ಬಾನು ಮುಷ್ತಾಕ್ ಗೋವು ತಿನ್ನುವುದಿಲ್ಲ, ಮೂರ್ತಿ ಪೂಜೆ ಒಪ್ಪುತ್ತೇನೆ ಎಂದು ಸ್ಪಷ್ಟಪಡಿಸಲಿ : ಮುತಾಲಿಕ್‌

| N/A | Published : Aug 29 2025, 02:00 AM IST / Updated: Aug 29 2025, 09:53 AM IST

pramod muthalik
ಬಾನು ಮುಷ್ತಾಕ್ ಗೋವು ತಿನ್ನುವುದಿಲ್ಲ, ಮೂರ್ತಿ ಪೂಜೆ ಒಪ್ಪುತ್ತೇನೆ ಎಂದು ಸ್ಪಷ್ಟಪಡಿಸಲಿ : ಮುತಾಲಿಕ್‌
Share this Article
  • FB
  • TW
  • Linkdin
  • Email

ಸಾರಾಂಶ

ಬಾನು ಮುಷ್ತಾಕ್ ಅವರು ಸಾಹಿತ್ಯದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಸಾಕಷ್ಟು ಕೊಡುಗೆ ನೀಡಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ ನಾಡದೇವತೆ, ನಾಡಹಬ್ಬದ ಚಾಲನೆಗೆ ಕರೆಯುತ್ತಿರುವುದು ಸರಿಯಲ್ಲ 

ಹುಬ್ಬಳ್ಳಿ: ಗೋಭಕ್ಷಕ ಸಮಾಜದಿಂದ ಬಂದಿರುವ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡಿಸಲು ಹೊರಟಿರುವುದು ಖಂಡನೀಯ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. 

ಜತೆಗೆ ಗೋವುಗಳನ್ನು ತಿನ್ನುವುದಿಲ್ಲ, ಮೂರ್ತಿ ಪೂಜೆ ಒಪ್ಪುತ್ತೇನೆ ಎಂದು ಸ್ಪಷ್ಟಪಡಿಸಿ ಉದ್ಘಾಟನೆ ಮಾಡಲಿ ನಾವೂ ಒಪ್ಪಿಕೊಳ್ಳುತ್ತೇವೆ ಎಂದರು. ಅಲ್ಲದೇ, ಚಾಮುಂಡಿ ಬೆಟ್ಟ ಯಾವಾಗಿದ್ದರೂ ಹಿಂದೂಗಳದ್ದೇ. ಇದನ್ನು ಡಿಸಿಎಂ ಡಿ.ಕೆ. ಶಿವಕುಮಾರ ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.

ಇಲ್ಲಿನ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಬಾನು ಮುಷ್ತಾಕ್ ಅವರು ಸಾಹಿತ್ಯದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಸಾಕಷ್ಟು ಕೊಡುಗೆ ನೀಡಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ ನಾಡದೇವತೆ, ನಾಡಹಬ್ಬದ ಚಾಲನೆಗೆ ಕರೆಯುತ್ತಿರುವುದು ಸರಿಯಲ್ಲ. ಹಿಂದೂಗಳ ಹಬ್ಬ. ಆದರೆ, ಬಾನು ಮುಷ್ತಾಕ್ ಅವರು ಪ್ರತಿನಿಧಿಸುವ ಸಮಾಜ ಮೂರ್ತಿ ಪೂಜೆಯಲ್ಲಿ ನಂಬಿಕೆ ಇಟ್ಟಿಲ್ಲ. ಗೋವುಗಳನ್ನು ತಿನ್ನುತ್ತಾರೆ. ನಮ್ಮಲ್ಲಿ ಚಾಮುಂಡಿ ದೇವಿಗೆ ಅರಿಷಿಣ, ಕುಂಕುಮ ಹಚ್ಚಿ ಪೂಜೆ ಮಾಡುತ್ತೇವೆ. ಅದಾವುದನ್ನು ಅವರು ಮಾಡಲ್ಲ. ಅವರು ಗೋವುಗಳನ್ನು ತಿನ್ನುವುದಿಲ್ಲ. ಮೂರ್ತಿ ಪೂಜೆಯಲ್ಲಿ ನಂಬಿಕೆ ಇದೆ ಎಂಬುದನ್ನು ಸ್ಪಷ್ಟಪಡಿಸಲಿ. ಆಮೇಲೆ ಉದ್ಘಾಟನೆ ಮಾಡಲಿ. ಆಗ ನಾವು ಒಪ್ಪುತ್ತೇವೆ ಎಂದರು.

ಇನ್ನು ಚಾಮುಂಡಿ ಬೆಟ್ಟ ಹಿಂದೂಗಳಿಗಷ್ಟೇ ಸೇರಿದ್ದಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ನೀಡಿರುವ ಹೇಳಿಕೆಗೆ ತೀವ್ರ ಖಂಡನೀಯ. ಚಾಮುಂಡಿ ಬೆಟ್ಟ ಯಾವಾಗಿದ್ದರೂ ಹಿಂದೂಗಳದ್ದೆ. ಹೆಸರಲ್ಲೇ ನಮ್ಮ ದೇವಿಯ ಹೆಸರಿದೆ ಎಂದರು.

ಗಣೇಶನ ಹಬ್ಬಕ್ಕೆ ಬಗೆ ಬಗೆಯ ಕಂಡಿಷನ್‌ ಹಾಕುತ್ತಿರುವುದು ಸರಿಯಲ್ಲ. ಬೇರೆ ಸಮುದಾಯಗಳ ಹಬ್ಬಗಳಿಗೆ ಇಲ್ಲದ ಕಂಡಿಷನ್‌ಗಳು ಹಿಂದೂಗಳ ಹಬ್ಬಕ್ಕೆ ಏಕೆ ಎಂದು ಪ್ರಶ್ನಿಸಿದರು.

Read more Articles on