ಕೃಷ್ಣಮಠದಲ್ಲಿ ಬಲೀಂದ್ರ ಪೂಜೆ

| Published : Nov 13 2023, 01:17 AM IST

ಸಾರಾಂಶ

ಉಡುಪಿ ಕೃಷ್ಣಮಠದಲ್ಲಿ ಬಲೀಂದ್ರ ಪೂಜೆ

ಕನ್ನಡಪ್ರಭ ವಾರ್ತೆ, ಉಡುಪಿ

ದೀಪಾವಳಿಯ ಹಬ್ಬದ ಪ್ರಯುಕ್ತ ಭಾನುವಾರ ಉಡುಪಿ ಶ್ರೀಕೃಷ್ಣಮಠದ ಕನಕಗೋಪುರದ ಮುಂಭಾಗದಲ್ಲಿ ಸಂಪ್ರದಾಯದಂತೆ ಬಲೀಂದ್ರ ಪೂಜೆ ನಡೆಸಲಾಯಿತು. ಇದನ್ನು ನೂರಾರು ಮಂದಿ ಭಕ್ತರು ವೀಕ್ಷಿಸಿದರು.

ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರ ನೇತೃತ್ವದಲ್ಲಿ ಬಲೀಂದ್ರ ಪೂಜೆ,ಧನಲಕ್ಷ್ಮೀ ಪೂಜೆ,ವ್ಯೋಮ ದೀಪ ವಿಶೇಷವಾಗಿ ನೆರವೇರಿತು.