ಕಾಂಗ್ರೆಸ್‌ ಸೇರಿದ ಆರ್‌ಎಸ್‌ಎಸ್‌ ಗಣವೇಷಧಾರಿ

| Published : Apr 11 2024, 08:34 AM IST

Congress Flag
ಕಾಂಗ್ರೆಸ್‌ ಸೇರಿದ ಆರ್‌ಎಸ್‌ಎಸ್‌ ಗಣವೇಷಧಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಬುಧವಾರ ನಡೆದ ಬಾಗಲಕೋಟೆ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರ ಮತಯಾಚನೆ ಸಭೆಯಲ್ಲಿ ನಿಂಗಬಸಪ್ಪ ಬಾಣದ ಅವರು ಆರ್.ಎಸ್.ಎಸ್. ಗಣವೇಶದಲ್ಲಿ ಬಂದ ಕಾಂಗ್ರೆಸ್‌ ಸೇರ್ಪಡೆಯಾದರು.

ನರಗುಂದ : ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಬುಧವಾರ ನಡೆದ ಬಾಗಲಕೋಟೆ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರ ಮತಯಾಚನೆ ಸಭೆಯಲ್ಲಿ ನಿಂಗಬಸಪ್ಪ ಬಾಣದ ಅವರು ಆರ್.ಎಸ್.ಎಸ್. ಗಣವೇಶದಲ್ಲಿ ಬಂದ ಕಾಂಗ್ರೆಸ್‌ ಸೇರ್ಪಡೆಯಾದರು.

ಬಳಿಕ ಮಾತನಾಡಿ ಅವರು, ಕರ್ನಾಟಕ ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ಮಾಡಿದ್ದರಿಂದ ಆ ಪಕ್ಷದಿಂದ ನಾನು ಬೇಸರವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇನೆ ಎಂದು ಹೇಳಿದರು.

ನಾನು 30 ವರ್ಷಗಳಿಂದ ಆರ್.ಎಸ್.ಎಸ್. ಶಾಖೆಯಲ್ಲಿ ದೇಶ, ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ಹೋರಾಟ ಮಾಡಿದ್ದೇನೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ತರಲು ಅಳಿಲು ಸೇವೆ ಸಲ್ಲಿಸಿದ್ದೇನೆ. ಆದರೆ ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಭ್ರಷ್ಟಾಚಾರ ಮತ್ತು ದಬ್ಬಾಳಕೆ ನೋಡಿ ಬೇಸರಗೊಂಡು ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇನೆ ಎಂದು ಹೇಳಿದರು.