ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ, ಮಾರಾಟ ಮೇಳದ ಪ್ರಚಾರ ಬ್ಯಾನರ್ ಅನಾವರಣ

| Published : Aug 05 2025, 11:49 PM IST

ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ, ಮಾರಾಟ ಮೇಳದ ಪ್ರಚಾರ ಬ್ಯಾನರ್ ಅನಾವರಣ
Share this Article
  • FB
  • TW
  • Linkdin
  • Email

ಸಾರಾಂಶ

ಕುಶಾಲನಗರದಲ್ಲಿ ನಡೆಯುವ ಬೃಹತ್‌ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರಚಾರ ಬ್ಯಾನರ್‌ ಅನಾವರಣವನ್ನು ಪುರಸಭೆ ಅಧ್ಯಕ್ಷೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಆಶ್ರಯದಲ್ಲಿ ಸೆಪ್ಟೆಂಬರ್ 6 ರಂದು ಕುಶಾಲನಗರದಲ್ಲಿ ನಡೆಯುವ ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರಚಾರ ಬ್ಯಾನರ್ ಅನಾವರಣವನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ನೆರವೇರಿಸಿದರು.

ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಕೆ ಎಸ್ ನಾಗೇಶ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಬೃಹತ್ ಗ್ರಾಹಕ ಮೇಳ ಆಯೋಜಿಸುತ್ತಿದ್ದೇವೆ. ಮೇಳದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು, ಖಾಸಗಿ ಬ್ಯಾಂಕುಗಳು, ಖ್ಯಾತ ಕಂಪೆನಿಗಳ ಕಾರುಗಳು, ಬೈಕ್ ಗಳು, ಹೋಮ್ ಅಪ್ಲೈನ್ಸ್, ವಿಧವಿಧವಾದ ತಿಂಡಿ ತಿನಿಸುಗಳ ಮಳಿಗೆಗಳು, ಡಿಸೈನರ್ ಬಟ್ಟೆಗಳು, ಗೃಹಬಳಕೆ ವಸ್ತುಗಳು ಹಾಗೂ ಇನ್ನಿತರ ಹಲವು ಮಳಿಗೆಗಳು ಇರಲಿವೆ ಎಂದು ಮಾಹಿತಿ ನೀಡಿದರು.ಅನಾವರಣ ಸಂದರ್ಭದಲ್ಲಿ ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಪುರಸಭೆಯ ಮುಖ್ಯಾಧಿಕಾರಿ ಗಿರೀಶ್ ಉಪಸ್ಥಿತರಿದ್ದು, ಮೇಳಕ್ಕೆ ಶುಭ ಹಾರೈಸಿದರು.ಚೇಂಬರ್ ಉಪಾಧ್ಯಕ್ಷ ಎಂ.ಡಿ.ರಂಗಸ್ವಾಮಿ, ಕಾರ್ಯದರ್ಶಿ ಚಿತ್ರ ರಮೇಶ್, ಖಜಾಂಚಿ ಎನ್.ವಿ.ಬಾಬು, ನಿರ್ದೇಶಕರಾದ ಕೆ.ಎನ್.ದೇವರಾಜ್, ರಿಚರ್ಡ್ ಡಿಸೋಜ, ಹೆಚ್.ಎಂ.ಚಂದ್ರು, ಕೆ.ಜೆ.ಸತೀಶ್, ಪಿ.ಎಂ.ಮೋಹನ್, ಪುರಸಭಾ ಸದಸ್ಯರಾದ ಅಮೃತ್ ರಾಜ್, ಸುರೇಶ್ ಇದ್ದರು.