• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಯರ್ ಚುನಾವಣೆ ಮುಂದಕ್ಕೆ
ಮಧ್ಯಾಹ್ನ 12.30ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಯಾರೂ ಕೂಡ ನಾಮಪತ್ರ ವಾಪಸ್ ಪಡೆಯದ ಹಿನ್ನೆಲೆ ಚುನಾವಣೆ ನಡೆಯಬೇಕಿತ್ತು. ಚುನಾವಣೆ ಅಧಿಕಾರಿಯಾಗಿದ್ದ ಕಲಬುರಗಿ ಪ್ರಾದೇಶಿಕ ಆಯುಕ್ತರು ಕಾರಣಾಂತರಗಳಿಂದ ಬರದೆ ಇರುವುದರಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ ಅವರು ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿದರು.
ರೈತರಿಗೆ ಶೀಘ್ರವೇ ಬರ ಪರಿಹಾರ: ಕೃಷಿ ಸಚಿವ
ಈಗಾಗಲೇ ರಾಜ್ಯದ ಬರ ಪರಿಸ್ಥಿತಿಯ ಕುರಿತು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ತಾವು ದೆಹಲಿಗೆ ತೆರಳಿ, ಕೇಂದ್ರದ ಕೃಷಿ ಸಚಿವರ ಜತೆ ಸಭೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರವು ಬರ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂಬ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಎನ್. ಚಲುವನಾರಾಯಣಸ್ವಾಮಿ ತಿಳಿಸಿದರು.
ಇಂದು ಹೊಸಪೇಟೆ ಬಂದ್ ಇಲ್ಲ
ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೆ ವಿಜಯನಗರ ಕಾಲುವೆಗಳ ರೈತರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ರೈತ ಮುಖಂಡರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಮೇ ೩೧ರ ವರೆಗೆ ನೀರು ಹರಿಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆ ಹೊಸಪೇಟೆ ಬಂದ್ ಕೈ ಬಿಡಲಾಗಿದೆ
ಕುಡಿವ ನೀರಿಗೆ ಸಮರ್ಪಕ ವಿದ್ಯುತ್ ಸೌಲಭ್ಯ ಒದಗಿಸಿ
ಪಟ್ಟಣದಲ್ಲಿ ೫೬ ಬೋರ್‌ವೆಲ್‌ಗಳು, ೨೧ಶುದ್ಧ ಕುಡಿಯುವ ನೀರಿನ ಘಟಕಗಳಿದ್ದರೂ ಸಾರ್ವಜನಿಕರಿಗೆ ಮಾತ್ರ ನೀರಿನ ಸೌಲಭ್ಯದ ದಾಹ ನೀಗಿಸುವಲ್ಲಿ ಪುರಸಭೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಪಟ್ಟಣಕ್ಕೆ ಎಷ್ಟು ದಿನಗಳಿಗೊಮ್ಮೆ ಕುಡಿಯುವ ನೀರು ಬಿಡುತ್ತಾರೆ ಎಂದು ಸಭೆಯಲ್ಲಿ ಶಾಸಕರು ಕೇಳಿದಾಗ, ಪಿಡಿಒ ರತ್ನಮ್ಮ ೬ ದಿನಗಳಿಗೊಮ್ಮೆ ಬಿಡುತ್ತಾರೆ ಸಾರ್ ಎಂದು ಉತ್ತರಿಸಿದರು. ಫಾರಂ- ೩ ಕೊಡಲು ಫಲಾನುಭವಿಗಳಿಂದ ಹಣ ಪಡೆಯುತ್ತೀರಿ ಎಂದು ಆರೋಪಗಳು ಕೇಳಿಬರುತ್ತಿವೆ. ಜತೆಗೆ ಸಾರ್ವಜನಿಕರು ಫಾರಂಗಾಗಿ ಅಲೆದಾಡುವಂತೆ ಮಾಡುತ್ತೀರಿ ಎಂದು ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ
ಕಳೆದ ಹತ್ತು- ಹದಿನೈದು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರೂ ಉಪನ್ಯಾಸಕರ ಸೇವೆ ಕಾಯಂ ಬಗ್ಗೆ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದರಿಂದ ಅತಿಥಿ ಉಪನ್ಯಾಸಕರಿಗೆ ಆರ್ಥಿಕ ಭದ್ರತೆ ಇಲ್ಲದಂತಾಗಿದೆ. ಇದು ಕುಟುಂಬ ನಿರ್ವಹಣೆಗೂ ಸಮಸ್ಯೆಯಾಗಿ ಪರಿಣಮಿಸಿದೆ. ಅತಿಥಿ ಉಪನ್ಯಾಸಕರಲ್ಲೂ ಪ್ರತಿಭಾನ್ವಿತರು ಹಾಗೂ ಬೋಧನಾ ಕೌಶಲ್ಯವುಳ್ಳವರಿದ್ದಾಗ್ಯೂ ಸೇವೆ ಕಾಯಂಗೊಳಿಸುವ ಕಾಳಜಿಯನ್ನು ಯಾವುದೇ ಸರ್ಕಾರಗಳು ತೆಗೆದುಕೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ವಿಜಯನಗರ ಕಾಲುವೆಗಳಿಗೆ ನೀರು ಹರಿಸಲು ಒತ್ತಾಯಿಸಿ ನಾಳೆ ಹೊಸಪೇಟೆ ಬಂದ್ ಕರೆ
ಹಳ್ಳಿಗಳಿಂದ ನಗರಕ್ಕೆ ವಾಹನಗಳು ಪ್ರವೇಶಿಸದಂತೆ ಅಲ್ಲಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ. ಶಾಲಾ-ಕಾಲೇಜುಗಳು, ಸರ್ಕಾರಿ, ಖಾಸಗಿ ಕಚೇರಿಗಳು ಬಂದ್ ಆಗಲಿವೆ. ವರ್ತಕರು ಕೂಡ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡುವ ವಿಶ್ವಾಸ ಇದೆ ಎಂದರು.
ಪಡಿತರ ವಿತರಣೆ ತೂಕದಲ್ಲಿ ಮೋಸ: ಗ್ರಾಮಸ್ಥರ ಆಕ್ರೋಶ
ಪಡಿತರವನ್ನು ತೂಗುವಾಗ ಡಬ್ಬಿಯಲ್ಲಿ ಪಡಿತರವನ್ನು ತುಂಬಿ ತೂಕಕ್ಕೆ ಹಾಕಿ ಕೊಡುತ್ತಾರೆ. ತೂಗುವ ಡಬ್ಬಿಯೇ ೮೦೦- ೯೦೦ ಗ್ರಾಂ ತೂಗುತ್ತದೆ. ಇದರಿಂದ ಸಾರ್ವಜನಿಕರಿಗೆ ಮೋಸ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು. ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಸೋಮವಾರ ಆಹಾರ ನೀರಿಕ್ಷಕರಾದ ಪ್ರದೀಪ್ ಅವರು ಸ್ಥಳಕ್ಕೆ ತೆರಳಿ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರಲ್ಲದೆ, ಅಲ್ಲಿಯ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಕನ್ನಡ ಶಾಲೆಗಳ ಸರ್ಕಾರ ಬೆಳೆಸಲಿ
ಕೊಟ್ಟೂರು ಸಂಸ್ಥಾನಮಠದಿಂದ ಆಂಧ್ರಪ್ರದೇಶದ ಆಧೋನಿಯಲ್ಲಿ ಗಡಿನಾಡಿನಲ್ಲಿ ಕನ್ನಡ ಶಾಲೆ ತೆರೆಯಲಾಗಿದೆ. ಈ ಶಾಲೆಗೆ ಶ್ರೀಮಠದಿಂದಲೇ ತಿಂಗಳಿಗೆ ₹2 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಈ ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು. ಕನ್ನಡ ಕಟ್ಟುವ ಕಾರ್ಯಕ್ಕೆ ಶ್ರೀಮಠ ಸದಾ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದರು
ಹಂಪಿಯಲ್ಲಿ ಪ್ರವಾಸಿಗರಿಗೆ ಟಿಕೆಟ್‌ ಕಿರಿಕಿರಿ
ಹಂಪಿಯ ಕಮಲ ಮಹಲ್‌, ಕಮಲಾಪುರದ ಬಳಿಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ವಿಜಯ ವಿಠ್ಠಲ ದೇಗುಲದ ಬಳಿ ಟಿಕೆಟ್‌ ಕೌಂಟರ್‌ಗಳನ್ನು ತೆರೆಯಲಾಗಿದೆ. ಈ ಕೌಂಟರ್‌ಗಳ ಬಳಿ ವೀಕೆಂಡ್‌ನಲ್ಲಿ ಹೆಚ್ಚಿನ ಪ್ರವಾಸಿಗರು ಆಗಮಿಸುವುದರಿಂದ ಸರದಿ ಸಾಲಿನಲ್ಲಿ ನಿಂತು ಪ್ರವಾಸಿಗರು ಟಿಕೆಟ್‌ ಪಡೆಯುವ ಸ್ಥಿತಿ ಇರುತ್ತದೆ. ಈ ಕೌಂಟರ್‌ಗಳ ಬಳಿ ಪ್ರವಾಸಿಗರ ಸಂಖ್ಯೆಗಳನ್ನು ಗಮನಿಸಿ ತಲಾ ಒಂದೊಂದು ಹೆಚ್ಚುವರಿ ಟಿಕೆಟ್‌ ಕೌಂಟರ್‌ಗಳನ್ನು ತೆರೆಯಬೇಕು ಎಂಬುದು ಪ್ರವಾಸಿಗರ ಆಗ್ರಹವಾಗಿದೆ.
ಬೆಳಗಾವಿ ಅಧಿವೇಶನ ಸದುಪಯೋಗವಾಗಲಿ: ಹೊರಟ್ಟಿ
ಸರ್ಕಾರ ಅಧಿವೇಶನಕ್ಕೂ ಮುನ್ನ ಸಚಿವರ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸುವ ಮೂಲಕ ಅಧಿವೇಶನದ ಸಮಯದಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳು ಜರುಗದಂತೆ ನೋಡಿಕೊಳ್ಳಬೇಕು. ಸದನದಲ್ಲಿ ಅಜೆಂಡಾದ ಪ್ರಕಾರ ಎಲ್ಲ ಪ್ರಶ್ನೋತ್ತರಗಳು ಮುಗಿದ ಬಳಿಕ ಡಿ. 5 ಮತ್ತು 6ನೇ ತಾರೀಕಿನಂದು ಉತ್ತರ ಕರ್ನಾಟಕ ಭಾಗದ ವಿವಿಧ ಸಮಸ್ಯೆಗಳ ಕುರಿತು ಶಾಸಕರಿಗೆ ಧ್ವನಿ ಎತ್ತಲು ವಿಶೇಷ ಅವಕಾಶ ಕಲ್ಪಿಸಲಾಗುವುದು
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved