‘ನವೆಂಬರ್ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯವರೇ ಆಗಿರುವ ಬಿ.ನಾಗೇಂದ್ರ ಅವರು ಮತ್ತೆ ಸಂಪುಟ ಸೇರಲಿದ್ದು, ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ. ಅವರು ಬಳ್ಳಾರಿ ಉಸ್ತುವಾರಿ ಸಚಿವರಾಗಲಿದ್ದಾರೆ’ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.