ಕಂಪ್ಲಿಯಲ್ಲಿ ಮಳೆಗೆ ಜನಜೀವನ ಅಸ್ತವ್ಯಸ್ತ, ಧರೆಗುರುಳಿದ ಮರಕಂಪ್ಲಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಮಧ್ಯರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಮರಗಳು ಧರೆಗುರುಳಿವೆ, ವಿದ್ಯುತ್ ಪರಿವರ್ತಕಗಳು ಸುಟ್ಟಿದ್ದು, ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಒಣಗಲು ಹಾಕಿದ್ದ ಬತ್ತಕ್ಕೆ ಹಾನಿಯಾಗಿದೆ.