕಿದೆ. ದುರ್ಗುಣಗಳನ್ನು ದೂರವಿಡಲು ಆಧ್ಯಾತ್ಮಿಕ ದಾರಿಯೊಂದೇ ರಾಜಮಾರ್ಗ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ಮಠದ ಭಕ್ತರೇ ಉತ್ತರಾಧಿಕಾರಿ ಬಂಧುಗಳು
ಕನ್ನಡಪ್ರಭ ವಾರ್ತೆ ಜಮಖಂಡಿ ಯಾವುದೇ ಮಠ, ಪೀಠಕ್ಕೆ ನೂತನವಾಗಿ ಉತ್ತರಾಧಿಕಾರಿಯಾದವರು ಸಂಬಂಧಗಳನ್ನು ಕಡಿದುಕೊಳ್ಳಬೇಕಾಗುತ್ತದೆ. ಸಮಾಜ ಹಾಗೂ ಮಠದ ಭಕ್ತರೇ ಅವರ ಬಂಧುಗಳಾಗುತ್ತಾರೆ ಎಂದು ಗದಗಿನ ತೋಂಟದಾರ್ಯ ಸಂಸ್ಥಾನಮಠದ ಜಗದ್ಗುರು ಡಾ.ತೋಂಟದ ಸಿದ್ದರಾಮ ಮಹಾಸ್ವಾಮೀಜಿ ಹೇಳಿದರು.ನಗರದ ಓಲೇಮಠದಲ್ಲಿ ಲಿಂ.ಡಾ.ಅಭಿನವ ಕುಮಾರಚನ್ನಬಸವ ಮಹಾಸ್ವಾಮಿಗಳ ಸ್ಮರಣೋತ್ಸವ-ನುಡಿ ನಮನ ಹಾಗೂ ನೂತನ ಉತ್ತರಾಧಿಕಾರಿ ನೇಮಕ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.
ವಕ್ಫ್‌ ಸಮಸ್ಯೆ ಪರಿಹಾರಕ್ಕೆ ನಾಳೆ ಹೋರಾಟ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನ.22 ರಂದು ನವನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಣೆಗೆ ಒಳಗಾದ ಸಾರ್ವಜನಿಕರು, ರೈತರು, ಮಠಮಂದಿರಗಳು, ಶಾಲೆಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಅಂದು ಬೆಳಗ್ಗೆಯಿಂದ ಸಂಜೆವರೆಗೆ ವೇದಿಕೆಗೆ ಬರಮಾಡಿಕೊಂಡು ಅಹವಾಲು ಸ್ವೀಕರಿಸಲಾಗುವುದು. ಜತೆಗೆ ಸಮಸ್ಯೆ ಗಂಭೀರತೆಯನ್ನು ಜಿಲ್ಲಾವಾರು ಪರಾಮರ್ಶೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 337
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved