ಜನನಾಯಕ ಕರ್ಪೂರಿ ಠಾಕೂರ್ ಜನ್ಮಶತಮಾನೋತ್ಸವ ಹಾಗೂ ನಾಲ್ಕು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಜ. 13ರಂದು ಸಂಜೆ 5.30ಕ್ಕೆ ನಗರದ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಶರಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಹಿರಿಯ ಚಿಂತಕ ಹಾಗೂ ಲೋಹಿಯಾ ಪ್ರಕಾಶನದ ಮುಖ್ಯಸ್ಥ ಸಿ. ಚನ್ನಬಸವಣ್ಣ ತಿಳಿಸಿದರು.
ಸಮೃದ್ಧ ಭತ್ತದ ಬೆಳೆಗೆ ಹೆಸರಾದ ಗಣಿ ಜಿಲ್ಲೆಯ ರೈತರೀಗ "ಬರದ ಬವಣೆ "ಗೆ ತತ್ತರಿಸಿದ್ದು, ಜಾನುವಾರುಗಳನ್ನು ಮಾರಿಕೊಂಡು ಹಸುಗೂಸುಗಳೊಂದಿಗೆ ಊರು ತೊರೆಯುತ್ತಿದ್ದಾರೆ!
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಜನ್ಮದಿನಕ್ಕೆ ನಗರದಲ್ಲಿ ಬ್ಯಾನರ್ಗಳನ್ನು ಹಾಕಲು ಪಾಲಿಕೆ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಕಾರ್ಯಕರ್ತರು ಪಾಲಿಕೆ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಅನಂತಕುಮಾರ ಹೆಗಡೆ ಅವರು ಸಂಡೂರು ತಾಲೂಕಿನ ದೇವರಕೊಳ್ಳದ ನಾಗಾ ಸಾಧು ದಿಗಂಬರ ಭಾರತಿ ಸ್ವಾಮಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ತೋರಣಗಲ್ಲಿನ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತ ವಸತಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹೆಣ್ಣುಮಕ್ಕಳಿಗೆ ಋತುಚಕ್ರದ ನೈರ್ಮಲ್ಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರ್ನಾಟಕದ ವೈವಿಧ್ಯಮಯ ಕಲೆ ಹಾಗೂ ಸಂಸ್ಕೃತಿಯ ಶ್ರೀಮಂತಿಕೆಯನ್ನು ಪರಿಚಯಿಸಲು ನಗರದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಯುವಜನೋತ್ಸವ ಯಶಸ್ವಿಗೊಂಡಿತು.