ಹಂಪಿ ವಿಠ್ಠಲ ಮಂಟಪದಲ್ಲಿನ ಕಲ್ಲಿನ ಕಂಬಗಳನ್ನು ನಿಧಾನವಾಗಿ ತಟ್ಟಿದಾಗ ಸಂಗೀತ ನಾದ ಕೇಳಿ ಬರುವಂತೆಯೇ ಸಂಗೀತ ನಾದ ಮೊಳಗಿಸುವ ಕಲ್ಲುಗಳನ್ನು ಹೊಸಪೇಟೆ ಧರ್ಮಸಾಗರ ಗ್ರಾಮದ ಸಮೀಪದಲ್ಲಿರುವ ದೇವಲಾಪುರದ ಕರೆಕಲ್ಲು ಗುಡ್ಡದಲ್ಲಿ ವಿಜಯನಗರ ತಿರುಗಾಟ ಸಂಶೋಧನಾ ತಂಡ ಪತ್ತೆ ಹಚ್ಚಿದೆ.
ಹಿಂದೆ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ಅಕ್ರಮ, ಈಗ ಘಟಿಕೋತ್ಸವ ಪ್ರಮಾಣ ಪತ್ರ ಹಗರಣ ಹೀಗೆ ಅಕ್ರಮಗಳಿಂದಲೇ ಮುಜುಗರಕ್ಕೀಡಾಗುತ್ತಿರುವ ಬಳ್ಳಾರಿಯ ಶ್ರೀಕೃಷ್ಣ ವಿಜಯನಗರ ವಿಶ್ವವಿದ್ಯಾಲಯ ಶಿಕ್ಷಣದ ಗುಣಮಟ್ಟದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುವಲ್ಲಿ ದೂರ ಉಳಿದ ಆರೋಪ ಎದುರಿಸುತ್ತಲೇ ಇದೆ.