ಕನ್ನಡಪ್ರಭ ವಾರ್ತೆ ಬೆಳಗಾವಿ

೨೦೨೬ನೇ ಸಾಲಿನ ಮಾರ್ಚ್-ಏಪ್ರಿಲ್ ಮಾಹೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಬರೆಯಲು ಈಗಾಗಲೇ ಸಾಕಷ್ಟು ಅಧ್ಯಯನ ಮಾಡಿ ಪರೀಕ್ಷೆ ಬರೆಯಲು ಸಿದ್ದರಾಗಿದ್ದಾರೆ. ಈ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಭಯವಿಲ್ಲದೇ, ಒತ್ತಡ ರಹಿತ ಹಾಗೂ ಆಸಕ್ತಿಯಿಂದ ಪರೀಕ್ಷೆಗಳನ್ನು ಬರೆಯಬೇಕು. ಈ ಪರೀಕ್ಷೆಯು ನಿಮ್ಮ ಜೀವನದಲ್ಲಿ ನಿರ್ಣಾಯಕ ಹಂತವಾಗಿರುತ್ತದೆ ಎಂದು ಧಾರವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ್ ಇಟಗಿ ತಿಳಿಸಿದ್ದಾರೆ.

ಪ್ರಕಟಣೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಭಕೋರಿದ ಅವರು, ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ, ಆತ್ಮ ಸ್ಥೆರ್ಯದಿಂದ ಈ ಪರೀಕ್ಷೆಯನ್ನು ಬರೆದು ಯಶಸ್ವಿಯಾಗುವಿರಿ ಎಂದು ವಿಶ್ವಾಸವಿದೆ ಹಾಗೂ ತಮ್ಮ ಮುಂದಿನ ಜೀವನದ ಉಜ್ವಲ ಭವಿಷ್ಯಕ್ಕಾಗಿ ಇದು ಉತ್ತಮ ಅವಕಾಶವಿದ್ದು, ಇದನ್ನು ಸದುಪಯೋಗ ಪಡಿಸಿಕೊಂಡು ಮುನ್ನಡೆಯುವರೆಂದು ಆಶಾಭಾವವಿದೆ. ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಶುಭಹಾರೈಸಿದ್ದಾರೆ.