ರೈತರಿಗೆ ಬ್ಯಾಂಕ್‌ನಿಂದ ನೋಟಿಸ್‌ ನೀಡಿರುವ ಕುರಿತು ಲೀಡ್‌ ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚೆ: ಸಚಿವ ಮಧು ಹೇಳಿಕೆ

| Published : Nov 09 2023, 01:01 AM IST

ರೈತರಿಗೆ ಬ್ಯಾಂಕ್‌ನಿಂದ ನೋಟಿಸ್‌ ನೀಡಿರುವ ಕುರಿತು ಲೀಡ್‌ ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚೆ: ಸಚಿವ ಮಧು ಹೇಳಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಯಾವುದು ಕಡಿಮೆ ಆಗುತ್ತದೋ ಆ ರೀತಿ ಮರುಪಾವತಿ ಮಾಡಲು ತಿಳಿಸಿದ್ದೇನೆ

ಶಿವಮೊಗ್ಗ: ಬಡ್ಡಿ ಸೇರಿಸಿ ಸಾಲ ಕಟ್ಟುವಂತೆ ಬ್ಯಾಂಕ್‌ನಿಂದ ರೈತರಿಗೆ ನೋಟೀಸ್‌ ಕೊಡಲಾಗುತ್ತಿದೆ. ಈ ಬಗ್ಗೆ ಲೀಡ್ ಬ್ಯಾಂಕ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ತೆಗೆದುಕೊಂಡಿದ್ದು ₹10 ಲಕ್ಷದಷ್ಟು ಸಾಲ, ಬಡ್ಡಿ ಸೇರಿ ₹1 ಕೋಟಿಯಷ್ಟು ಕಟ್ಟಬೇಕು ಅಂತಾ ನೋಟಿಸ್ ಕೊಟ್ಟಿದ್ದಾರೆ. ಒಂದೊಂದು ಬ್ಯಾಂಕಿನ ಸಾಲ ವ್ಯವಸ್ಥೆ ಒಂದೊಂದು ರೀತಿ ಇದೆ. ಯಾವುದು ಕಡಿಮೆ ಆಗುತ್ತದೋ ಆ ರೀತಿ ಮರುಪಾವತಿ ಮಾಡಲು ತಿಳಿಸಿದ್ದೇನೆ ಎಂದು ಹೇಳಿದರು.

ಷಡಾಕ್ಷರಿ ಮೇಲೆ ಹಗರಣ ಆರೋಪ:

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ಸರ್ಕಾರದ ತೀರ್ಮಾನ. ಸರ್ಕಾರದಲ್ಲಿ ವರ್ಗಾವಣೆ ಮಾಡಿದ್ದಾರೆ. ಅದೇನು ದೊಡ್ಡ ವಿಷಯ ಏನಲ್ಲ. ಅವರ ಮೇಲೆ ಹಗರಣಗಳ ಆರೋಪ ಬಂದಿತ್ತು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕಿಯೋನಿಕ್ಸ್ ಹಗರಣ ವಿಚಾರದ ಬಗ್ಗೆ ನನಗೆ ಮಾಹಿತಿ ಗೊತ್ತಿಲ್ಲ ಎಂದರು.

ಎಫ್‌ಡಿಎ ಹಗರಣ ವಿಚಾರದಲ್ಲಿ ಕಾನೂನು ಗೆಲ್ಲಬೇಕು, ನ್ಯಾಯಾಲಯ ಗೆಲ್ಲಬೇಕು ಅಷ್ಟೇ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಅದೇ ನನ್ನ ಅಭಿಪ್ರಾಯ ಎಂದ ಅವರು, ಶಾಸಕ ಬೇಳೂರು ಗೋಪಾಲಕೃಷ್ಣ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲ್ಲ, ಉಸ್ತುವಾರಿ ಸಚಿವರು ಯಾರು ಗೊತ್ತಿಲ್ಲ ಆರೋಪ ವಿಚಾರಕ್ಕೆ ನಾನು ಉತ್ತರ ಕೊಡಲ್ಲ ಎಂದರು.

- - - (-ಫೋಟೋ: ಮಧು ಬಂಗಾರಪ್ಪ)